23.3 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂ.ಮಾ. ಶಾಲೆಯಲ್ಲಿ ಹಿಂದಿ ದಿವಸ್ ಆಚರಣೆ

ಧರ್ಮಸ್ಥಳ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ಧರ್ಮಸ್ಥಳದಲ್ಲಿ ಹಿಂದಿ ದಿವಸ್ ಆಚರಿಸಲಾಯಿತು.

ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಮಹಾವಿದ್ಯಾಲಯದ ಹಿಂದಿ ಪ್ರಾಧ್ಯಾಪಕರಾದ ಶ್ರೀಮತಿ ಶ್ರುತಿ ಮನಕೀಕರ್ ಆಗಮಿಸಿ, ದೀಪ ಬೆಳಗಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಹಿಂದಿ ದಿವಸದ ಮಹತ್ವ, ಹಿಂದಿ ಲಿಪಿ ಹಿಂದಿ ಭಾಷೆಯನ್ನು ಉಳಿಸಿ ಬೆಳೆಸುವುದು ಮತ್ತು ಎಲ್ಲರೂ ಒಂದೇ ಎಂಬ ಭಾವದಿಂದ, ರಾಷ್ಟ್ರ ಪ್ರೇಮವನ್ನು ಬೆಳೆಸಿಕೊಂಡು, ಭ್ರಾತೃತ್ವದಿಂದ, ದೇಶದ ಗೌರವವನ್ನು ಉಳಿಸಿ, ಬೆಳೆಸಿಕೊಂಡು ಹೋಗುವ ಪ್ರತಿಜ್ಞೆ ಬೋಧಿಸಿದರು. ಹಿಂದಿ ಪ್ರಬಂಧ ರಚನೆಯ ಸ್ಪರ್ಧೆಯ ವಿಜೇತರಿಗೆ ಬಹುಮಾನ ವಿತರಿಸಲಾಯಿತು. ವಿದ್ಯಾರ್ಥಿನಿ ಕುಮಾರಿ ನಿವೇದ್ಯಾ ನಿರೂಪಿಸಿದ ಈ ಕಾರ್ಯಕ್ರಮದಲ್ಲಿ ಕುಮಾರಿ ಸಿಂಧೂರ ಸ್ವಾಗತಿಸಿ, ಕುಮಾರಿ ಶ್ರೇಷ್ಠ ಅತಿಥಿಗಳನ್ನು ಪರಿಚಯಿಸಿ, ಕುಮಾರಿ ಕಲ್ಪಿತಾ ಧನ್ಯವಾದ ಸಮರ್ಪಿಸಿದರು. ಶಾಲಾ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಪರಿಮಳ ಎಂ ವಿ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.

ಹಿಂದಿ ಶಿಕ್ಷಕಿಯರಾದ ಶ್ರೀಮತಿ ಮಮತಾ ಮತ್ತು ಶ್ರೀಮತಿ ಅಮೃತಾ ರೂಪುಗೊಳಿಸಿದ ಕಾರ್ಯಕ್ರಮದಲ್ಲಿ ಹಿಂದಿ ಭಾಷೆಯಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು.

Related posts

ಪೆರ್ಲ -ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವಸ್ಥಾನದ ಪುನರ್ ಪ್ರತಿಷ್ಟಾಬಂಧ ಬ್ರಹ್ಮಕಲಶೋತ್ಸವಕ್ಕೆ ಮಾಜಿ ಶಾಸಕರಾದ ಪ್ರಭಾಕರ ಬಂಗೇರ ಭೇಟಿ

Suddi Udaya

ಕೊಕ್ಕಡ ಜಾರಿಗೆತಡಿ ನಿವಾಸಿ ಮೋನಪ್ಪ ಗೌಡ ನಿಧನ

Suddi Udaya

ನಾವೂರು: ಸುಳ್ಯೋಡಿ ಸ.ಕಿ.ಪ್ರಾ. ಶಾಲಾ ವಾರ್ಷಿಕೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಬೆಳ್ತಂಗಡಿ: ವಾಣಿ ಕಾಲೇಜಿನ ವಿದ್ಯಾರ್ಥಿ ಅನುಕ್ಷಾ ರಾಷ್ಟ್ರೀಯ ಭಾವೈಕ್ಯತಾ ಶಿಬಿರಕ್ಕೆ ಆಯ್ಕೆ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀ ಪೂರ್ವಾಧ್ಯಕ್ಷ, ಉದ್ಯಮಿ ಪೃಥ್ವಿ ರಂಜನ್ ರಾವ್ ಹೃದಯಾಘಾತದಿಂದ ನಿಧನ

Suddi Udaya

ಬಜಿರೆ :ನರದ ಸಮಸ್ಯೆಯಿಂದ ಬಳಲುತ್ತಿರುವ ಮಾಲತಿಯವರಿಗೆ ವೇಣೂರು ಯುವವಾಹಿನಿ ಘಟಕದ ವತಿಯಿಂದ ಮಂಚ ಕೊಡುಗೆ

Suddi Udaya
error: Content is protected !!