26.7 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕರುಣಾಶ್ರಯ ಸೇವಾ ಟ್ರಸ್ಟ್‌ನಿಂದ ವಾರದ ಒಂದು ದಿನದ ಸೇವಾ ಕಾರ್ಯಕ್ರಮ: ಗುಂಡೂರಿ ಶ್ರೀ ಗುರು ಚೈತನ್ಯ ಸೇವಾಶ್ರಮಕ್ಕೆ ದಿನಸಿ ಸಾಮಾಗ್ರಿ ವಿತರಣೆ

ಬೆಳ್ತಂಗಡಿ: ಕರ್ನಾಟಕ ರತ್ನ ಡಾ. ಪುನೀತ್ ರಾಜಕುಮಾರ್ ಅವರ ನೆನಪಿನಲ್ಲಿ ಅವರ ಆದರ್ಶಪ್ರಾಯವಾದ ಜೀವಮಾನದ ಸಲುವಾಗಿ ಕರುಣಾಶ್ರಯ ಸೇವಾ ಟ್ರಸ್ಟ್, ಮಂಗಳೂರು ವಾರದ ಒಂದು ದಿನದ ಸೇವಾ ಕಾರ್ಯಕ್ರಮ ಸೇವೆಯ ಸಾಥ್ ಸೇವಾ ಯೋಜನೆಯನ್ನು ಹಮ್ಮಿಕೊಳ್ಳಲಾಗಿತ್ತು.

ಮೊದಲನೇ ಸೇವಾ ಕಾರ್ಯಕ್ರಮವಾಗಿ ಬಾಲ್ಯದಲ್ಲಿ ಆದ ಆಚಾತುರ್ಯದಿಂದ ಕೈ ಕಳೆದುಕೊಂಡು ಅಂಗವೈಕಲ್ಯವನ್ನ ಒಂದು ವೈಕಲ್ಯವೇ ಅಲ್ಲ ಎಂದು ತನ್ನ ಬದುಕಿನುದ್ದಕ್ಕೂ ಹೋರಾಟದ ಜೀವನದಿಂದ ಆದರ್ಶರಾದ ಸಂಧ್ಯಾ ಸುವರ್ಣ ಇವರನ್ನ ಗೌರವಿಸುವ ಮೂಲಕ ಮತ್ತು ಎರಡನೇ ಸೇವಾ ಕಾರ್ಯಕ್ರಮವಾಗಿ ಹೊನ್ನಯ್ಯ ಅವರ ನೇತೃತ್ವದಲ್ಲಿ ನಡೆಯುತ್ತಿರುವ ವೃದ್ಧರ ಸೇವಾಶ್ರಮ ಶ್ರೀ ಗುರು ಚೈತನ್ಯ ಸೇವಾಶ್ರಮ ಗುಂಡೂರಿಗೆ ದಿನಸಿ ವಸ್ತುಗಳನ್ನ ನೀಡುವ ಮುಖೇನ ನಡೆಸಲಾಯಿತು.

ಈ ಸಂದರ್ಭದಲ್ಲಿ ಅಧ್ಯಕ್ಷ ಬಾಲಕೃಷ್ಣ ದೇವಾಡಿಗ, ಉಪಾಧ್ಯಕ್ಷ ಪ್ರಮೋದ್ ಶೆಟ್ಟಿ, ಕೋಶಾಧಿಕಾರಿ ನಿತಿನ್ ವಿ ಶೆಟ್ಟಿ, ಕಾರ್ಯದರ್ಶಿ ಸುಮಲತಾ, ಜೊತೆ ಕಾರ್ಯದರ್ಶಿ ಪ್ರಶಾಂತ್, ಟ್ರಸ್ಟಿಗಳಾದ ಆಶಾ ಡಿ ಸುಧೀರ್, ಯಶವಂತ್, ಸೋಮನಾಥ, ಸುಶ್ಮೀತಾ ಭಾಗವಹಿಸಿದ್ದರು.

Related posts

ಧರ್ಮಸ್ಥಳ: ಪ್ರಾ.ಕೃ.ಪ.ಸ. ಸಂಘದ ವತಿಯಿಂದ ಪೊಸೋಳಿಕೆ ಅಂಗನವಾಡಿ ಕೇಂದ್ರಕ್ಕೆ ದೂರದರ್ಶನ ಕೊಡುಗೆ

Suddi Udaya

ಮಹಮ್ಮಾಯಿ ಕಟ್ಟೆ ಫ್ರೆಂಡ್ಸ್ ಸೋಣoದೂರು ಪಣಕಜೆ ಇದರ ಆಶ್ರಯದಲ್ಲಿ ಪುರುಷರ ಅಂತರ್ ಜಿಲ್ಲಾ ಮಟ್ಟದ ಮುಕ್ತ ಕಬ್ಬಡಿ ಪಂದ್ಯಾಟ

Suddi Udaya

ಸ್ನೇಹಜ್ಯೋತಿ ಮಹಿಳಾ ಒಕ್ಕೂಟ ಬೆಳ್ತಂಗಡಿ ವತಿಯಿಂದ ಚಿರತೆ ಹಾವಳಿ ಬಗ್ಗೆ ಅರಣ್ಯ ಸಚಿವರಿಗೆ ಮನವಿ

Suddi Udaya

ಬೆಳ್ತಂಗಡಿ: ಪವರ್ ಆನ್ ನಲ್ಲಿ ದೀಪಾವಳಿ ಹಬ್ಬಗಳ ಪ್ರಯುಕ್ತ ಮೆಗಾ ಸೇಲ್: ಪ್ರತಿ ಖರೀದಿಯ ಮೇಲೆ ಶೇ.10 ರಿಂದ 50 ರಷ್ಟು ರಿಯಾಯಿತಿ,

Suddi Udaya

ಏ.18: ಯ೦ಗ್‌ ಬಾಯ್ಸ್ ಸವಣಾಲು ಬೆಳ್ತಂಗಡಿ ತಾಲೂಕು ಇದರ ಆಶ್ರಯದಲ್ಲಿ 2ನೇ ವರ್ಷದ “ರಾಜ್ಯಮಟ್ಟದ ಮ್ಯಾಟ್ ಕಬಡ್ಡಿ ಪಂದ್ಯಾಟ”

Suddi Udaya

ಭವಿಷ್ಯದ ಚಿತ್ರರಂಗದ ಭರವಸೆಯ ಕಲಾವಿದ ರಾಜ್ ಚರಣ್ ಬ್ರಹ್ಮಾವರ್

Suddi Udaya
error: Content is protected !!