25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂ.ಮಾ. ಶಾಲೆಯಲ್ಲಿ ಹಿಂದಿ ದಿವಸ್ ಆಚರಣೆ

ಧರ್ಮಸ್ಥಳ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ಧರ್ಮಸ್ಥಳದಲ್ಲಿ ಹಿಂದಿ ದಿವಸ್ ಆಚರಿಸಲಾಯಿತು.

ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಮಹಾವಿದ್ಯಾಲಯದ ಹಿಂದಿ ಪ್ರಾಧ್ಯಾಪಕರಾದ ಶ್ರೀಮತಿ ಶ್ರುತಿ ಮನಕೀಕರ್ ಆಗಮಿಸಿ, ದೀಪ ಬೆಳಗಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಹಿಂದಿ ದಿವಸದ ಮಹತ್ವ, ಹಿಂದಿ ಲಿಪಿ ಹಿಂದಿ ಭಾಷೆಯನ್ನು ಉಳಿಸಿ ಬೆಳೆಸುವುದು ಮತ್ತು ಎಲ್ಲರೂ ಒಂದೇ ಎಂಬ ಭಾವದಿಂದ, ರಾಷ್ಟ್ರ ಪ್ರೇಮವನ್ನು ಬೆಳೆಸಿಕೊಂಡು, ಭ್ರಾತೃತ್ವದಿಂದ, ದೇಶದ ಗೌರವವನ್ನು ಉಳಿಸಿ, ಬೆಳೆಸಿಕೊಂಡು ಹೋಗುವ ಪ್ರತಿಜ್ಞೆ ಬೋಧಿಸಿದರು. ಹಿಂದಿ ಪ್ರಬಂಧ ರಚನೆಯ ಸ್ಪರ್ಧೆಯ ವಿಜೇತರಿಗೆ ಬಹುಮಾನ ವಿತರಿಸಲಾಯಿತು. ವಿದ್ಯಾರ್ಥಿನಿ ಕುಮಾರಿ ನಿವೇದ್ಯಾ ನಿರೂಪಿಸಿದ ಈ ಕಾರ್ಯಕ್ರಮದಲ್ಲಿ ಕುಮಾರಿ ಸಿಂಧೂರ ಸ್ವಾಗತಿಸಿ, ಕುಮಾರಿ ಶ್ರೇಷ್ಠ ಅತಿಥಿಗಳನ್ನು ಪರಿಚಯಿಸಿ, ಕುಮಾರಿ ಕಲ್ಪಿತಾ ಧನ್ಯವಾದ ಸಮರ್ಪಿಸಿದರು. ಶಾಲಾ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಪರಿಮಳ ಎಂ ವಿ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.

ಹಿಂದಿ ಶಿಕ್ಷಕಿಯರಾದ ಶ್ರೀಮತಿ ಮಮತಾ ಮತ್ತು ಶ್ರೀಮತಿ ಅಮೃತಾ ರೂಪುಗೊಳಿಸಿದ ಕಾರ್ಯಕ್ರಮದಲ್ಲಿ ಹಿಂದಿ ಭಾಷೆಯಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು.

Related posts

ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿಯ ದರ್ಶನ ಪಡೆದ ಮಾಜಿ ಸಿ.ಎಂ ಯಡಿಯೂರಪ್ಪ

Suddi Udaya

ವೇಣೂರು ವಿದ್ಯುತ್ ವಿತರಣಾ ಕೇಂದ್ರದಲ್ಲಿ ಹಾಲಿ ಇರುವ 5 MVA ಶಕ್ತಿ ಪರಿವರ್ತಕವನ್ನು 12.5 MVA ಸಾಮರ್ಥ್ಯಕ್ಕೆ ಬದಲಾವಣೆ: ಸಾರ್ವಜನಿಕರಿಂದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ರವರಿಗೆ ಅಭಿನಂದನೆ

Suddi Udaya

ಡಿ.30: ರೂ.1.62 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಂಡ ಪಡಂಗಡಿ ಪ್ರಾ.ಕೃ.ಪ.ಸ. ಸಂಘದ “ಸಮೃದ್ಧಿ” ಸಭಾಭವನ ಹಾಗೂ ಗೋದಾಮು ಕಟ್ಟಡ ಲೋಕಾರ್ಪಣೆ

Suddi Udaya

ಸುಲ್ಕೇರಿ: ಶ್ರೀ ನೇಮಿನಾಥಸ್ವಾಮಿ ಸಭಾಭವನ ಉದ್ಘಾಟನೆ

Suddi Udaya

ಕೊಕ್ಕಡ: ಶಾಲೆತ್ತಡ್ಕ ಅಂಗನವಾಡಿ ಕೇಂದ್ರದಲ್ಲಿ ಆರೋಗ್ಯ ಮಾಹಿತಿ ಕಾರ್ಯಕ್ರಮ

Suddi Udaya

ಜ. 29-31: ಬೆಳ್ತಂಗಡಿ ಸ್ಪಂದನ ಪಾಲಿಕ್ಲಿನಿಕ್ ಮತ್ತು ಲ್ಯಾಬೋರೇಟರಿ ಹಾಗೂ ಸ್ಪಂದನ ಕ್ಲಿನಿಕ್‌ನಲ್ಲಿ ಉಚಿತ ಹಾಗೂ ವಿಶೇಷ ರಿಯಾಯಿತಿ

Suddi Udaya
error: Content is protected !!