38.6 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕರುಣಾಶ್ರಯ ಸೇವಾ ಟ್ರಸ್ಟ್‌ನಿಂದ ವಾರದ ಒಂದು ದಿನದ ಸೇವಾ ಕಾರ್ಯಕ್ರಮ: ಗುಂಡೂರಿ ಶ್ರೀ ಗುರು ಚೈತನ್ಯ ಸೇವಾಶ್ರಮಕ್ಕೆ ದಿನಸಿ ಸಾಮಾಗ್ರಿ ವಿತರಣೆ

ಬೆಳ್ತಂಗಡಿ: ಕರ್ನಾಟಕ ರತ್ನ ಡಾ. ಪುನೀತ್ ರಾಜಕುಮಾರ್ ಅವರ ನೆನಪಿನಲ್ಲಿ ಅವರ ಆದರ್ಶಪ್ರಾಯವಾದ ಜೀವಮಾನದ ಸಲುವಾಗಿ ಕರುಣಾಶ್ರಯ ಸೇವಾ ಟ್ರಸ್ಟ್, ಮಂಗಳೂರು ವಾರದ ಒಂದು ದಿನದ ಸೇವಾ ಕಾರ್ಯಕ್ರಮ ಸೇವೆಯ ಸಾಥ್ ಸೇವಾ ಯೋಜನೆಯನ್ನು ಹಮ್ಮಿಕೊಳ್ಳಲಾಗಿತ್ತು.

ಮೊದಲನೇ ಸೇವಾ ಕಾರ್ಯಕ್ರಮವಾಗಿ ಬಾಲ್ಯದಲ್ಲಿ ಆದ ಆಚಾತುರ್ಯದಿಂದ ಕೈ ಕಳೆದುಕೊಂಡು ಅಂಗವೈಕಲ್ಯವನ್ನ ಒಂದು ವೈಕಲ್ಯವೇ ಅಲ್ಲ ಎಂದು ತನ್ನ ಬದುಕಿನುದ್ದಕ್ಕೂ ಹೋರಾಟದ ಜೀವನದಿಂದ ಆದರ್ಶರಾದ ಸಂಧ್ಯಾ ಸುವರ್ಣ ಇವರನ್ನ ಗೌರವಿಸುವ ಮೂಲಕ ಮತ್ತು ಎರಡನೇ ಸೇವಾ ಕಾರ್ಯಕ್ರಮವಾಗಿ ಹೊನ್ನಯ್ಯ ಅವರ ನೇತೃತ್ವದಲ್ಲಿ ನಡೆಯುತ್ತಿರುವ ವೃದ್ಧರ ಸೇವಾಶ್ರಮ ಶ್ರೀ ಗುರು ಚೈತನ್ಯ ಸೇವಾಶ್ರಮ ಗುಂಡೂರಿಗೆ ದಿನಸಿ ವಸ್ತುಗಳನ್ನ ನೀಡುವ ಮುಖೇನ ನಡೆಸಲಾಯಿತು.

ಈ ಸಂದರ್ಭದಲ್ಲಿ ಅಧ್ಯಕ್ಷ ಬಾಲಕೃಷ್ಣ ದೇವಾಡಿಗ, ಉಪಾಧ್ಯಕ್ಷ ಪ್ರಮೋದ್ ಶೆಟ್ಟಿ, ಕೋಶಾಧಿಕಾರಿ ನಿತಿನ್ ವಿ ಶೆಟ್ಟಿ, ಕಾರ್ಯದರ್ಶಿ ಸುಮಲತಾ, ಜೊತೆ ಕಾರ್ಯದರ್ಶಿ ಪ್ರಶಾಂತ್, ಟ್ರಸ್ಟಿಗಳಾದ ಆಶಾ ಡಿ ಸುಧೀರ್, ಯಶವಂತ್, ಸೋಮನಾಥ, ಸುಶ್ಮೀತಾ ಭಾಗವಹಿಸಿದ್ದರು.

Related posts

ಪಂಚಾಯತು ನಿರ್ಣಯ ಅನುಷ್ಠಾನದಲ್ಲಿ ವಿಳಂಬ; ಕೊಕ್ಕಡ ಗ್ರಾಮ ಪಂಚಾಯತ್ ಸಾಮಾನ್ಯ ಸಭೆ ರದ್ದು

Suddi Udaya

ಉಜಿರೆ ಶ್ರೀ ಸಾಯಿ ಕ್ರಿಕೆಟರ್ಸ್ ಸಹಯೋಗದೊಂದಿಗೆ ಲೀಗ್ ಮಾದರಿಯ ಓವರ್ ಆರ್ಮ್ ಕ್ರಿಕೆಟ್ ಪಂದ್ಯಾಟ

Suddi Udaya

ತೆಕ್ಕಾರು: ಹೊಸಮೊಗ್ರು ಹೇಮಲತಾ ಕೊಂಡೆ ನಿಧನ

Suddi Udaya

ಶಿವರಾತ್ರಿ: ಧರ್ಮಸ್ಥಳದಲ್ಲಿ ಪಾದಯಾತ್ರಿಗಳಿಗಾಗಿ ಸ್ವಾಗತ ಕಾರ್ಯಾಲಯ ಉದ್ಘಾಟನೆ

Suddi Udaya

ಉಜಿರೆ: ರಾಜಾರಾಂ ಶೋ ರೂಂ ನಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ವಿಶೇಷ ಡಿಸ್ಕೌಂಟ್ ಸೇಲ್

Suddi Udaya

ಫೆ.9: ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್ ನೇತೃತ್ವ ಯುವಸಿರಿ ರೈತ ಭಾರತದ ಐಸಿರಿ ವಿಶಿಷ್ಟ ಕಾರ್ಯಕ್ರಮ; ಬೆಳಾಲು ಅನಂತೋಡಿಯಲ್ಲಿ 1000 ಕ್ಕೂ ವಿಕ್ಕಿ ಯುವ ಜನತೆಯಿಂದ ಭತ್ತ ಕಟಾವು

Suddi Udaya
error: Content is protected !!