25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಎಸ್‌ಡಿಎಂ ಪಿಯು ಕಾಲೇಜಿನಲ್ಲಿ ಸಂಸ್ಕೃತ ಭಾಷಾ ಉಪನ್ಯಾಸಕರ ಕಾರ್ಯಾಗಾರ

ಸಂಸ್ಕೃತ ಕೇವಲ ಭಾಷೆಯಲ್ಲ ಸಂಸ್ಕೃತಿ ಹಾಗೂ ಜ್ಞಾನದ ಭಂಡಾರ – ಡಾ. ಎಸ್. ಸತೀಶ್ಚಂದ್ರ

ಸಂಸ್ಕೃತ ಶಾಸ್ತ್ರೀಯ ಭಾಷೆ ಮಾತ್ರವಲ್ಲದೆ ಜನ ಸಾಮಾನ್ಯರಿಗೂ ಪ್ರಿಯವಾದ ಭಾಷೆಯಾಗಿದೆ. ಭಾಸ, ವ್ಯಾಸ, ಕಾಳಿದಾಸರಿಗೆ ಸರಿಗಟ್ಟುವ ಕವಿಗಳಿಲ್ಲ. ಋಷಿ ಮುನಿಗಳು ಕವಿಗಳು ಬೆಳೆಸಿದ ಸಂಸ್ಕೃತ ಭಾಷೆಯು ಮುಂದಿನ ಜನಾಂಗಕ್ಕೂ ದಾಟಬೇಕು. ಸಂಸ್ಕೃತ ಕೇವಲ ಭಾಷೆಯಲ್ಲ ಸಂಸ್ಕೃತಿ ಹಾಗೂ ಜ್ಞಾನದ ಭಂಡಾರ ಎಂದು ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಾ. ಎಸ್. ಸತೀಶ್ಚಂದ್ರ ಅವರು ಹೇಳಿದರು.

ಅವರು ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನಲ್ಲಿ ನಡೆದ ದ.ಕ. ಪ.ಪೂ. ಕಾಲೇಜುಗಳ ಸಂಸ್ಕೃತ ಭಾಷಾ ಉಪನ್ಯಾಸಕರ ಸಂಘ, ದ.ಕ. ಜಿಲ್ಲಾ ಪ.ಪೂ. ಕಾಲೇಜುಗಳ ಪ್ರಾಂಶುಪಾಲರ ಸಂಘ ಹಾಗೂ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜು ಇವುಗಳ ಸಹಯೋಗದಲ್ಲಿ ನಡೆದ ದ.ಕ. ಜಿಲ್ಲಾ ಪ.ಪೂ. ಕಾಲೇಜುಗಳ ಸಂಸ್ಕೃತ ಭಾಷಾ ಉಪನ್ಯಾಸಕರಿಗೆ ನಡೆದ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದರು.

ಅಧ್ಯಕ್ಷತೆ ವಹಿಸಿದ್ದ ದ.ಕ. ಜಿಲ್ಲಾ ಪ.ಪೂ. ಕಾಲೇಜುಗಳ ಪ್ರಾಂಶುಪಾಲರ ಸಂಘದ ಉಪಾಧ್ಯಕ್ಷ ಹಾಗೂ ಬೆಳ್ತಂಗಡಿ ಸ.ಪ.ಪೂ ಕಾಲೇಜಿನ ಪ್ರಾಚಾರ್ಯ ಸುಕುಮಾರ ಜೈನ್ ಅವರು ಸಂಸ್ಕೃತ ಭಾಷೆ ಎಲ್ಲ ಭಾಷೆಗಳ ತಳಹದಿ. ವಿದ್ಯಾರ್ಥಿಗಳ ಸಂಸ್ಕಾರ ಬೆಳೆಸುವಲ್ಲಿ ಭಾಷೆಗಳ ಕೊಡುಗೆ ಅಪಾರ ಎಂದು ನುಡಿದರು.

ವೇದಿಕೆಯಲ್ಲಿ ಉಜಿರೆಯ ಎಸ್ ಡಿ ಎಂ ಪದವಿಪೂರ್ವ ಕಾಲೇಜಿನ ಪ್ರಾಚಾರ್ಯ ಪ್ರಮೋದ್ ಕುಮಾರ್ ಬಿ , ಎಸ್ ಡಿ ಎಂ ಪದವಿ ಕಾಲೇಜಿನ ಕಲಾ ವಿಭಾಗದ ಡೀನ್ ಡಾ.ಶ್ರೀಧರ ಭಟ್ , ಶೃಂಗೇರಿಯ ಸರಕಾರಿ ಪದವಿಪೂರ್ವ ಕಾಲೇಜಿನ ಸಂಸ್ಕೃತ ಭಾಷಾ ಉಪನ್ಯಾಸಕ ಡಾ. ಮಹೇಶ ಕಾಕತ್ಕರ್ ಅಭ್ಯಾಗತರಾಗಿ ಮಾತನಾಡಿದರು. ಎಸ್ ಡಿ ಎಂ ಪ.ಪೂ ಕಾಲೇಜಿನ ಉಪ ಪ್ರಾಚಾರ್ಯ ಡಾ. ರಾಜೇಶ್ ಬಿ ಇವರು ಶುಭಾಶಂಸನೆ ಮಾಡಿದರು.

ದಕ್ಷಿಣಕನ್ನಡ ಜಿಲ್ಲಾ ಪದವಿಪೂರ್ವ ಕಾಲೇಜುಗಳ ಸಂಸ್ಕೃತ ಭಾಷಾ ಉಪನ್ಯಾಸಕರ ಸಂಘದ ಅಧ್ಯಕ್ಷ ರಮೇಶ್ ಆಚಾರ್ಯ ಸ್ವಾಗತಿಸಿದರು , ಕಾರ್ಯದರ್ಶಿ ಡಾ.ಮಧುಕೇಶ್ವರ ಶಾಸ್ತ್ರಿ ವಂದಿಸಿದರು. ಎಸ್ ಡಿ ಎಂ ಪದವಿಪೂರ್ವ ಕಾಲೇಜಿನ ಸಂಸ್ಕೃತ ಭಾಷಾ ವಿದ್ಯಾರ್ಥಿಗಳು ಪ್ರಾರ್ಥಿಸಿದರು. ಉಜಿರೆಯ ಎಸ್ ಡಿ ಎಂ ಸನಿವಾಸ ಪ.ಪೂ ಕಾಲೇಜಿನ ಸಂಸ್ಕೃತ ಭಾಷಾ ಉಪನ್ಯಾಸಕ ಮಹೇಶ್ ಭಟ್ ಪರಿಚಯಿಸಿದರು. ಉಜಿರೆಯ ಎಸ್ ಡಿ ಎಂ ಪದವಿಪೂರ್ವ ಕಾಲೇಜಿನ ಸಂಸ್ಕೃತ ಭಾಷಾ ವಿಭಾಗದ ಮುಖ್ಯಸ್ಥ ಡಾ.ಪ್ರಸನ್ನಕುಮಾರ ಐತಾಳ್ ನಿರೂಪಿಸಿದರು.

Related posts

ಕಣಿಯೂರು ನಿವೃತ್ತ ಶಿಕ್ಷಕಿ ಹರ್ಷಲಾರವರಿಗೆ ಕ್ಲಸ್ಟರ್ ವತಿಯಿಂದ ಸನ್ಮಾನ

Suddi Udaya

ಕ್ರಿಕೆಟ್ ಆಟಗಾರ ಯೋಗೀಶ್ ಶೆಟ್ಟಿ ಸಂಬೋಳ್ಯ ನಿಧನ

Suddi Udaya

ಆಮಂತ್ರಣ ಸಾಂಸ್ಕೃತಿಕ ಸಾಹಿತ್ಯ ವೇದಿಕೆಯ ನೂತನ ರಾಜ್ಯ ಪ್ರತಿನಿಧಿಯಾಗಿ ಭಾರತಿ ಪರ್ಕಳ ಆಯ್ಕೆ

Suddi Udaya

ಮೂರು ಪಿಕಪ್ ವಾಹನದಲ್ಲಿ ಹಿಂಸಾತ್ಮಕವಾಗಿ ಜಾನುವಾರು ಸಾಗಾಟದ ಪ್ರಕರಣ ಪತ್ತೆ: ಪಿಕಪ್ ಸಹಿತ ವಾಹನದಲ್ಲಿದ್ದ 6 ದನ, 2 ಗಂಡು ಕರುಗಳು ಸೇರಿ ಒಟ್ಟು 8 ಜಾನುವಾರು ವಶ

Suddi Udaya

ಲಾಯಿಲ ಗ್ರಾಮ ಪಂಚಾಯತ್ ನಲ್ಲಿ ಮಕ್ಕಳ ಗ್ರಾಮ ಸಭೆ

Suddi Udaya

ಬೆಳ್ತಂಗಡಿ ಸರಕಾರಿ ಪ.ಪೂ. ಕಾಲೇಜಿಗೆ ಶೇ. 96.36 ಫಲಿತಾಂಶ

Suddi Udaya
error: Content is protected !!