8 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸಿದ್ದ ಬೆಳ್ತಂಗಡಿ ಪೊಲೀಸರು

Suddi Udaya

Updated on:

ಬೆಳ್ತಂಗಡಿ: ಸುಮಾರು 8 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿದ ವಾರಂಟು ಆಸಾಮಿ ಡೆನ್ನಿ ಜೋಸೆಫ್ ಯಾನೆ ಅಂತೋನಿ ಎಂಬವರನ್ನು ಸೆ. 21 ರಂದು ಉಜಿರೆ ಎಂಬಲ್ಲಿಂದ ದಸ್ತಗಿರಿ ಮಾಡಿ ನ್ಯಾಯಾಲಯ ಮುಂದೆ ಹಾಜರಪಡಿಸಿದ್ದು ನ್ಯಾಯಾಂಗ ಬಂಧನಕ್ಕೆ ಮಂಗಳೂರು ಜೈಲಿಗೆ ಕಳುಹಿಸಲಾಗಿದೆ..

ಬೆಳ್ತಂಗಡಿ ಪೊಲೀಸ್ ಠಾಣೆ ಅಕ್ರ 172/2014 ಕಲಂ 354(b) 323,324,504,506 ಐಪಿಸಿ ಪ್ರಕರಣವು ಬೆಳ್ತಂಗಡಿ Principle CJ & JMFC ಸಿ ಸಿ ನಂಬ್ರ-188/2015. LPC 01/24 ಪ್ರಕರಣದಲ್ಲಿ ಸುಮಾರು 8 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿದ ವಾರಂಟು ಕಾಸರಗೋಡು ಜಿಲ್ಲೆಯ ಹೊಸದುರ್ಗ ಚೆಟ್ಟರಿಕಲ್ ನಿವಾಸಿ ಡೆನ್ನಿ ಜೋಸೆಫ್ ಯಾನೆ ಅಂತೋನಿ ಎಂಬವರನ್ನು ಸೆ. 21 ರಂದು ಬೆಳ್ತಂಗಡಿ ಪೊಲೀಸ್ ಠಾಣಾ ನಿರೀಕ್ಷಕರು ಬಿ ಜಿ ಸುಬ್ಬಾಪುರ ಮಠ, ಉಪ ನೀರಿಕ್ಷಕರು ಮುರಳೀಧರ್ ರವರ ನಿರ್ದೇಶನದಂತೆ ಠಾಣಾ ಹೆಚ್ ಸಿ 418 ವ್ರಷಭ, ಹೆ ಚ್ ಸಿ 2173 ಪಳನಿವೇಲು ಮತ್ತು ಪಿಸಿ 2398 ಮುನಿಯ ನಾಯ್ಕ ರವರು ಖಚಿತ ಮಾಹಿತಿ ಆಧಾರದಲ್ಲಿ ಬೆಳ್ತಂಗಡಿ ತಾಲೂಕು ಉಜಿರೆ ಎಂಬಲ್ಲಿಂದ ದಸ್ತಗಿರಿ ಮಾಡಿ ಮಾನ್ಯ ನ್ಯಾಯಾಲಯ ಮುಂದೆ ಹಾಜರಪಡಿಸಿದ್ದು ನ್ಯಾಯಾಂಗ ಬಂಧನಕ್ಕೆ ಮಂಗಳೂರು ಜೈಲಿಗೆ ನೀಡಿರುತ್ತಾರೆ..

Leave a Comment

error: Content is protected !!