30.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಅಕ್ರಮ ಇಸ್ಪೀಟು ಅಡ್ಡೆಗೆ ಪೊಲೀಸ್ ದಾಳಿ: ನಗದು ಹಾಗೂ ಸೊತ್ತುಗಳ ಸಹಿತ 23 ಮಂದಿ ವಶ

ಮಡಂತ್ಯಾರು: ಮಾಲಾಡಿ ಗ್ರಾಮದ ಮಡಂತ್ಯಾರು ಪೇಟೆಯ ಬಳಿಯಿರುವ ಅಲ್ಬರ್ಟ್ ಡಿ ಸೋಜಾ ಎಂಬವರಿಗೆ ಸೇರಿದ ಕಟ್ಟಡದ ಹಿಂಭಾಗದಲ್ಲಿರುವ ಶೆಡ್‌ನೊಳಗೆ ಸುಮಾರು 15-20 ಜನರು ಅಕ್ರಮವಾಗಿ ಹಣವನ್ನು ಪಣವಾಗಿಟ್ಟುಕೊಂಡು ಇಸ್ಪೀಟು ಎಲೆಗಳಿಂದ ಉಲಾಯಿ –ಪಿದಾಯಿ (ಅಂದರ್‌-ಬಹಾರ್‌ ) ಎಂಬ ಅದೃಷ್ಟದ ಆಟವನ್ನು ಆಡುತ್ತಿರುವ ಬಗ್ಗೆ ಮಾಹಿತಿ ಬಂದ ಮೇರೆಗೆ, ಪುಂಜಾಲಕಟ್ಟೆ ಪೊಲೀಸ್‌ ಠಾಣಾ ಪಿಎಸ್‌ಐ ನಂದಕುಮಾರ್‌ ಎಂ.ಎಂ ರವರು ಸಿಬ್ಬಂದಿಗಳೊಂದಿಗೆ ದಾಳಿ ನಡೆಸಿ ಕೃತ್ಯದಲ್ಲಿ ತೊಡಗಿದ್ದ 23 ಮಂದಿ ಆರೋಪಿಗಳನ್ನು ವಶಕ್ಕೆ ಪಡೆದು, ಜುಗಾರಿ ಆಟಕ್ಕೆ ಉಪಯೋಗಿಸಿದ ಸೊತ್ತುಗಳನ್ನು ಸ್ವಾಧೀನಪಡಿಸಿಕೊಂಡ ಘಟನೆ ಸೆ.19 ರಂದು ನಡೆದಿದೆ.

ಸ್ವಾಧೀನಪಡಿಸಿಕೊಂಡಿರುವ ನಗದು ಸೇರಿ ಎಲ್ಲಾ ಸೊತ್ತುಗಳ ಅಂದಾಜು ಮೌಲ್ಯ ರೂ 36729/- ಆಗಬಹುದು. ಈ ಬಗ್ಗೆ ಮಾನ್ಯ ನ್ಯಾಯಾಲಯದಿಂದ ಅನುಮತಿ ಪಡೆದು ಸೆ. 20 ರಂದು ಪುಂಜಾಲಕಟ್ಟೆ ಠಾಣೆಯಲ್ಲಿ ಅ.ಕ್ರ 67/2024 ಕಲಂ: 79, 80 ಕರ್ನಾಟಕ ಪೊಲೀಸ್‌ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿರುತ್ತದೆ.

Related posts

ಪೆರಾಡಿ ಬಿಜೆಪಿ ಶಕ್ತಿಕೇಂದ್ರದ ಬೂತ್ ಸಮಿತಿಯ ನೂತನ ಅದ್ಯಕ್ಷರಾಗಿ ರವಿ ಕುಲಾಲ್ , ಕಾರ್ಯದರ್ಶಿಯಾಗಿ ವಿಶ್ವನಾಥ ಶೆಟ್ಟಿ

Suddi Udaya

ಹೊಸಂಗಡಿ ಇಂದಿರಾ ವಸತಿ ಶಾಲೆಯಲ್ಲಿ ವನಮಹೋತ್ಸವ

Suddi Udaya

ಬಿಜೆಪಿ ಕೊಕ್ಕಡ 239ನೇ ಬೂತು ಸಮಿತಿಯ ಅಧ್ಯಕ್ಷರಾಗಿ ಭಾಸ್ಕರ್ ಶೆಟ್ಟಿಗಾರ್, ಕಾರ್ಯದರ್ಶಿಯಾಗಿ ಕಿಶೋರ್ ಪೂಜಾರಿ ಆಯ್ಕೆ

Suddi Udaya

ಕೊಕ್ಕಡ: EduNest ಅಕಾಡೆಮಿ ಕೋಚಿಂಗ್ ಕೇಂದ್ರ ಉದ್ಘಾಟನೆ

Suddi Udaya

ಮನೆಯಂಗಳದಲ್ಲಿ ನಿಂತಿದ್ದ ಕನ್ಯಾಡಿ ಅಂಡಿರ್‌ಮಾರ್ ನಿವಾಸಿ ಮಂಜಪ್ಪ ನಾಯ್ಕರ ಮೇಲೆ ಚಿರತೆ ದಾಳಿ: ಕಾಲಿಗೆ ಕಚ್ಚಿ ಗಂಭೀರ ಗಾಯ- ಬೆಳ್ತಂಗಡಿ ಆಸ್ಪತ್ರೆಗೆ ದಾಖಲು

Suddi Udaya

ಬೆಳ್ತಂಗಡಿ ವಿಶ್ವ ಹಿಂದೂ ಪರಿಷದ್ ಬಜರಂಗದಳ ಪ್ರಖಂಡ ಮತ್ತು ಘಟಕ ಸಮಿತಿಗಳ ಸಮಾಲೋಚನಾ ಬೈಠಕ್

Suddi Udaya
error: Content is protected !!