25.5 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕರುಣಾಶ್ರಯ ಸೇವಾ ಟ್ರಸ್ಟ್‌ನಿಂದ ವಾರದ ಒಂದು ದಿನದ ಸೇವಾ ಕಾರ್ಯಕ್ರಮ: ಗುಂಡೂರಿ ಶ್ರೀ ಗುರು ಚೈತನ್ಯ ಸೇವಾಶ್ರಮಕ್ಕೆ ದಿನಸಿ ಸಾಮಾಗ್ರಿ ವಿತರಣೆ

ಬೆಳ್ತಂಗಡಿ: ಕರ್ನಾಟಕ ರತ್ನ ಡಾ. ಪುನೀತ್ ರಾಜಕುಮಾರ್ ಅವರ ನೆನಪಿನಲ್ಲಿ ಅವರ ಆದರ್ಶಪ್ರಾಯವಾದ ಜೀವಮಾನದ ಸಲುವಾಗಿ ಕರುಣಾಶ್ರಯ ಸೇವಾ ಟ್ರಸ್ಟ್, ಮಂಗಳೂರು ವಾರದ ಒಂದು ದಿನದ ಸೇವಾ ಕಾರ್ಯಕ್ರಮ ಸೇವೆಯ ಸಾಥ್ ಸೇವಾ ಯೋಜನೆಯನ್ನು ಹಮ್ಮಿಕೊಳ್ಳಲಾಗಿತ್ತು.

ಮೊದಲನೇ ಸೇವಾ ಕಾರ್ಯಕ್ರಮವಾಗಿ ಬಾಲ್ಯದಲ್ಲಿ ಆದ ಆಚಾತುರ್ಯದಿಂದ ಕೈ ಕಳೆದುಕೊಂಡು ಅಂಗವೈಕಲ್ಯವನ್ನ ಒಂದು ವೈಕಲ್ಯವೇ ಅಲ್ಲ ಎಂದು ತನ್ನ ಬದುಕಿನುದ್ದಕ್ಕೂ ಹೋರಾಟದ ಜೀವನದಿಂದ ಆದರ್ಶರಾದ ಸಂಧ್ಯಾ ಸುವರ್ಣ ಇವರನ್ನ ಗೌರವಿಸುವ ಮೂಲಕ ಮತ್ತು ಎರಡನೇ ಸೇವಾ ಕಾರ್ಯಕ್ರಮವಾಗಿ ಹೊನ್ನಯ್ಯ ಅವರ ನೇತೃತ್ವದಲ್ಲಿ ನಡೆಯುತ್ತಿರುವ ವೃದ್ಧರ ಸೇವಾಶ್ರಮ ಶ್ರೀ ಗುರು ಚೈತನ್ಯ ಸೇವಾಶ್ರಮ ಗುಂಡೂರಿಗೆ ದಿನಸಿ ವಸ್ತುಗಳನ್ನ ನೀಡುವ ಮುಖೇನ ನಡೆಸಲಾಯಿತು.

ಈ ಸಂದರ್ಭದಲ್ಲಿ ಅಧ್ಯಕ್ಷ ಬಾಲಕೃಷ್ಣ ದೇವಾಡಿಗ, ಉಪಾಧ್ಯಕ್ಷ ಪ್ರಮೋದ್ ಶೆಟ್ಟಿ, ಕೋಶಾಧಿಕಾರಿ ನಿತಿನ್ ವಿ ಶೆಟ್ಟಿ, ಕಾರ್ಯದರ್ಶಿ ಸುಮಲತಾ, ಜೊತೆ ಕಾರ್ಯದರ್ಶಿ ಪ್ರಶಾಂತ್, ಟ್ರಸ್ಟಿಗಳಾದ ಆಶಾ ಡಿ ಸುಧೀರ್, ಯಶವಂತ್, ಸೋಮನಾಥ, ಸುಶ್ಮೀತಾ ಭಾಗವಹಿಸಿದ್ದರು.

Related posts

ಮೇ 17: ವೇಣೂರುನಲ್ಲಿ ಬೃಹತ್ ಉಚಿತ ಆರೋಗ್ಯ ತಪಾಸಣಾ ಶಿಬಿರ

Suddi Udaya

ತಾಲೂಕು ಮಟ್ಟದ ಮಾದರಿ ತಯಾರಿ ಸ್ಪರ್ಧೆ: ಬೆಳ್ತಂಗಡಿ ಎಸ್. ಡಿ. ಎಂ. ಆಂ.ಮಾ. ಶಾಲೆಯ ವಿದ್ಯಾರ್ಥಿ ಪ್ರತೀಕ್ ವಿ. ಶೆಟ್ಟಿ ಪ್ರಥಮ ಸ್ಥಾನ

Suddi Udaya

ಬೆಳ್ತಂಗಡಿ ಜ್ಯೋತಿ ಹಾಸ್ಪಿಟಲ್ ವತಿಯಿಂದ ನಾರಾವಿಯ ಕುತ್ಲೂರಿನಲ್ಲಿ ಕ್ಯಾನ್ಸರ್ ತಪಾಸಣಾ ಶಿಬಿರ

Suddi Udaya

ಎಸ್ ಡಿ ಎಮ್ ಕಾಲೇಜಿನಲ್ಲಿ ವಾಣಿಜ್ಯ “ವ್ಯವಹಾರ “ಹಬ್ಬ

Suddi Udaya

ವಾಣಿ ಪದವಿಪೂರ್ವ ಕಾಲೇಜಿನಲ್ಲಿ ಎಸ್ ಎಲ್ ಭೈರಪ್ಪ ಅವರಿಗೆ ನುಡಿನಮನ

Suddi Udaya

ಸಂತ ತೆರೇಸಾ ಸಂಯುಕ್ತ ಪದವಿ ಪೂರ್ವ ಕಾಲೇಜಿನಲ್ಲಿ ಇನ್ವೆಸ್ಟಿಚರ್ ಸಮಾರಂಭ

Suddi Udaya
error: Content is protected !!