ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಉರುವಾಲು ಶ್ರೀ ಭಾರತೀ ಆಂ.ಮಾ. ಪ್ರೌಢ ಶಾಲೆಯಲ್ಲಿ ವಲಯ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆ

ಉರುವಾಲು: ಇಲ್ಲಿಯ ಶ್ರೀ ಭಾರತೀ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯಲ್ಲಿ ಸೆ.20 ರಂದು ಪುಂಜಾಲಕಟ್ಟೆ ವಲಯ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯು ನಡೆಯಿತು. ಈ ಸ್ಪರ್ಧೆಗಳಲ್ಲಿ ಸರಿ ಸುಮಾರು 30 ಕ್ಕೂ ಅಧಿಕ ಶಾಲೆಗಳ ವಿದ್ಯಾರ್ಥಿಗಳು ಭಾಗವಹಿಸಿ ಪ್ರಶಸ್ತಿಗಳನ್ನು ತಮ್ಮದಾಗಿಸಿಕೊಂಡರು.


ಕಾರ್ಯಕ್ರಮದ ಉದ್ಘಾಟನೆಯನ್ನು ಉಪ್ಪಿನಂಗಡಿ ಮಹಾಮಂಡಲದ ಅಧ್ಯಕ್ಷ ಈಶ್ವರ ಪ್ರಸನ್ನ ಪರ್ನೆಕೊಡಿ ನೆರವೇರಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸೇವಾ ಸಮಿತಿಯ ಕಾರ್ಯದರ್ಶಿ ಶ್ಯಾಮ್ ಪ್ರಸಾದ್ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ವೇದಿಕೆಯಲ್ಲಿ ಪ್ರತಿಭಾ ಕಾರಂಜಿಯ ನೋಡಲ್ ಅಧಿಕಾರಿ ಶ್ರೀಮತಿ ಚೇತನಾಕ್ಷಿ , ಕುಪ್ಪೆಟ್ಟಿ ಕ್ಲಸ್ಟರ್ ಸಿಆರ್‍ ಪಿ ವಾರಿಜಾ, ಪುತ್ತಿಲ ಕ್ಲಸ್ಟರ್ ನ ಸಿ ಆರ್ ಪಿ ದಿನೇಶ್, ಕರಾಯ ಕ್ಲಸ್ಟರ್ ನ ಸಿ ಆರ್ ಪಿ ಮೊಹಮ್ಮದ್ ಶರೀಫ್, ಕೋರಿಂಜ ಪಂಚಲಿಂಗೇಶ್ವರ ದೇವಸ್ಥಾನ ಆಡಳಿತ ಮೊಕ್ತೇಸರರಾದ ಯೋಗೀಶ್ ಕಡ್ತಿಲ, ಉರುವಾಲು ಮಸೀದಿ ಅಧ್ಯಕ್ಷರು ಹಮೀದ್, ಉರುವಾಲು ವಲಯಾಧ್ಯಕ್ಷ ಕೃಷ್ಣ ಭಟ್, ಅನುದಾನಿತ ಶಾಲಾ ಮುಖ್ಯ ಶಿಕ್ಷಕ ಸಣ್ಣಪ್ಪ ಉಪಸ್ಥಿತರಿದ್ದರು.

ಆಗಮಿಸಿದ ಸರ್ವ ಗಣ್ಯರನ್ನು , ವಿವಿಧ ಶಾಲೆಗಳಿಂದ ಆಗಮಿಸಿದ ವಿದ್ಯಾರ್ಥಿ ಶಿಕ್ಷಕರನ್ನು ಶಾಲಾ ಮುಖ್ಯ ಶಿಕ್ಷಕಿ ಶ್ರೀಮತಿ ಶೋಭಿತ ಕೆ ಆರ್ ಸ್ವಾಗತಿಸಿದರು. ಶ್ರೀಮತಿ ಚೇತನಾಕ್ಷಿ ಪ್ರಾಸ್ತಾವಿಕ ನುಡಿದರು.ಸೇವಾ ಸಮಿತಿಯ ಸದಸ್ಯರಾದ ಸತ್ಯ ಶಂಕರ್ ಭಟ್ ಕಾರ್ಯಕ್ರಮದ ವ್ಯವಸ್ಥೆಗಳ ಬಗ್ಗೆ ಅನಿಸಿಕೆ ಅಭಿಪ್ರಾಯ ಹಂಚಿಕೊಂಡರು. ಸಹ ಶಿಕ್ಷಕಿ ಸೌಮ್ಯ ಇವರು ಧನ್ಯವಾದವಿತ್ತರು. ಕಾರ್ಯಕ್ರಮದ ನಿರೂಪಣೆಯನ್ನು ಶಿಕ್ಷಕ ಮಂಜು ಗಣೇಶ್ ಹಾಗು ದಿವ್ಯಾ ಶೆಟ್ಟಿ ನೆರವೇರಿಸಿದರು.

Related posts

ಕೂಕ್ರಬೆಟ್ಟು ಶಾಲೆಯಲ್ಲಿ ನಾರಾವಿ ವಲಯ ಮಟ್ಟದ ವಾಲಿಬಾಲ್‌ ಪಂದ್ಯಾಟ: ಸಾವ್ಯ, ಅಂಡಿಂಜೆ ಶಾಲಾ ಮಕ್ಕಳು ಪ್ರಥಮ

Suddi Udaya

ಸೌಜನ್ಯ ಕೊಲೆ ಪ್ರಕರಣದ ಮರು ತನಿಖೆಗೆ ಆದೇಶ ನೀಡುವಂತೆ ಒತ್ತಾಯಿಸಿ ಮಾಜಿ ಶಾಸಕ ವಸಂತ ಬಂಗೇರರಿಂದ ಬೆಂಗಳೂರಿನಲ್ಲಿ ಮುಖ್ಯಮಂತ್ರಿಗಳಿಗೆ ಮನವಿ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ, ಧರ್ಮಾಧಿಕಾರಿ ಡಾ. ಡಿ ವೀರೇಂದ್ರ ಹೆಗ್ಗಡೆ ಹಾಗೂ ಅವರ ಕುಟುಂಬ ಸದಸ್ಯರ ವಿರುದ್ಧ ಅವಹೇಳನಕಾರಿ, ಆಧಾರ ರಹಿತ ವಿಡಿಯೋ ಪೋಸ್ಟ್ ಗೆ ಕೋರ್ಟ್ ತಡೆಯಾಜ್ಞೆ – ಡಿಲೀಟ್ ಗೆ ಸೂಚನೆ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀ ವತಿಯಿಂದ ಬೆಳಕು ಕಾರ್ಯಕ್ರಮ

Suddi Udaya

ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ವತಿಯಿಂದ ಪಕ್ಷ ಸಂಘಟನಾ ದೃಷ್ಟಿಯಿಂದ ನಡೆದ ಕಣಿಯೂರು ಮಹಾಶಕ್ತಿ ಕೇಂದ್ರ ಸಭೆ

Suddi Udaya

ಮೇಲಂತಬೆಟ್ಟು ಗ್ರಾ.ಪಂ. ವ್ಯಾಪ್ತಿಯಲ್ಲಿ ಉಪವಲಯ ಅರಣ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿ ವರ್ಗಾವಣೆಗೊಂಡ ಸುರೇಶ ಗೌಡ್ರ ರವರಿಗೆ ಸನ್ಮಾನ

Suddi Udaya
error: Content is protected !!