July 23, 2026
ಪ್ರಮುಖ ಸುದ್ದಿ

ದೈವ ನರ್ತಕ ಸಮುದಾಯದ ವಿರುದ್ಧ ಸುಳ್ಳು ಸುದ್ದಿ ಹಬ್ಬಿಸಿದವರ ಹಾಗೂ ಅಶ್ಲೀಲವಾಗಿ ನಿಂದಿಸಿದರ ವಿರುದ್ಧ ಅಟ್ರಸಿಟಿ ಕೇಸ್ ದಾಖಲಿಸುವಂತೆ ಬೆಳ್ತಂಗಡಿ ಪೊಲೀಸ್ ಠಾಣೆಗೆ ದೂರು

ಬೆಳ್ತಂಗಡಿ :ಕಲ್ಜಿಗ ಎಂಬ ಸಿನೇಮಾದಲ್ಲಿರುವ ದೈವ ಕೋಲದ ದೃಶ್ಯಗಳನ್ನು ನಲಿಕೆ ಸಮುದಾಯವರು ಮಾಡಿದ್ದಾರೆ ಎಂದು ಚಿತ್ರ ತಂಡ ಸುಳ್ಳು ಹೇಳಿರುವುದನ್ನು ಖಂಡಿಸಿ ಹಾಗೂ ದೈವನರ್ತಕರನ್ನು ಕಮೆಂಟ್ ಮೂಲಕ ಅಶ್ಲೀಲವಾಗಿ ನಿಂದಿಸಿದ ವ್ಯಕ್ತಿಯ ವಿರುದ್ಧ ದಲಿತ ದೌರ್ಜನ್ಯ‌ ಕಾಯ್ದೆಯಡಿ ಪ್ರಕರಣ ದಾಖಲಿಸುವಂತೆ ದಕ್ಷಿಣ ಕನ್ನಡ ಜಿಲ್ಲೆಯ ನಲಿಕೆ ಸಮಾಜ ಬಾಂಧವರು ಸೆ 22. ರಂದು ಬೆಳ್ತಂಗಡಿ ಪೊಲೀಸ್ ಠಾಣೆಗೆ ದೂರು ನೀಡಿದರು

ಈ ಸಂದರ್ಭದಲ್ಲಿಬೆಳ್ತಂಗಡಿ ತಾಲೂಕು ನಲಿಕೆಯವರ ಸಮಾಜ ಸೇವಾ ಸಂಘದ ಅಧ್ಯಕ್ಷರಾದ ಪ್ರಭಾಕರ ಓಡಿಳ್ನಾಳ, ಸಂಘದ ಸದಸ್ಯರಾದ ಸಂತೋಷ್ ನಾರಾವಿ, ಮಾಜಿ ಅಧ್ಯಕ್ಷರಾದ ಸೇಸಪ್ಪ ಅಳದಂಗಡಿ, ಹಿರಿಯ ದೈವ ನರ್ತಕರಾದ ವೀರಪ್ಪ ಈದು, ಗಿರಿಯಪ್ಪ ಎಡ್ತೂರು, ಗೋಪಾಲ ಕೇಲ, ನಾರಾಯಣ ವೇಣೂರು, ಬಾಬು ಪೊಸಲಾಯ ಕಾಂತಪ್ಪ ಪೆರಿಂಜೆ, ರಮೇಶ್‌ ಪೆರಿಂಜೆ, ಪ್ರಮುಖರಾದ ಗಣೇಶ್ ಕೋಟ್ಯಾನ್ ಚಾರ್ಮಾಡಿ, ಹರೀಶ್ ನಾವೂರು, ಶೇಖರ್ ವಾಲ್ಪಾಡಿ, ಸಂಪತ್ ವಾಲ್ಪಾಡಿ, ನಾಗೇಶ್ ಉಡುಪಿ, ರವಿ ಎಂ.ಎಲ್ ಮುಂಡಾಜೆ, ಜಯಂತ ಈದು ಮತ್ತು ನಲಿಕೆ ಸಮಾಜ ಬಂಧುಗಳು ಉಪಸ್ಥಿತರಿದ್ದರು

.

Related posts

ಮುಂಡಾಜೆ : ಮಂಜುಶ್ರೀ ನಗರದ ಅಯ್ಯಪ್ಪ ಸ್ವಾಮಿ ಭಕ್ತ ವೃಂದದಿಂದ ಮಂಜುಶ್ರೀ ಭಜನಾ ಮಂದಿರಕ್ಕೆ ಶೌಚಾಲಯ ಕೊಡುಗೆ

Suddi Udaya

ಪುನೀತ್ ಕೆರೆಹಳ್ಳಿಯನ್ನು ಬಂಧಿಸಿ ಬೆಳ್ತಂಗಡಿ ಠಾಣೆಗೆ ಕರೆತಂದ ಪೊಲೀಸರು

Suddi Udaya

ಬೆಳ್ತಂಗಡಿ ತಹಶೀಲ್ದಾರ್ ಆಗಿ ಮತ್ತೆ ಪೃಥ್ವಿ ಸಾನಿಕಂ ನೇಮಕ

Suddi Udaya

ವೇಣೂರು ಠಾಣಾ ಪೊಲೀಸ್ ಉಪ ನಿರೀಕ್ಷಕರಾಗಿ ಶ್ರೀಶೈಲ ಡಿ. ಮುರುಗೋಡು

Suddi Udaya

ರೂ. 35 ಲಕ್ಷ ವೆಚ್ಚದಲ್ಲಿ ನಿರ್ಮಿಸಲಾಗಿರುವ ಪಟ್ಟಣ ಪಂಚಾಯತ್ ಕಛೇರಿ ವಿಸ್ತ್ರತ ಕಟ್ಟಡದ ಸಭಾಂಗಣ ಶಾಸಕ ಹರೀಶ್ ಪೂಂಜರಿಂದ ಉದ್ಘಾಟನೆ

Suddi Udaya

ಅಖಿಲ ಕರ್ನಾಟಕ ರಾಜಕೇಸರಿ ಸಂಘಟನೆಯ ಸಂಸ್ಥಾಪಕರಾದ ದೀಪಕ್ ಜಿ. ಬೆಳ್ತಂಗಡಿ ಇವರ ನೇತೃತ್ವದಲ್ಲಿ ಫೆ.17, 18, 19ರಂದು ಮಾರಿಗುಡಿ ಮೈದಾನದಲ್ಲಿ ‘ಬೆಳ್ತಂಗಡಿ ಸಂಭ್ರಮ’

Suddi Udaya
error: Content is protected !!