25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಮಾಸ್ಟರ್ಸ್ ಕೋಚಿಂಗ್ ಕ್ಲಾಸ್ ನಲ್ಲಿ ಶಿಕ್ಷಕರ ದಿನಾಚರಣೆ

ಬೆಳ್ತಂಗಡಿ : ವಿದ್ಯಾರ್ಥಿಗಳು ಶಿಕ್ಷಕರ ಜೊತೆ ಇಟ್ಟುಕೊಳ್ಳುವ ಉತ್ತಮ ಭಾಂದವ್ಯ ಅವರ ಜೀವನಕ್ಕೆ ದಾರಿದೀಪ ವಾಗಬಲ್ಲುದು. ಅದೇ ರೀತಿ ಶಿಕ್ಷಕರ ವ್ಯಕ್ತಿತ್ವ ವಿದ್ಯಾರ್ಥಿಗಳಿಗೆ ಮಾದರಿಯಾಗಿರಬೇಕು ಎಂದು ಕೋಚಿಂಗ್ ಸೆಂಟರ್ ನ ಸಂಚಾಲಕರಾದ ಸಂತೋಷ್ ಕುಮಾರ್ ರವರು ಹೇಳಿದರು.

ಇವರು ಮಾಸ್ಟರ್ಸ್ ಕೋಚಿಂಗ್ ಸೆಂಟರ್ ನಲ್ಲಿ ನಡೆದ ಶಿಕ್ಷಕರ ದಿನಾಚರಣೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಶಿಕ್ಷಕಿ ಹೇಮಾವತಿ ಕೆ. ವಿದ್ಯಾರ್ಥಿಗಳ ಸಂಘಟಿತ ಸಹಕಾರದ ಕಾರ್ಯಕ್ರಮಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದರು. ವೇದಿಕೆಯಲ್ಲಿ ಕೋಚಿಂಗ್ ಸೆಂಟರ್ ಮುಖ್ಯ ಶಿಕ್ಷಕಿ ರಮ್ಯಾ, ಶಿಕ್ಷಕರಾದ ದಿನೇಶ್, ಪಲ್ಲವಿ, ತೃಪ್ತಿ, ನಯನಾ, ಗುಣಶ್ರಿ, ಲತಾಶ್ರಿ, ಅಶ್ವಿನಿ, ನಾಗವೇಣಿ, ರೇಖಾ ಉಪಸ್ಥಿತರಿದ್ದರು.

ಸರ್ವಪಲ್ಲಿ ಡಾ.ರಾಧಾಕೃಷ್ಣನ್ ರವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಗೈಯುವ ಮೂಲಕ ಪ್ರಾರಂಭವಾದ ಕಾರ್ಯಕ್ರಮದಲ್ಲಿ
ವಿದ್ಯಾರ್ಥಿಗಳಾದ ಮಾನ್ಯ ಸ್ವಾಗತಿಸಿ, ಪ್ರೀತೇಶ್ ಧನ್ಯವಾದವಿತ್ತರು. ಸನ್ನಿಧಿ ಕಾರ್ಯಕ್ರಮ ನಿರೂಪಿಸಿದರು. ಅಸ್ನ ಮತ್ತು ಅಂಜಲಿ ಶಿಕ್ಷಕರ ದಿನಾಚರಣೆ ಕುರಿತು ಮಾತನಾಡಿದರು. ಈ ಸಂದರ್ಭದಲ್ಲಿ ಶಿಕ್ಷಕರಿಗೆ ವಿವಿಧ ಸ್ಪರ್ಧೆಯನ್ನು ಏರ್ಪಡಿಸಲಾಯಿತು.

Related posts

ಬಂಗಾಡಿ ವಲಯ ಮಟ್ಟದ ಪ್ರತಿಭಾ ಕಾರಂಜಿ – ಸ್ಟಾರ್ ಲೈನ್ ಆಂ.ಮಾ. ಶಾಲೆ ರಝಾ ಗಾರ್ಡನ್ ಶಾಲಾ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ಯಶೋಧ ಕೃಷ್ಣ ವೀಡಿಯೋ ಸ್ಪರ್ಧೆ: ಕಲ್ಮಂಜದ ರಿದ್ವಿ ಡಿ.ಆರ್ ಹಾಗೂ ಭಕ್ತಿ ಜಿ. ವಿನ್ನರ್

Suddi Udaya

ನಿಡ್ಲೆಯ ಪ್ರತಿಷ್ಠಿತ ಸಂಸ್ಥೆ ಅಗ್ರಿಲೀಫ್ ಗೆ ಉಡುಪಿ ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಭೇಟಿ

Suddi Udaya

ಬೆಳ್ತಂಗಡಿ: ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘದಿಂದ ಅಪಘಾತದಲ್ಲಿ ನಿಧನರಾದ ದಿ. ಶೇಖರ ಬಂಗೇರರಿಗೆ ನುಡಿನಮನ

Suddi Udaya

ನನ್ನ ವಿರುದ್ಧ ಹಿಂದೂಗಳನ್ನು ಎತ್ತಿಕಟ್ಟುವ ಕೆಲಸ ಮಾಡಿದ್ದಾರೆನಾನು ತಪ್ಪು ಮಾಡಿದ್ದರೆ ಸುರುವಿಗೆ ಮಾರಿಗುಡಿ ಅಮ್ಮ ನನಗೆ ಪ್ರಾಯಶ್ಚಿತ ಮಾಡಲಿ,

Suddi Udaya

ಕಳಿಯ ಕೃಷಿ ಪತ್ತಿನ ಸಹಕಾರ ಸಂಘದ ಚುನಾವಣೆಗೆ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳ ನಾಮಪತ್ರ ಸಲ್ಲಿಕೆ

Suddi Udaya
error: Content is protected !!