July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಎಸ್‌ಡಿಎಂ ಪಾಲಿಟೆಕ್ನಿಕ್ ಕಾಲೇಜಿನ ಜನೋಪಯೋಗಿ ಪ್ರಾಜೆಕ್ಟ್‌ಗಳಿಗೆ ಪ್ರಶಸ್ತಿ: ಪ್ರಾಂಶುಪಾಲ ಸಂತೋಷ್ ರವರಿಂದ ಪತ್ರಿಕಾಗೋಷ್ಠಿ

ಉಜಿರೆ: ಎಸ್‌ಡಿಎಂ ಪಾಲಿಟೆಕ್ನಿಕ್ ಡಾ|| ಡಿ. ವೀರೇಂದ್ರ ಹೆಗ್ಗಡೆಯವರಿಂದ 2008ರಲ್ಲಿ ಸ್ಥಾಪನೆಗೊಂಡಿದ್ದು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಎಜುಕೇಷನಲ್ ಸೊಸೈಟಿಯ ಮಾರ್ಗದರ್ಶನದಂತೆ ಕಾರ್ಯನಿರ್ವಹಿಸುತ್ತದೆ. ಈ ಕಾಲೇಜುAICTE, New Delhi ಯ ಮಾನ್ಯತೆ ಹಾಗೂ DTE-ಬೆಂಗಳೂರು ಇವರಿಂದ ಅನುಮೋದನೆಗೆ ಒಳಪಟ್ಟಿದ್ದು ಪಠ್ಯದ ಜೊತೆಗೆ ಪಠ್ಯೇತರ ಹಾಗೂ ಪೂರಕ ಚಟುವಟಿಕೆಗಳಲ್ಲಿಯೂ ಸಾಧನೆಯನ್ನು ಮಾಡುತ್ತಾ ಬಂದಿದೆ. ಹಿಂದಿನ ವರ್ಷಗಳಲ್ಲಿ ಅನೇಕ ರಾಜ್ಯಮಟ್ಟದ ಪ್ರಶಸ್ತಿಗಳು ಪ್ರಾಜೆಕ್ಟ್ ಸ್ಪರ್ಧೆಗಳಲ್ಲಿ ಲಭಿಸಿದ್ದು ಈ ವರ್ಷವೂ ಸೆ.13ರಂದು ಮೂಡಬಿದ್ರೆಯ ಎಸ್.ಎನ್.ಎಂ. ಪಾಲಿಟೆಕ್ನಿಕ್‌ನಲ್ಲಿ ನಡೆದ “ನವತ್ವಂ-2024” ಎಂಬ ಅಂತರ್ ಕಾಲೇಜು ಪ್ರಾಜೆಕ್ಟ್ ಸ್ಪರ್ಧೆಯಲ್ಲಿ ಎಸ್‌ಡಿಎಂ ಪಾಲಿಟೆಕ್ನಿಕ್ ಕಾಲೇಜಿನ ಸಿವಿಲ್ ವಿಭಾಗದ ವಿದ್ಯಾರ್ಥಿಗಳು ಪೇಪರ್ ಪ್ಲೈವುಡ್ ಪ್ರಾಜೆಕ್ಟ್ ಪ್ರದರ್ಶನ ಹಾಗೂ ಮೆಕ್ಯಾನಿಕಲ್ ಇಂಜಿನಿಯರಿಂಗ್ ವಿಭಾಗದ ವಿದ್ಯಾರ್ಥಿಗಳು ಮಲ್ಟಿ ಪರ್ಪಸ್ ಅಗ್ರಿಟಾಲಿಯ ವಿನ್ಯಾಸ ಮತ್ತು ತಯಾರಿಕೆಗೆ ಪ್ರತ್ಯೇಕವಾಗಿ ಪ್ರಥಮ ಸ್ಥಾನ ಲಭಿಸಿರುತ್ತದೆ.


ಈ ಪ್ರಾಜೆಕ್ಟ್‌ಗಳನ್ನು ವಿದ್ಯಾರ್ಥಿಗಳು ಉಪನ್ಯಾಸಕರ ಮಾರ್ಗದರ್ಶನದಲ್ಲಿ ವಿನ್ಯಾಸಗೊಳಿಸಿ ನಿರ್ಮಿಸಿದ್ದು ಸಮಾಜಮುಖಿಯಾಗಿವೆ. ವಿದ್ಯಾರ್ಥಿಗಳಲ್ಲಿರುವ ಪ್ರತಿಭೆ ಮತ್ತು ತಾಂತ್ರಿಕ ಕೌಶಲ್ಯವನ್ನು ಪ್ರದರ್ಶಿಸಲು ಹಾಗೂ ಹೆಚ್ಚಿಸಲು ಕಾಲೇಜು ಅನೇಕ ಅವಕಾಶಗಳನ್ನು ಒದಗಿಸುತ್ತಿದ್ದು ಈ ಪ್ರಶಸ್ತಿಗಳು ನಮಗೆ ಇನ್ನಷ್ಟು ಹುರುಪನ್ನು ತಂದಿವೆ ಎಂದು ಕಾಲೇಜಿನ ಪ್ರಾಂಶುಪಾಲ ಸಂತೋಷ್ ರವರು ಸೆ.21 ರಂದು ಎಸ್‌ಡಿಎಂ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.


ಪತ್ರಿಕಾಗೋಷ್ಠಿಯಲ್ಲಿ ಹೆಚ್‌ಓಡಿ ಆಫ್ ಸಿವಿಲ್ ಡಿಪಾರ್ಟ್‌ಮೆಂಟ್ ತೃಪ್ತಿ ಬಿ.ಎಂ., ವ್ಯವಸ್ಥಾಪಕ ಚಂದ್ರನಾಥ್ ಜೈನ್, ಮೆಕ್ಯಾನಿಕಲ್ ವಿಭಾಗದ ಉಪನ್ಯಾಸಕರಾದ ಶಿವರಾಜ್ ಹಾಗೂ ಸಾಯಿಚರಣ್ ಉಪಸ್ಥಿತರಿದ್ದರು.

Related posts

ಚಾರ್ಮಾಡಿ ಶ್ರೀ ಕ್ಷೇತ್ರ ಮತ್ತೂರು ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ವಾರ್ಷಿಕ ಜಾತ್ರೆ: ಸಾನಿಧ್ಯ ಕಲಶಾಭಿಷೇಕ, ಉತ್ಸವಬಲಿ

Suddi Udaya

ಉರುವಾಲು ಮಹಮ್ಮಾಯಿ ಸಂಘದ ವಾರ್ಷಿಕ ಮಹಾಸಭೆ

Suddi Udaya

ಬೆಳ್ತಂಗಡಿ ಎಸ್ ಡಿ ಎಮ್ ಆಂ.ಮಾ. ಶಾಲೆಯಲ್ಲಿ ಸ್ಕೌಟ್ ಗೈಡ್ ಗಳಿಂದ ವಿಭಿನ್ನ ರೀತಿಯಲ್ಲಿ ಚಿಂತನಾ ದಿನಾಚರಣೆ

Suddi Udaya

ಬೆಳ್ತಂಗಡಿ ತಾಲೂಕಿನ ಪಂಚ ಗ್ಯಾರಂಟಿ ಸಮಾವೇಶ

Suddi Udaya

ಸರಕಾರದಿಂದ 2024ರ ಸಾರ್ವತ್ರಿಕ ರಜೆ ದಿನ ಪ್ರಕಟ

Suddi Udaya

ಜೋಗಿ ಪುರುಷರ ವೃಂದ ನಿಟ್ಟಡ್ಕ ನಾಲ್ಕೂರು ವತಿಯಿಂದ ರಾಶಿಪೂಜೆ: ಶಾಸಕ ಹರೀಶ್ ಪೂಂಜರವರಿಗೆ ಗೌರವಾರ್ಪಣೆ, ಪೂಜೆಯಲ್ಲಿ ನೂರಾರು ಭಕ್ತರು ಭಾಗಿ

Suddi Udaya
error: Content is protected !!