ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂ.ಮಾ. ಶಾಲೆಯಲ್ಲಿ ಹಿಂದಿ ದಿವಸ್ ಆಚರಣೆ

ಧರ್ಮಸ್ಥಳ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ಧರ್ಮಸ್ಥಳದಲ್ಲಿ ಹಿಂದಿ ದಿವಸ್ ಆಚರಿಸಲಾಯಿತು.

ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಮಹಾವಿದ್ಯಾಲಯದ ಹಿಂದಿ ಪ್ರಾಧ್ಯಾಪಕರಾದ ಶ್ರೀಮತಿ ಶ್ರುತಿ ಮನಕೀಕರ್ ಆಗಮಿಸಿ, ದೀಪ ಬೆಳಗಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಹಿಂದಿ ದಿವಸದ ಮಹತ್ವ, ಹಿಂದಿ ಲಿಪಿ ಹಿಂದಿ ಭಾಷೆಯನ್ನು ಉಳಿಸಿ ಬೆಳೆಸುವುದು ಮತ್ತು ಎಲ್ಲರೂ ಒಂದೇ ಎಂಬ ಭಾವದಿಂದ, ರಾಷ್ಟ್ರ ಪ್ರೇಮವನ್ನು ಬೆಳೆಸಿಕೊಂಡು, ಭ್ರಾತೃತ್ವದಿಂದ, ದೇಶದ ಗೌರವವನ್ನು ಉಳಿಸಿ, ಬೆಳೆಸಿಕೊಂಡು ಹೋಗುವ ಪ್ರತಿಜ್ಞೆ ಬೋಧಿಸಿದರು. ಹಿಂದಿ ಪ್ರಬಂಧ ರಚನೆಯ ಸ್ಪರ್ಧೆಯ ವಿಜೇತರಿಗೆ ಬಹುಮಾನ ವಿತರಿಸಲಾಯಿತು. ವಿದ್ಯಾರ್ಥಿನಿ ಕುಮಾರಿ ನಿವೇದ್ಯಾ ನಿರೂಪಿಸಿದ ಈ ಕಾರ್ಯಕ್ರಮದಲ್ಲಿ ಕುಮಾರಿ ಸಿಂಧೂರ ಸ್ವಾಗತಿಸಿ, ಕುಮಾರಿ ಶ್ರೇಷ್ಠ ಅತಿಥಿಗಳನ್ನು ಪರಿಚಯಿಸಿ, ಕುಮಾರಿ ಕಲ್ಪಿತಾ ಧನ್ಯವಾದ ಸಮರ್ಪಿಸಿದರು. ಶಾಲಾ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಪರಿಮಳ ಎಂ ವಿ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.

ಹಿಂದಿ ಶಿಕ್ಷಕಿಯರಾದ ಶ್ರೀಮತಿ ಮಮತಾ ಮತ್ತು ಶ್ರೀಮತಿ ಅಮೃತಾ ರೂಪುಗೊಳಿಸಿದ ಕಾರ್ಯಕ್ರಮದಲ್ಲಿ ಹಿಂದಿ ಭಾಷೆಯಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು.

Related posts

ಕಾಶಿಪಟ್ಣ ಸ.ಹಿ.ಪ್ರಾ. ಶಾಲೆಯ ನೂತನ ಕೊಠಡಿಗೆ ಶಿಲಾನ್ಯಾಸ ಹಾಗೂ ವಿವೇಕ ಕೊಠಡಿ ಉದ್ಘಾಟನೆ

Suddi Udaya

ಬೆಳ್ತಂಗಡಿ ಗೃಹರಕ್ಷಕದಳ ಘಟಕಕ್ಕೆ ಪ್ರಭಾರ ಘಟಕಾಧಿಕಾರಿಯಾಗಿ ಡೇನಿಸ್ ಡಿ’ಸೋಜ ನೇಮಕ

Suddi Udaya

ಇಕೋಆಕ್ಷನ್ ಬಯೋ-ಡೈವರ್ಸಿಟಿ ಕ್ವಿಜ್ ಸ್ಪರ್ಧೆ: ಉಜಿರೆ ಎಸ್.ಡಿ.ಎಮ್ ಆಂ.ಮಾ. (ಸಿ.ಬಿ.ಎಸ್.ಇ) ಶಾಲೆ ವಿದ್ಯಾರ್ಥಿಗಳು ಗ್ಲೋಬಲ್ ಮಟ್ಟದಲ್ಲಿ ದ್ವಿತೀಯ ಸ್ಥಾನ

Suddi Udaya

ಮರೋಡಿಯ ವಸಂತ ಕುಮಾರ್ ಹಾರೋದ್ದು ರವರಿಂದ ದೇಹ ದಾನಕ್ಕೆ ನೋಂದಣಿ

Suddi Udaya

ಮಲವಂತಿಗೆ ಗ್ರಾ.ಪಂ. ನ ಪ್ರಥಮ ಸುತ್ತಿನ ಗ್ರಾಮ ಸಭೆ

Suddi Udaya

ಬೆಳ್ತಂಗಡಿ ಬೊಟ್ಟುಗುಡ್ಡೆ ನಿವಾಸಿ ಶ್ರೀಮತಿ ಕಮಲ ಸಫಲ್ಯ ನಿಧನ

Suddi Udaya
error: Content is protected !!