29.5 C
ಪುತ್ತೂರು, ಬೆಳ್ತಂಗಡಿ
April 5, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಅಕ್ರಮ ಇಸ್ಪೀಟು ಅಡ್ಡೆಗೆ ಪೊಲೀಸ್ ದಾಳಿ: ನಗದು ಹಾಗೂ ಸೊತ್ತುಗಳ ಸಹಿತ 23 ಮಂದಿ ವಶ

ಮಡಂತ್ಯಾರು: ಮಾಲಾಡಿ ಗ್ರಾಮದ ಮಡಂತ್ಯಾರು ಪೇಟೆಯ ಬಳಿಯಿರುವ ಅಲ್ಬರ್ಟ್ ಡಿ ಸೋಜಾ ಎಂಬವರಿಗೆ ಸೇರಿದ ಕಟ್ಟಡದ ಹಿಂಭಾಗದಲ್ಲಿರುವ ಶೆಡ್‌ನೊಳಗೆ ಸುಮಾರು 15-20 ಜನರು ಅಕ್ರಮವಾಗಿ ಹಣವನ್ನು ಪಣವಾಗಿಟ್ಟುಕೊಂಡು ಇಸ್ಪೀಟು ಎಲೆಗಳಿಂದ ಉಲಾಯಿ –ಪಿದಾಯಿ (ಅಂದರ್‌-ಬಹಾರ್‌ ) ಎಂಬ ಅದೃಷ್ಟದ ಆಟವನ್ನು ಆಡುತ್ತಿರುವ ಬಗ್ಗೆ ಮಾಹಿತಿ ಬಂದ ಮೇರೆಗೆ, ಪುಂಜಾಲಕಟ್ಟೆ ಪೊಲೀಸ್‌ ಠಾಣಾ ಪಿಎಸ್‌ಐ ನಂದಕುಮಾರ್‌ ಎಂ.ಎಂ ರವರು ಸಿಬ್ಬಂದಿಗಳೊಂದಿಗೆ ದಾಳಿ ನಡೆಸಿ ಕೃತ್ಯದಲ್ಲಿ ತೊಡಗಿದ್ದ 23 ಮಂದಿ ಆರೋಪಿಗಳನ್ನು ವಶಕ್ಕೆ ಪಡೆದು, ಜುಗಾರಿ ಆಟಕ್ಕೆ ಉಪಯೋಗಿಸಿದ ಸೊತ್ತುಗಳನ್ನು ಸ್ವಾಧೀನಪಡಿಸಿಕೊಂಡ ಘಟನೆ ಸೆ.19 ರಂದು ನಡೆದಿದೆ.

ಸ್ವಾಧೀನಪಡಿಸಿಕೊಂಡಿರುವ ನಗದು ಸೇರಿ ಎಲ್ಲಾ ಸೊತ್ತುಗಳ ಅಂದಾಜು ಮೌಲ್ಯ ರೂ 36729/- ಆಗಬಹುದು. ಈ ಬಗ್ಗೆ ಮಾನ್ಯ ನ್ಯಾಯಾಲಯದಿಂದ ಅನುಮತಿ ಪಡೆದು ಸೆ. 20 ರಂದು ಪುಂಜಾಲಕಟ್ಟೆ ಠಾಣೆಯಲ್ಲಿ ಅ.ಕ್ರ 67/2024 ಕಲಂ: 79, 80 ಕರ್ನಾಟಕ ಪೊಲೀಸ್‌ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿರುತ್ತದೆ.

Related posts

ವಿಧಾನಸಭೆ ಸಾರ್ವಜನಿಕ ಲೆಕ್ಕಪತ್ರಗಳ ಸಮಿತಿಗೆ ಸದಸ್ಯರಾಗಿ ವಿಧಾನ ಪರಿಷತ್ ಸದಸ್ಯರಾದ ಪ್ರತಾಪಸಿಂಹ ನಾಯಕ್ ನಾಮನಿರ್ದೇಶನ

Suddi Udaya

ಪುರುಷ ಮತ್ತು ಮಹಿಳಾ ವಿಭಾಗದ ನ್ಯಾಷನಲ್ ಚಾಂಪಿಯನ್ ಶಿಪ್ ಪಂದ್ಯಾಟ: ಎಸ್.ಡಿ.ಎಂ ಕಾಲೇಜಿನ ವಿದ್ಯಾರ್ಥಿಗಳಿಗೆ ಸಮಗ್ರ ಪ್ರಶಸ್ತಿ

Suddi Udaya

ವಿನೂತನ ಶೈಲಿಯಲ್ಲಿ ಪ್ಯಾಂಟ್ ಧರಿಸಿ ಬೆಳ್ತಂಗಡಿ ಸಂತೆಕಟ್ಟೆಗೆ ಬಂದ ಯುವಕ: ವಿಡಿಯೋ ಮಾಡಿ ಯುವಕನ ಪ್ಯಾಂಟ್ ನ್ನು ಸೂಜಿಯಿಂದ ಹೊಲಿದ ಕಿಡಿಗೇಡಿಗಳು: ನೊಂದ ಯುವಕ ಆತ್ಮಹತ್ಯೆಗೆ ಯತ್ನ

Suddi Udaya

ಮಲವಂತಿಗೆ: ಪ್ರಗತಿಪರ ಕೃಷಿಕ ರಮಾನಾಥ ಮರಾಠೆ ನಿಧನ

Suddi Udaya

ಹೊಕ್ಕಾಡಿಗೋಳಿ ಎಸ್. ಕೆ. ಫ್ರೆಂಡ್ಸ್ ನೀರಪಲ್ಕೆ ಇದರ ಆಶ್ರಯದಲ್ಲಿ ಸೂಪರ್ ಸಿಕ್ಸ್ ಕ್ರಿಕೆಟ್ ಪಂದ್ಯಾಟ ಉದ್ಘಾಟನೆ

Suddi Udaya

ಶೌರ್ಯ ವಿಪತ್ತು ನಿರ್ವಹಣಾ ಘಟಕದಿಂದ ಉಜಿರೆ ಮುಂಡತ್ತೋಡಿ ಶ್ರೀ ಸಂತಾನ ಗೋಪಾಲಕೃಷ್ಣ ದೇವಸ್ಥಾನ ಚಾವಡಿಯಲ್ಲಿ ಶ್ರಮದಾನ

Suddi Udaya
error: Content is protected !!
ಸುದ್ದಿ ಉದಯ ವಾಟ್ಸಪ್‌ ಗ್ರೂಪ್‌ಗೆ ಸೇರಿ