April 11, 2025
ಆರೋಗ್ಯ

ಉಚಿತ ರಕ್ತ ತಪಾಸಣೆ ಹಾಗೂ ಅರೋಗ್ಯ ತಪಾಸಣಾ ಶಿಬಿರ

ಬೆಳ್ತಂಗಡಿ :ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಬೆಳ್ತಂಗಡಿ ಘಟಕ,
ಬೆಳ್ತಂಗಡಿ ಮಂಜುಶ್ರೀ ಸೀನಿಯರ್ ಛೇoಬರ್ ಹಾಗೂ ದ. ಕ. ಹಾಸ್ಪಿಟಲ್ ಸೊಸೈಟಿ ಇವರ ಸಂಯುಕ್ತ ಆಶ್ರಯದಲ್ಲಿ ಕೋರ್ಟ್ ರಸ್ತೆಯಲ್ಲಿರುವ ಕಛೇರಿ “ಅನನ್ಯ” ಇಲ್ಲಿ ಸೆ.22 ರಂದು “ಉಚಿತ ರಕ್ತ ತಪಾಸಣೆ ಹಾಗೂ ಅರೋಗ್ಯ ತಪಾಸಣಾ ಶಿಬಿರ ನಡೆಯಿತು. ಶಿಬಿರವನ್ನು ವಾಲ್ಟರ್ ಸಿಕ್ವೇರಾರವರು ದೀಪ ಬೆಳಗಿಸಿ ಉದ್ಘಾಟಿಸಿದರು.
ರೆಡ್ ಕ್ರಾಸ್ ಸಂಸ್ಥೆಯ ಅಧ್ಯಕ್ಷರಾದ ಶ್ರೀ ಹರಿದಾಸ್ ಎಸ್. ಎಂ ಇವರು ಪ್ರಸ್ತಾವಿಕ ಭಾಷಣದೊಂದಿಗೆ ಸ್ವಾಗತಿಸಿದರು.
ಕಾರ್ಯದರ್ಶಿ ಜಾನ್ ಅರ್ವಿನ್ ಡಿಸೋಜರವರು ಶುಭಕೋರಿದರು.
ವೇದಿಕೆಯಲ್ಲಿ ವಕೀಲರಾದ ಶ್ರೀ ಶಿವಕುಮಾರ್, ಶ್ರೀ ವೆಂಕಟೇಶ್ ಮಯ್ಯ, ಡಾI ದೀಪ್ತಿ ಹಾಗೂ ಡಾI ಅನನ್ಯರವರು ಉಪಸ್ಥಿತರಿದ್ದರು.
ಛೇoಬರಿನ ಪೂರ್ವಧ್ಯರಾದ ಪ್ರಥ್ವಿ ರಂಜನ್ ರಾವ್, ಲ್ಯಾನ್ಸಿ ಪಿರೇರಾ, ಸದಸ್ಯರಾದ ಹರೀಶ್ ಶೆಟ್ಟಿ, ವಿಲ್ಸನ್ ಗೊನ್ಸಾಲ್ವಿಸ್, ದಯಾನಂದ ಹಾಗೂ ಬಾನುಪ್ರಸನ್ನರವರು ಭಾಗವಹಿಸಿದರು.
ಶ್ರೀ ಶಿವಕುಮಾರ್ ಇವರು ಕಾರ್ಯಕ್ರಮವನ್ನು ನಿರ್ವಹಿಸಿ ಧನ್ಯವಾದ ಸಮರ್ಪಿಸಿದರು.
ಸುಮಾರು 200 ಜನರು ಈ ಶಿಬಿರದಲ್ಲಿ ಭಾಗವಹಿಸಿದರು

.

Related posts

ತಾಲೂಕು ಆರೋಗ್ಯ ರಕ್ಷಾ ಸಮಿತಿ ಸದಸ್ಯರಿಂದ ಬೆಳ್ತಂಗಡಿ ತಾಲೂಕು ಆಸ್ಪತ್ರೆಗೆ ದಿಢೀರ್ ಭೇಟಿ

Suddi Udaya

ಕಲ್ಮಂಜದಲ್ಲಿ ಉಚಿತ ಹುಚ್ಚುನಾಯಿ ರೋಗ ನಿರೋಧಕ ಲಸಿಕಾ ಶಿಬಿರ ಕಾರ್ಯಕ್ರಮ

Suddi Udaya

ಬೆನ್ನುಹುರಿ ಅಪಘಾತಕ್ಕೊಳಗಾದವರಿಗಾಗಿ ಉಚಿತ ಆರೋಗ್ಯ ತಪಾಸಣೆ ಮತ್ತು ಜಾಗೃತಿ ಶಿಬಿರದಲ್ಲಿ ಗಾಲಿಕುರ್ಚಿ ಜಾಥಾ

Suddi Udaya

ಬೆಳ್ತಂಗಡಿ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ, ಯುವ ವೇದಿಕೆ ಮತ್ತು ಮಹಿಳಾ ವೇದಿಕೆ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದಿಂದ ಬೃಹತ್ ರಕ್ತದಾನ ಶಿಬಿರ

Suddi Udaya

ಅನರ್ಹ ಬಿಪಿಎಲ್ ಕಾರ್ಡ್ ಪತ್ತೆ ಪ್ರಕ್ರಿಯೆಗೆ ಇಲಾಖೆಯಿಂದ ಕ್ರಮ: ತಾಲೂಕಿನಲ್ಲಿ 7,024 ಬಿಪಿಎಲ್ ಪಡಿತರ ಚೀಟಿಗಳ ಪರಿಶೀಲನೆ: 53 ಕುಟುಂಬಗಳ ಬಿಪಿಎಲ್ ಕಾರ್ಡ್ ಎಪಿಎಲ್ ಆಗಿ ಪರಿವರ್ತನೆ

Suddi Udaya

ಉಜಿರೆ: ಶ್ರೀ. ಧ. ಮಂ. ಪ್ರಕೃತಿ ಚಿಕಿತ್ಸಾ ಮತ್ತು ಯೋಗ ವಿಜ್ಞಾನ ಕಾಲೇಜಿನಲ್ಲಿ ರಾಷ್ಟ್ರೀಯ ಸುಪೋಷಣಾ ಮಾಸಾಚರಣೆ

Suddi Udaya
error: Content is protected !!