July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಾಲಾ ಕಾಲೇಜು

ನಡ ಸರಕಾರಿ ಪ್ರೌಢಶಾಲೆಯಲ್ಲಿ ಪ್ರತಿಭಾ ಕಾರಂಜಿ ಸ್ಪರ್ಧೆ

ನಡ: ಪ್ರೌಢಶಾಲಾ ಮಟ್ಟದ ಬೆಳ್ತಂಗಡಿ ವಲಯಗಳಾದ ಬಂಗಾಡಿ, ಅಣಿಯೂರು, ಕಕ್ಕಿಂಜೆ, ಬೆಳ್ತಂಗಡಿ ಕ್ಲಸ್ಟರ್‌ಗಳ ಪ್ರತಿಭಾ ಕಾರಂಜಿ ಸ್ಪರ್ಧೆಗಳನ್ನು ನಡ ಸರಕಾರಿ ಪ್ರೌಢಶಾಲೆಯಲ್ಲಿ ನಡೆಸಲಾಯಿತು.

ಅಧ್ಯಕ್ಷತೆಯನ್ನು ಗ್ರಾ.ಪಂ. ಅಧ್ಯಕ್ಷೆ ಶ್ರೀಮತಿ ಮಂಜುಳಾ ವಹಿಸಿದ್ದರು.

ಮುಖ್ಯ ಅತಿಥಿ ಮುರಳಿ ಬಲಿಪ ನ್ಯಾಯವಾದಿ, ಕಾರ್ಯಕ್ರಮದ ಉದ್ಘಾಟನೆಯನ್ನು ನೆರವೇರಿಸಿದರು.

ಕಾರ್ಯಕ್ರಮದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ಶ್ರೀಮತಿ ತಾರಕೇಸರಿ, ಸ.ಪ.ಪೂ.ಕಾಲೇಜು ನಡ ಪ್ರಾಂಶುಪಾಲ ಚಂದ್ರಶೇಖರ್, ಶಾಲಾ ಮುಖ್ಯ ಶಿಕ್ಷಕ ಮೋಹನ ಬಾಬು ಡಿ., ನೋಡಲ್ ಅಧಿಕಾರಿ ಇಸಿಒ ಶ್ರೀಮತಿ ಚೇತನಾಕ್ಷಿ, ಶಿಕ್ಷಣ ಸಂಯೋಜಕರು, ಕ್ಲಸ್ಟರ್‌ಗಳ ಸಿಆರ್‌ಪಿಗಳು, ಶಾಲಾಭಿವೃದ್ಧಿ ಸಮಿತಿಯ ಕಾರ್ಯಾಧ್ಯಕ್ಷ ವಸಂತ ಗೌಡ, ಸಮಿತಿಯ ಸದಸ್ಯರು, ಗಣ್ಯರು ಭಾಗವಹಿಸಿದ್ದರು.

ತಾಲೂಕಿನ ಸುಮಾರು 31 ಶಾಲೆಗಳ ವಿದ್ಯಾರ್ಥಿಗಳು, ಶಿಕ್ಷಕರು ಸ್ಪರ್ಧೆಯಲ್ಲಿ ಭಾಗವಹಿಸಿದ್ದರು. ಮುಖ್ಯ ಶಿಕ್ಷಕರು ಸ್ವಾಗತಿಸಿ, ಶಿಕ್ಷಕರಾದ ಶಿವಪುತ್ರ ಮತ್ತು ಸುರೇಶ್ ನಿರೂಪಿಸಿ ವಂದಿಸಿದರು

Related posts

ಕಕ್ಯಪದವು ಎಲ್.ಸಿ.ಆರ್ ಪ.ಪೂ. ಕಾಲೇಜು: ವಾಣಿಜ್ಯ ವಿಭಾಗದಲ್ಲಿ 100% ಫಲಿತಾಂಶ

Suddi Udaya

ತೋಟತ್ತಾಡಿ ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ ನಲ್ಲಿ ಗುರುಜಯಂತಿ ಆಚರಣೆ

Suddi Udaya

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಿಕ್ಷಕರಿಗೆ ಕಾರ್ಯಾಗಾರ

Suddi Udaya

ಜ.14: ಲಕ್ಷ್ಮೀ ಇಂಡಸ್ಟ್ರೀಸ್ ಕನಸಿನ ಮನೆ ನೂತನ ಶಾಖೆ ಉಪ್ಪಿನಂಗಡಿಯಲ್ಲಿ ಶುಭಾರಂಭ

Suddi Udaya

ಬದುಕು ಕಟ್ಟೋಣ ಬನ್ನಿ ತಂಡದ ಕೆಲಸ ಕಾರ್ಯಗಳಿಗೆ ರಾಜ್ಯಾದ್ಯಂತ ಮೆಚ್ಚುಗೆ: ತಂಡದ ಸಂಚಾಲಕ ಮೋಹನ್ ಕುಮಾರ್ ರವರ ಭಾವಚಿತ್ರ ಪೇಂಟಿಂಗ್ ನಲ್ಲಿ ತಯಾರಿಸಿ ಬಳ್ಳಾರಿಯ ಅಭಿಮಾನಿಯಿಂದ ಹಸ್ತಾಂತರ

Suddi Udaya

ಸಚಿವ ದಿನೇಶ್ ಗುಂಡೂರಾವ್‌ ಅವರ ಟಿಪ್ಪಣಿ ಆಧರಿಸಿ ನಾಳ ದುರ್ಗಾಪರಮೇಶ್ವರಿ ದೇವಸ್ಥಾನದ ವ್ಯವಸ್ಥಾಪನ ಮಂಡಳಿಗೆ ಸದಸ್ಯರನ್ನು ನೇಮಕ ಮಾಡಿರುವುದು ಪ್ರಶ್ನಿಸಿ ಹೈಕೋರ್ಟ್‌ಗೆ ಅರ್ಜಿ

Suddi Udaya
error: Content is protected !!