23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಮಾಸ್ಟರ್ಸ್ ಕೋಚಿಂಗ್ ಕ್ಲಾಸ್ ನಲ್ಲಿ ಶಿಕ್ಷಕರ ದಿನಾಚರಣೆ

ಬೆಳ್ತಂಗಡಿ : ವಿದ್ಯಾರ್ಥಿಗಳು ಶಿಕ್ಷಕರ ಜೊತೆ ಇಟ್ಟುಕೊಳ್ಳುವ ಉತ್ತಮ ಭಾಂದವ್ಯ ಅವರ ಜೀವನಕ್ಕೆ ದಾರಿದೀಪ ವಾಗಬಲ್ಲುದು. ಅದೇ ರೀತಿ ಶಿಕ್ಷಕರ ವ್ಯಕ್ತಿತ್ವ ವಿದ್ಯಾರ್ಥಿಗಳಿಗೆ ಮಾದರಿಯಾಗಿರಬೇಕು ಎಂದು ಕೋಚಿಂಗ್ ಸೆಂಟರ್ ನ ಸಂಚಾಲಕರಾದ ಸಂತೋಷ್ ಕುಮಾರ್ ರವರು ಹೇಳಿದರು.

ಇವರು ಮಾಸ್ಟರ್ಸ್ ಕೋಚಿಂಗ್ ಸೆಂಟರ್ ನಲ್ಲಿ ನಡೆದ ಶಿಕ್ಷಕರ ದಿನಾಚರಣೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಶಿಕ್ಷಕಿ ಹೇಮಾವತಿ ಕೆ. ವಿದ್ಯಾರ್ಥಿಗಳ ಸಂಘಟಿತ ಸಹಕಾರದ ಕಾರ್ಯಕ್ರಮಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದರು. ವೇದಿಕೆಯಲ್ಲಿ ಕೋಚಿಂಗ್ ಸೆಂಟರ್ ಮುಖ್ಯ ಶಿಕ್ಷಕಿ ರಮ್ಯಾ, ಶಿಕ್ಷಕರಾದ ದಿನೇಶ್, ಪಲ್ಲವಿ, ತೃಪ್ತಿ, ನಯನಾ, ಗುಣಶ್ರಿ, ಲತಾಶ್ರಿ, ಅಶ್ವಿನಿ, ನಾಗವೇಣಿ, ರೇಖಾ ಉಪಸ್ಥಿತರಿದ್ದರು.

ಸರ್ವಪಲ್ಲಿ ಡಾ.ರಾಧಾಕೃಷ್ಣನ್ ರವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಗೈಯುವ ಮೂಲಕ ಪ್ರಾರಂಭವಾದ ಕಾರ್ಯಕ್ರಮದಲ್ಲಿ
ವಿದ್ಯಾರ್ಥಿಗಳಾದ ಮಾನ್ಯ ಸ್ವಾಗತಿಸಿ, ಪ್ರೀತೇಶ್ ಧನ್ಯವಾದವಿತ್ತರು. ಸನ್ನಿಧಿ ಕಾರ್ಯಕ್ರಮ ನಿರೂಪಿಸಿದರು. ಅಸ್ನ ಮತ್ತು ಅಂಜಲಿ ಶಿಕ್ಷಕರ ದಿನಾಚರಣೆ ಕುರಿತು ಮಾತನಾಡಿದರು. ಈ ಸಂದರ್ಭದಲ್ಲಿ ಶಿಕ್ಷಕರಿಗೆ ವಿವಿಧ ಸ್ಪರ್ಧೆಯನ್ನು ಏರ್ಪಡಿಸಲಾಯಿತು.

Related posts

ಶಾಲಾ-ಕಾಲೇಜುಗಳಲ್ಲಿ ಸಂವಿಧಾನ ಪೀಠಿಕೆ ಓದುವುದು ಕಡ್ಡಾಯ: ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಸಿ.ಎಂ ನಿರ್ಧಾರ

Suddi Udaya

ಗುರುವಾಯನಕೆರೆ: ನಿಸರ್ಗ ಕರ್ಟನ್ & ವಾಲ್ ಪೇಪರ್ ಮಳಿಗೆಯಲ್ಲಿ ದೀಪಾವಳಿ ಪ್ರಯುಕ್ತ ಗ್ರಾಹಕರಿಗೆ ಸ್ಪೆಷಲ್ ಡಿಸ್ಕೌಂಟ್ ಸೇಲ್

Suddi Udaya

ನಾವೂರು ಹಾಲು ಉತ್ಪಾದಕರ ಸಹಕಾರಿ ಸಂಘದ ವಾರ್ಷಿಕ ಸಾಮಾನ್ಯ ಸಭೆ

Suddi Udaya

ಬೆಳ್ತಂಗಡಿ : ಶಾಸಕ ಹರೀಶ್ ಪೂಂಜ ತಾಲೂಕು ಆಡಳಿತ ಕಚೇರಿಗೆ ಭೇಟಿ

Suddi Udaya

ಬೆಳ್ತಂಗಡಿ: ಜೆಪಿ ಅಟ್ಯಾಕ್ರ್ಸ್ ಪ್ರಾಯೋಜಕತ್ವದಲ್ಲಿ ತಾಲೂಕು ಮಟ್ಟದ ಅಂಡರ್ ಆರ್ಮ್ ಸೂಪರ್ ಸಿಕ್ಸ್ ಕ್ರಿಕೆಟ್ ಪಂದ್ಯಾಟ

Suddi Udaya

ಬೆಳ್ತಂಗಡಿ: ಶ್ರೀ ಧ.ಮಂ. ಆಂ.ಮಾ. ಶಾಲೆಯ ಸ್ಕೌಟ್ ವಿದ್ಯಾರ್ಥಿಗೆ ರಾಜ್ಯಮಟ್ಟದ ಪ್ರಶಸ್ತಿ ಪತ್ರ

Suddi Udaya
error: Content is protected !!