22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ ಶ್ರೀ ಧ.ಮಂ. ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ‘ಮಹಿಳಾ ಆರೋಗ್ಯ ಮತ್ತು ಸುರಕ್ಷಾ ಕ್ರಮ ಹಾಗೂ ಯೋಗದ ಪ್ರಾಮುಖ್ಯ’ ಕಾರ್ಯಾಗಾರ

ಉಜಿರೆ: ಮನುಷ್ಯನ ಬದುಕಿನ ಅವಿಭಾಜ್ಯ ಅಂಗ ಮನಸ್ಸು. ಮನಸ್ಸು ಸ್ಥಿಮಿತದಲ್ಲಿ ಇಲ್ಲವಾದಲ್ಲಿ ಕಾಯಿಲೆ ಬರುವುದು, ಕೋಪ, ಹಠ, ಸಿಟ್ಟು ಮುಂತಾದ ಅನೇಕ ಸಮಸ್ಯೆಗಳು ಬರುವುದರಿಂದ ಜೀವನದಲ್ಲಿ ದೇಹದ ಆರೋಗ್ಯ ಕಾಪಾಡುವುದಕ್ಕಿಂತಲೂ ಮನಸ್ಸಿನ ಆರೋಗ್ಯ ಕಾಪಾಡುವುದು ಅಗತ್ಯ ಎಂದು ಉಜಿರೆಯ ಶ್ರೀ ಧ.ಮಂ. ಪ್ರಕೃತಿ ಚಿಕಿತ್ಸೆ ಮತ್ತು ಯೋಗವಿಜ್ಞಾನಗಳ ಮಹಾವಿದ್ಯಾಲಯದ ಸಹಾಯಕ ಪ್ರಾಧ್ಯಾಪಕಿ ಹಾಗೂ ಎನ್.ಎಸ್.ಎಸ್. ಯೋಜನಾಧಿಕಾರಿ ಡಾ. ಮೇಘನಾ ಅಭಿಪ್ರಾಯಪಟ್ಟರು.


ಕಾಲೇಜಿನ ಎನ್ನೆಸ್ಸೆಸ್ ಘಟಕದ ವತಿಯಿಂದ ಸೆ. 20 ರಂದು ಇಲ್ಲಿನ ಶ್ರೀ ಧ.ಮಂ. ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಆಯೋಜಿಸಿದ್ದ ‘ಮಹಿಳಾ ಆರೋಗ್ಯ ಮತ್ತು ಸುರಕ್ಷಾ ಕ್ರಮ ಹಾಗೂ ಯೋಗದ ಪ್ರಾಮುಖ್ಯ’ ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು.


ಪರೋಪಕಾರ ಮತ್ತು ನಿಸ್ವಾರ್ಥ ಸೇವೆಯಿಂದ ಮನಸ್ಸಿನ ಆರೋಗ್ಯ ಕಾಪಾಡಿಕೊಳ್ಳಬಹುದು. ಜೊತೆಗೆ, ಯೋಗ, ಧ್ಯಾನ ಮತ್ತು ಪ್ರಾಣಾಯಾಮ ಮಾಡುವುದರಿಂದ ಮನಸ್ಸನ್ನು ಸ್ಥಿಮಿತದಲ್ಲಿ ಇಟ್ಟುಕೊಳ್ಳಬಹುದು ಎಂದು ಅವರು ತಿಳಿಸಿದರು.
ಶ್ರೀ ಧ.ಮಂ. ಪ್ರಕೃತಿ ಚಿಕಿತ್ಸೆ ಮತ್ತು ಯೋಗವಿಜ್ಞಾನಗಳ ಮಹಾವಿದ್ಯಾಲಯದ ಹಿರಿಯ ವಿದ್ಯಾರ್ಥಿಗಳಾದ ದಿವ್ಯಾ, ಸಂಗೀತ ಮತ್ತು ಸಿಂಧು ಮಹಿಳೆಯರ ಆರೋಗ್ಯದ ಕುರಿತು ಮಾಹಿತಿ ನೀಡಿದರು. ಶಮ ಹಾಗೂ ಉಲ್ಲಾಸ್ ಎಂ.ಆರ್. ಯೋಗದ ಮಹತ್ವದ ಮಾಹಿತಿ ನೀಡಿದರು.


ಶ್ರೀ ಧ.ಮಂ. ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯ ಪ್ರಾಂಶುಪಾಲ ವಿ. ಪ್ರಕಾಶ್ ಕಾಮತ್ ಪ್ರಾಸ್ತಾವಿಕ ನುಡಿಗಳನ್ನಾಡಿದರು.
ಇಂಗ್ಲಿಷ್ ಉಪನ್ಯಾಸಕ ಸಚಿನ್ ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ನಗರ ಬ್ಲಾಕ್ ಕಾಂಗ್ರೆಸ್ ಸೇವಾದಳ ಅಧ್ಯಕ್ಷರಾಗಿ ಇಸುಬು ಯು.ಕೆ ನೇಮಕ

Suddi Udaya

ಉಜಿರೆ : ಪ್ರಗತಿ ಮಹಿಳಾ ಮಂಡಲ ನೇತೃತ್ವದಲ್ಲಿ ಚಿಲಿಪಿಲಿ 2024 ಬೇಸಿಗೆ ಶಿಬಿರದ ಸಮಾರೋಪ

Suddi Udaya

ಕಾಯರ್ತಡ್ಕ ಖ್ಯಾತ ವೈದ್ಯ ಮಲಬಾರ್ ಕ್ಲಿನಿಕ್ ನ ಡಾ. ಟಿ.ವಿ ಜೋಸೆಫ್ ನಿಧನ

Suddi Udaya

ಉರುವಾಲು : ಮುಹಮ್ಮದ್ ರಾಝಿಖ್ ದುಬೈನಲ್ಲಿ ಅನುಮಾನಸ್ಪದವಾಗಿ ಸಾವು

Suddi Udaya

ವೃಕ್ಷಮಾತೆ, ಶತಾಯುಷಿ ಸಾಲುಮರದ ತಿಮ್ಮಕ್ಕ ವಿಧಿವಶ

Suddi Udaya

ಡಿ.27-28 ರಂದು ನಡೆಯಬೇಕಾಗಿದ್ದ ಬರೆಂಗಾಯ ಸ.ಉ.ಹಿ.ಪ್ರಾ. ಶಾಲಾ ಅಮೃತ ಮಹೋತ್ಸವ ಕಾರ್ಯಕ್ರಮ ರದ್ದು

Suddi Udaya
error: Content is protected !!