July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಮಾಸ್ಟರ್ಸ್ ಕೋಚಿಂಗ್ ಕ್ಲಾಸ್ ನಲ್ಲಿ ಶಿಕ್ಷಕರ ದಿನಾಚರಣೆ

ಬೆಳ್ತಂಗಡಿ : ವಿದ್ಯಾರ್ಥಿಗಳು ಶಿಕ್ಷಕರ ಜೊತೆ ಇಟ್ಟುಕೊಳ್ಳುವ ಉತ್ತಮ ಭಾಂದವ್ಯ ಅವರ ಜೀವನಕ್ಕೆ ದಾರಿದೀಪ ವಾಗಬಲ್ಲುದು. ಅದೇ ರೀತಿ ಶಿಕ್ಷಕರ ವ್ಯಕ್ತಿತ್ವ ವಿದ್ಯಾರ್ಥಿಗಳಿಗೆ ಮಾದರಿಯಾಗಿರಬೇಕು ಎಂದು ಕೋಚಿಂಗ್ ಸೆಂಟರ್ ನ ಸಂಚಾಲಕರಾದ ಸಂತೋಷ್ ಕುಮಾರ್ ರವರು ಹೇಳಿದರು.

ಇವರು ಮಾಸ್ಟರ್ಸ್ ಕೋಚಿಂಗ್ ಸೆಂಟರ್ ನಲ್ಲಿ ನಡೆದ ಶಿಕ್ಷಕರ ದಿನಾಚರಣೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಶಿಕ್ಷಕಿ ಹೇಮಾವತಿ ಕೆ. ವಿದ್ಯಾರ್ಥಿಗಳ ಸಂಘಟಿತ ಸಹಕಾರದ ಕಾರ್ಯಕ್ರಮಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದರು. ವೇದಿಕೆಯಲ್ಲಿ ಕೋಚಿಂಗ್ ಸೆಂಟರ್ ಮುಖ್ಯ ಶಿಕ್ಷಕಿ ರಮ್ಯಾ, ಶಿಕ್ಷಕರಾದ ದಿನೇಶ್, ಪಲ್ಲವಿ, ತೃಪ್ತಿ, ನಯನಾ, ಗುಣಶ್ರಿ, ಲತಾಶ್ರಿ, ಅಶ್ವಿನಿ, ನಾಗವೇಣಿ, ರೇಖಾ ಉಪಸ್ಥಿತರಿದ್ದರು.

ಸರ್ವಪಲ್ಲಿ ಡಾ.ರಾಧಾಕೃಷ್ಣನ್ ರವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಗೈಯುವ ಮೂಲಕ ಪ್ರಾರಂಭವಾದ ಕಾರ್ಯಕ್ರಮದಲ್ಲಿ
ವಿದ್ಯಾರ್ಥಿಗಳಾದ ಮಾನ್ಯ ಸ್ವಾಗತಿಸಿ, ಪ್ರೀತೇಶ್ ಧನ್ಯವಾದವಿತ್ತರು. ಸನ್ನಿಧಿ ಕಾರ್ಯಕ್ರಮ ನಿರೂಪಿಸಿದರು. ಅಸ್ನ ಮತ್ತು ಅಂಜಲಿ ಶಿಕ್ಷಕರ ದಿನಾಚರಣೆ ಕುರಿತು ಮಾತನಾಡಿದರು. ಈ ಸಂದರ್ಭದಲ್ಲಿ ಶಿಕ್ಷಕರಿಗೆ ವಿವಿಧ ಸ್ಪರ್ಧೆಯನ್ನು ಏರ್ಪಡಿಸಲಾಯಿತು.

Related posts

ಬೆಳ್ತಂಗಡಿ: ದ್ವೇಷ ಭಾಷಣ ಆರೋಪ- ವಿ.ಹಿಂ.ಪ. ನ ಜಿಲ್ಲಾ ಕಾರ್ಯದರ್ಶಿ ನವೀನ್ ನೆರಿಯ ವಿರುದ್ಧ ಕಡಬ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಮಾ.31-ಎ.4: ಸುಲ್ಕೇರಿ ನಾವರ ಶ್ರೀ ಮಹಾಲಿಂಗೇಶ್ವರ ದೇವರಿಗೆ ಅಷ್ಟಬಂಧ ಬ್ರಹ್ಮಕಲಶೋತ್ಸವ: ಮಾ.31 ವೈಭವಯುತ ಹಸಿರುವಾಣಿ ಹೊರೆಕಾಣಿಕೆ ಮೆರವಣಿಗೆ

Suddi Udaya

ಮೇ 19: ಬೆಳ್ತಂಗಡಿ ಶಾಂತಿಶ್ರೀ ಜೈನ ಮಹಿಳಾ ಸಮಾಜ ವತಿಯಿಂದ ಸಾಂಸ್ಕೃತಿಕ ವೈಭವ

Suddi Udaya

ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಯಿಂದ ಅಶಕ್ತ ಕುಟುಂಬಗಳಿಗೆ ರೂ.46 ಸಾವಿರ ಆರ್ಥಿಕ ನರೆವು

Suddi Udaya

ಮಿತ್ತಬಾಗಿಲು: ತೋಟಕ್ಕೆ ನುಗ್ಗಿದ ಆನೆ; ಅಪಾರ ಕೃಷಿ ಹಾನಿ

Suddi Udaya

ಅರಸಿನಮಕ್ಕಿ : ಸೈನಿಕ ಕೆ. ಮಹಾಬಲ ಮುದ್ದಿಗೆಯವರಿಗೆ ನಾಗರಿಕರಿಂದ ಅಭಿನಂದನೆ

Suddi Udaya
error: Content is protected !!