July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಉರುವಾಲು ಶ್ರೀ ಭಾರತೀ ಆಂ.ಮಾ. ಪ್ರೌಢ ಶಾಲೆಯಲ್ಲಿ ವಲಯ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆ

ಉರುವಾಲು: ಇಲ್ಲಿಯ ಶ್ರೀ ಭಾರತೀ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯಲ್ಲಿ ಸೆ.20 ರಂದು ಪುಂಜಾಲಕಟ್ಟೆ ವಲಯ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯು ನಡೆಯಿತು. ಈ ಸ್ಪರ್ಧೆಗಳಲ್ಲಿ ಸರಿ ಸುಮಾರು 30 ಕ್ಕೂ ಅಧಿಕ ಶಾಲೆಗಳ ವಿದ್ಯಾರ್ಥಿಗಳು ಭಾಗವಹಿಸಿ ಪ್ರಶಸ್ತಿಗಳನ್ನು ತಮ್ಮದಾಗಿಸಿಕೊಂಡರು.


ಕಾರ್ಯಕ್ರಮದ ಉದ್ಘಾಟನೆಯನ್ನು ಉಪ್ಪಿನಂಗಡಿ ಮಹಾಮಂಡಲದ ಅಧ್ಯಕ್ಷ ಈಶ್ವರ ಪ್ರಸನ್ನ ಪರ್ನೆಕೊಡಿ ನೆರವೇರಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸೇವಾ ಸಮಿತಿಯ ಕಾರ್ಯದರ್ಶಿ ಶ್ಯಾಮ್ ಪ್ರಸಾದ್ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ವೇದಿಕೆಯಲ್ಲಿ ಪ್ರತಿಭಾ ಕಾರಂಜಿಯ ನೋಡಲ್ ಅಧಿಕಾರಿ ಶ್ರೀಮತಿ ಚೇತನಾಕ್ಷಿ , ಕುಪ್ಪೆಟ್ಟಿ ಕ್ಲಸ್ಟರ್ ಸಿಆರ್‍ ಪಿ ವಾರಿಜಾ, ಪುತ್ತಿಲ ಕ್ಲಸ್ಟರ್ ನ ಸಿ ಆರ್ ಪಿ ದಿನೇಶ್, ಕರಾಯ ಕ್ಲಸ್ಟರ್ ನ ಸಿ ಆರ್ ಪಿ ಮೊಹಮ್ಮದ್ ಶರೀಫ್, ಕೋರಿಂಜ ಪಂಚಲಿಂಗೇಶ್ವರ ದೇವಸ್ಥಾನ ಆಡಳಿತ ಮೊಕ್ತೇಸರರಾದ ಯೋಗೀಶ್ ಕಡ್ತಿಲ, ಉರುವಾಲು ಮಸೀದಿ ಅಧ್ಯಕ್ಷರು ಹಮೀದ್, ಉರುವಾಲು ವಲಯಾಧ್ಯಕ್ಷ ಕೃಷ್ಣ ಭಟ್, ಅನುದಾನಿತ ಶಾಲಾ ಮುಖ್ಯ ಶಿಕ್ಷಕ ಸಣ್ಣಪ್ಪ ಉಪಸ್ಥಿತರಿದ್ದರು.

ಆಗಮಿಸಿದ ಸರ್ವ ಗಣ್ಯರನ್ನು , ವಿವಿಧ ಶಾಲೆಗಳಿಂದ ಆಗಮಿಸಿದ ವಿದ್ಯಾರ್ಥಿ ಶಿಕ್ಷಕರನ್ನು ಶಾಲಾ ಮುಖ್ಯ ಶಿಕ್ಷಕಿ ಶ್ರೀಮತಿ ಶೋಭಿತ ಕೆ ಆರ್ ಸ್ವಾಗತಿಸಿದರು. ಶ್ರೀಮತಿ ಚೇತನಾಕ್ಷಿ ಪ್ರಾಸ್ತಾವಿಕ ನುಡಿದರು.ಸೇವಾ ಸಮಿತಿಯ ಸದಸ್ಯರಾದ ಸತ್ಯ ಶಂಕರ್ ಭಟ್ ಕಾರ್ಯಕ್ರಮದ ವ್ಯವಸ್ಥೆಗಳ ಬಗ್ಗೆ ಅನಿಸಿಕೆ ಅಭಿಪ್ರಾಯ ಹಂಚಿಕೊಂಡರು. ಸಹ ಶಿಕ್ಷಕಿ ಸೌಮ್ಯ ಇವರು ಧನ್ಯವಾದವಿತ್ತರು. ಕಾರ್ಯಕ್ರಮದ ನಿರೂಪಣೆಯನ್ನು ಶಿಕ್ಷಕ ಮಂಜು ಗಣೇಶ್ ಹಾಗು ದಿವ್ಯಾ ಶೆಟ್ಟಿ ನೆರವೇರಿಸಿದರು.

Related posts

ಉರುವಾಲು ಶ್ರೀ ಮಹಮ್ಮಾಯಿ ದೇವಸ್ಥಾನ ಪ್ರತಿಷ್ಠೋತ್ಸವದ ಪೂರ್ವಭಾವಿ ಸಭೆ

Suddi Udaya

ಬೆಳ್ತಂಗಡಿ ತಾಲೂಕು ಕಾರ್ಯನಿರ್ವಹಣಾಧಿಕಾರಿ ವೈಜಣ್ಣರವರಿಂದ ಕಲ್ಮಂಜ ರಮೇಶ್ ನಾಯ್ಕ ರವರ ಅಡಿಕೆ ತೋಟ ರಚನೆಯ ಪರಿಶೀಲನೆ

Suddi Udaya

ಕಳಿಯ : ಬಾಕಿಮಾರು ಮನೆಯ ಸುರೇಶ್ ಗೌಡ ನಿಧನ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಲ್ಲಿ ಸದಸ್ಯರಿಗೆ ಲೋಕಲ್ ಆರ್ಗನೈಜೇಷನ್ ಡೆವಲಪ್ಮೆಂಟ್ ತರಬೇತಿ

Suddi Udaya

ಕಲ್ಮಂಜ: ಅಕ್ಷಯ ನಗರದ ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ಗೋ ಪೂಜೆ

Suddi Udaya
error: Content is protected !!