27.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ ಎಸ್.ಡಿ.ಎಮ್ ಆಂ.ಮಾ. (ಸಿ.ಬಿ.ಎಸ್.ಇ) ಶಾಲೆಯಲ್ಲಿ ಶಿಕ್ಷಕರಿಗೆ ‘ಫೋನೆಟಿಕ್ಸ್ ಇನ್ ಆಕ್ಷನ್: ಎಂಗೇಜಿಂಗ್ ಯಂಗ್ ಮೈಂಡ್ಸ್’ ಕಾರ್ಯಾಗಾರ

ಉಜಿರೆ:ಸೆ21. ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಶಿಕ್ಷಕರಿಗೆ ‘ಫೋನೆಟಿಕ್ಸ್ ಇನ್ ಆಕ್ಷನ್:ಎಂಗೇಜಿಂಗ್ ಯಂಗ್ ಮೈಂಡ್ಸ್’ ಕಾರ್ಯಗಾರ ನಡೆಯಿತು.

ಸಂಪನ್ಮೂಲ ವ್ಯಕ್ತಿಯಾಗಿ ಬೆಂಗಳೂರಿನ ಆಕ್ಸ್ಫರ್ಡ್ ಯೂನಿವರ್ಸಿಟಿ ಪ್ರೆಸ್ ಇಂಡಿಯಾದ ಅಕಾಡೆಮಿಕ್ ಎಕ್ಸಲೆನ್ಸ್ ಮ್ಯಾನೇಜರ್ ಆಗಿರುವ ಶ್ರೀಮತಿ ವಿದ್ಯಾ ನಾರಾಯಣನ್ ಕಲಿಕೆಯಲ್ಲಿ ಮತ್ತಷ್ಟು ಚಟುವಟಿಕೆಗಳನ್ನು ಅಳವಡಿಸುವ ಕುರಿತಾಗಿ ಪ್ರಾಯೋಗಿಕ ಚಟುವಟಿಕೆಗಳೊಂದಿಗೆ ಮಾಹಿತಿ ನೀಡಿದರು.

ವೇದಿಕೆಯಲ್ಲಿ ಮಂಗಳೂರು ಆಕ್ಸ್ಫರ್ಡ್ ಜೋನಲ್ ಮ್ಯಾನೇಜರ್ ಶ್ರೀ ಸುಜಿತ್ ಉಪಸ್ಥಿತರಿದ್ದರು.

ಕಾರ್ಯಗಾರದಲ್ಲಿ ಉಜಿರೆ, ಧರ್ಮಸ್ಥಳ, ಬೆಳ್ತಂಗಡಿ ಹಾಗೂ ಮಂಗಳೂರು ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಶಾಲೆಯ ಕಿಂಡರ್ಗಾರ್ಟನ್ ಹಾಗೂ ಪ್ರಾಥಮಿಕ ಶಾಲಾ ಶಿಕ್ಷಕಿಯರು ಭಾಗವಹಿಸಿದರು.

ಕಾರ್ಯಗಾರದ ಅಧ್ಯಕ್ಷತೆಯನ್ನು ಶಾಲಾ ಮುಖ್ಯೋಪಾಧ್ಯಾಯರಾದ ಮನ್ಮೋಹನ್ ನಾಯ್ಕ್ ಕೆ.ಜಿ ವಹಿಸಿದ್ದರು.

ಶಿಕ್ಷಕಿ ಮಧುರ ನಿರೂಪಿಸಿದ ಕಾರ್ಯಕ್ರಮದಲ್ಲಿ ಶಿಕ್ಷಕಿಯರಾದ ಶ್ರೀಮತಿ ಸುಮಾ ಶ್ರೀನಾಥ್ ಹಾಗೂ ಶ್ರೀಮತಿ ಸ್ಮೃತಿ ಜೈನ್ ಪ್ರಾರ್ಥನೆ ಮಾಡಿದರು.

Related posts

ಧರ್ಮಸ್ಥಳ: ಶ್ರೀ ಧ. ಮಂ. ಆಂ.ಮಾ. ಶಾಲೆಯಲ್ಲಿ ಜೀವನ ಕೌಶಲ್ಯ ಕಾರ್ಯಾಗಾರ

Suddi Udaya

ಲಾಯಿಲ: ಗಾಂಧಿನಗರದಲ್ಲಿ ರಸ್ತೆಕಾಮಗಾರಿ ಲೋಕಾರ್ಪಣೆ

Suddi Udaya

ಉಜಿರೆ: ಶ್ರೀ ಧ.ಮಂ. ಅ.ಹಿ.ಪ್ರಾ. ಶಾಲೆಯಲ್ಲಿ ಶತಮಾನೋತ್ಸವ ಆಚರಣೆ ಪ್ರಯುಕ್ತ ಪೂರ್ವಭಾವಿ ಸಭೆ

Suddi Udaya

ಬೆಳ್ತಂಗಡಿ: ಬಂಟರ ಮಹಿಳಾ ವಿಭಾಗದ ವತಿಯಿಂದ ಶ್ರೀ ವರಮಹಾಲಕ್ಷ್ಮೀ ಪೂಜೆ

Suddi Udaya

ಶ್ರೀ ಬಾಹುಬಲಿ ಕ್ರೆಡಿಟ್ ಸೌಹಾರ್ದ ಸಹಕಾರಿ ಸಂಘದ ಮಹಾಸಭೆ: 130 ಕೋಟಿ ವ್ಯವಹಾರ- ರೂ.17.92 ಲಕ್ಷ ಲಾಭ -ಶೇ 14 ಡಿವಿಡೆಂಟ್

Suddi Udaya

ಬೆಳ್ತಂಗಡಿಯಲ್ಲಿ ಯಾಂತ್ರಿಕೃತ ಭತ್ತದ ನಾಟಿ ಪ್ರಾತ್ಯಕ್ಷಿಕೆ

Suddi Udaya
error: Content is protected !!