26.7 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಮಾಸ್ಟರ್ಸ್ ಕೋಚಿಂಗ್ ಕ್ಲಾಸ್ ನಲ್ಲಿ ಶಿಕ್ಷಕರ ದಿನಾಚರಣೆ

ಬೆಳ್ತಂಗಡಿ : ವಿದ್ಯಾರ್ಥಿಗಳು ಶಿಕ್ಷಕರ ಜೊತೆ ಇಟ್ಟುಕೊಳ್ಳುವ ಉತ್ತಮ ಭಾಂದವ್ಯ ಅವರ ಜೀವನಕ್ಕೆ ದಾರಿದೀಪ ವಾಗಬಲ್ಲುದು. ಅದೇ ರೀತಿ ಶಿಕ್ಷಕರ ವ್ಯಕ್ತಿತ್ವ ವಿದ್ಯಾರ್ಥಿಗಳಿಗೆ ಮಾದರಿಯಾಗಿರಬೇಕು ಎಂದು ಕೋಚಿಂಗ್ ಸೆಂಟರ್ ನ ಸಂಚಾಲಕರಾದ ಸಂತೋಷ್ ಕುಮಾರ್ ರವರು ಹೇಳಿದರು.

ಇವರು ಮಾಸ್ಟರ್ಸ್ ಕೋಚಿಂಗ್ ಸೆಂಟರ್ ನಲ್ಲಿ ನಡೆದ ಶಿಕ್ಷಕರ ದಿನಾಚರಣೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಶಿಕ್ಷಕಿ ಹೇಮಾವತಿ ಕೆ. ವಿದ್ಯಾರ್ಥಿಗಳ ಸಂಘಟಿತ ಸಹಕಾರದ ಕಾರ್ಯಕ್ರಮಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದರು. ವೇದಿಕೆಯಲ್ಲಿ ಕೋಚಿಂಗ್ ಸೆಂಟರ್ ಮುಖ್ಯ ಶಿಕ್ಷಕಿ ರಮ್ಯಾ, ಶಿಕ್ಷಕರಾದ ದಿನೇಶ್, ಪಲ್ಲವಿ, ತೃಪ್ತಿ, ನಯನಾ, ಗುಣಶ್ರಿ, ಲತಾಶ್ರಿ, ಅಶ್ವಿನಿ, ನಾಗವೇಣಿ, ರೇಖಾ ಉಪಸ್ಥಿತರಿದ್ದರು.

ಸರ್ವಪಲ್ಲಿ ಡಾ.ರಾಧಾಕೃಷ್ಣನ್ ರವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಗೈಯುವ ಮೂಲಕ ಪ್ರಾರಂಭವಾದ ಕಾರ್ಯಕ್ರಮದಲ್ಲಿ
ವಿದ್ಯಾರ್ಥಿಗಳಾದ ಮಾನ್ಯ ಸ್ವಾಗತಿಸಿ, ಪ್ರೀತೇಶ್ ಧನ್ಯವಾದವಿತ್ತರು. ಸನ್ನಿಧಿ ಕಾರ್ಯಕ್ರಮ ನಿರೂಪಿಸಿದರು. ಅಸ್ನ ಮತ್ತು ಅಂಜಲಿ ಶಿಕ್ಷಕರ ದಿನಾಚರಣೆ ಕುರಿತು ಮಾತನಾಡಿದರು. ಈ ಸಂದರ್ಭದಲ್ಲಿ ಶಿಕ್ಷಕರಿಗೆ ವಿವಿಧ ಸ್ಪರ್ಧೆಯನ್ನು ಏರ್ಪಡಿಸಲಾಯಿತು.

Related posts

ಬೆಳ್ತಂಗಡಿ: ಅತ್ಯುತ್ತಮ ಜೂನಿಯರ್ ರೆಡ್ ಕ್ರಾಸ್ ಕೌನ್ಸಿಲರ್ ಆಗಿ ಪ್ರಮೀಳಾ ರಿಗೆ ಜಿಲ್ಲಾ ಪ್ರಶಸ್ತಿ

Suddi Udaya

ಎಲ್ ಸಿ ಆರ್ ವಿದ್ಯಾಸಂಸ್ಥೆಯಲ್ಲಿ ದಶಮ ಸಂಭ್ರಮದ ಸಭಾ ಕಾರ್ಯಕ್ರಮ

Suddi Udaya

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಸಂಪೂರ್ಣ ಸುರಕ್ಷಾ ಸಹಾಯಧನ ವಿತರಣೆ

Suddi Udaya

ಗೇರುಕಟ್ಟೆ : ಕಳಿಯ ಗ್ರಾಮ ಪಂಚಾಯತ್ ನಲ್ಲಿ ಸ್ವಚ್ಛತಾ ಜಾಗೃತಿ ಅಭಿಯಾನ ಕಾರ್ಯಕ್ರಮ

Suddi Udaya

ಲಾಯಿಲ ಕಕ್ಕೇನಾದ ಯುವಕ ಭರತ್ ಕುಮಾರ್ ನಾಪತ್ತೆ: ಪೈಂಟಿಂಗ್ ಕೆಲಸ ಮಾಡುತ್ತಿದ್ದ ಯುವಕ : ಪತ್ತೆಗಾಗಿ ಬೆಳ್ತಂಗಡಿ ಪೋಲಿಸ್ ಠಾಣೆಗೆ ದೂರು

Suddi Udaya

ಕಾಂಗ್ರೆಸ್ ಸರ್ಕಾರದ ಜನವಿರೋಧಿ ನೀತಿ ಖಂಡಿಸಿ ಕಲ್ಮಂಜ ಗ್ರಾ.ಪಂ. ನಲ್ಲಿ ಪ್ರತಿಭಟನೆ

Suddi Udaya
error: Content is protected !!