25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ ಶ್ರೀ ಧ.ಮಂ. ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ‘ಮಹಿಳಾ ಆರೋಗ್ಯ ಮತ್ತು ಸುರಕ್ಷಾ ಕ್ರಮ ಹಾಗೂ ಯೋಗದ ಪ್ರಾಮುಖ್ಯ’ ಕಾರ್ಯಾಗಾರ

ಉಜಿರೆ: ಮನುಷ್ಯನ ಬದುಕಿನ ಅವಿಭಾಜ್ಯ ಅಂಗ ಮನಸ್ಸು. ಮನಸ್ಸು ಸ್ಥಿಮಿತದಲ್ಲಿ ಇಲ್ಲವಾದಲ್ಲಿ ಕಾಯಿಲೆ ಬರುವುದು, ಕೋಪ, ಹಠ, ಸಿಟ್ಟು ಮುಂತಾದ ಅನೇಕ ಸಮಸ್ಯೆಗಳು ಬರುವುದರಿಂದ ಜೀವನದಲ್ಲಿ ದೇಹದ ಆರೋಗ್ಯ ಕಾಪಾಡುವುದಕ್ಕಿಂತಲೂ ಮನಸ್ಸಿನ ಆರೋಗ್ಯ ಕಾಪಾಡುವುದು ಅಗತ್ಯ ಎಂದು ಉಜಿರೆಯ ಶ್ರೀ ಧ.ಮಂ. ಪ್ರಕೃತಿ ಚಿಕಿತ್ಸೆ ಮತ್ತು ಯೋಗವಿಜ್ಞಾನಗಳ ಮಹಾವಿದ್ಯಾಲಯದ ಸಹಾಯಕ ಪ್ರಾಧ್ಯಾಪಕಿ ಹಾಗೂ ಎನ್.ಎಸ್.ಎಸ್. ಯೋಜನಾಧಿಕಾರಿ ಡಾ. ಮೇಘನಾ ಅಭಿಪ್ರಾಯಪಟ್ಟರು.


ಕಾಲೇಜಿನ ಎನ್ನೆಸ್ಸೆಸ್ ಘಟಕದ ವತಿಯಿಂದ ಸೆ. 20 ರಂದು ಇಲ್ಲಿನ ಶ್ರೀ ಧ.ಮಂ. ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಆಯೋಜಿಸಿದ್ದ ‘ಮಹಿಳಾ ಆರೋಗ್ಯ ಮತ್ತು ಸುರಕ್ಷಾ ಕ್ರಮ ಹಾಗೂ ಯೋಗದ ಪ್ರಾಮುಖ್ಯ’ ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು.


ಪರೋಪಕಾರ ಮತ್ತು ನಿಸ್ವಾರ್ಥ ಸೇವೆಯಿಂದ ಮನಸ್ಸಿನ ಆರೋಗ್ಯ ಕಾಪಾಡಿಕೊಳ್ಳಬಹುದು. ಜೊತೆಗೆ, ಯೋಗ, ಧ್ಯಾನ ಮತ್ತು ಪ್ರಾಣಾಯಾಮ ಮಾಡುವುದರಿಂದ ಮನಸ್ಸನ್ನು ಸ್ಥಿಮಿತದಲ್ಲಿ ಇಟ್ಟುಕೊಳ್ಳಬಹುದು ಎಂದು ಅವರು ತಿಳಿಸಿದರು.
ಶ್ರೀ ಧ.ಮಂ. ಪ್ರಕೃತಿ ಚಿಕಿತ್ಸೆ ಮತ್ತು ಯೋಗವಿಜ್ಞಾನಗಳ ಮಹಾವಿದ್ಯಾಲಯದ ಹಿರಿಯ ವಿದ್ಯಾರ್ಥಿಗಳಾದ ದಿವ್ಯಾ, ಸಂಗೀತ ಮತ್ತು ಸಿಂಧು ಮಹಿಳೆಯರ ಆರೋಗ್ಯದ ಕುರಿತು ಮಾಹಿತಿ ನೀಡಿದರು. ಶಮ ಹಾಗೂ ಉಲ್ಲಾಸ್ ಎಂ.ಆರ್. ಯೋಗದ ಮಹತ್ವದ ಮಾಹಿತಿ ನೀಡಿದರು.


ಶ್ರೀ ಧ.ಮಂ. ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯ ಪ್ರಾಂಶುಪಾಲ ವಿ. ಪ್ರಕಾಶ್ ಕಾಮತ್ ಪ್ರಾಸ್ತಾವಿಕ ನುಡಿಗಳನ್ನಾಡಿದರು.
ಇಂಗ್ಲಿಷ್ ಉಪನ್ಯಾಸಕ ಸಚಿನ್ ಉಪಸ್ಥಿತರಿದ್ದರು.

Related posts

ತಾಲೂಕಿನಾದ್ಯಂತ ಸುರಿಯುತ್ತಿರುವ ಮಳೆಯ ಮುಂಜಾಗ್ರತಾ ಕ್ರಮವಾಗಿ ಶಾಸಕ ಹರೀಶ್ ಪೂಂಜರಿಂದ ಅಧಿಕಾರಿಗಳ ಸಭೆ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದಲ್ಲಿ ಶ್ರೀ  ಗಣೇಶ ಚತುರ್ಥಿ ಪ್ರಯುಕ್ತ 108 ತೆಂಗಿನ ಕಾಯಿ ಗಣಹೋಮ ಹಾಗೂ ರಂಗಪೂಜೆ

Suddi Udaya

ಬೆಳ್ತಂಗಡಿ ಬಗರ್ ಹುಕ್ಂ ಅಕ್ರಮ ಸಕ್ರಮ ಸಮಿತಿ ಸಭೆ

Suddi Udaya

ಯುವವಾಹಿನಿ ವೇಣೂರು ಘಟಕದ ಅಧ್ಯಕ್ಷರಾಗಿ ಶುಭಕರ್ ಪೂಜಾರಿ, ಕಾರ್ಯದರ್ಶಿಯಾಗಿ ರಕ್ಷಿತ್ ಬಂಗೇರ

Suddi Udaya

ಬಂಗಾಡಿ ವಲಯ ಮಟ್ಟದ ಪ್ರತಿಭಾ ಕಾರಂಜಿ – ಸ್ಟಾರ್ ಲೈನ್ ಆಂ.ಮಾ. ಶಾಲೆ ರಝಾ ಗಾರ್ಡನ್ ಶಾಲಾ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ಕನ್ಯಾಡಿ ಶ್ರೀ ರಾಮ ಕ್ಷೇತ್ರದ ನೂತನ ಟ್ರಸ್ಟಿಯಾಗಿ ಬಿ ಪೀತಾಂಬರ ಹೆರಾಜೆ

Suddi Udaya
error: Content is protected !!