September 7, 2026
ಕೃಷಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಸಂಘ-ಸಂಸ್ಥೆಗಳು

ಧರ್ಮಸ್ಥಳ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವತಿಯಿಂದ ಸಂಘದ ರೈತ ಸದಸ್ಯರಿಗೆ ಉಚಿತ ತರಕಾರಿ ಬೀಜ ವಿತರಣಾ ಕಾರ್ಯಕ್ರಮ

ಧರ್ಮಸ್ಥಳ: ಸುಭಾಷ್‌ ಯಾದವ್ ರಾಷ್ಟ್ರ ಪ್ರಶಸ್ತಿ ಪುರಸ್ಕೃತ ಧರ್ಮಸ್ಥಳ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವತಿಯಿಂದ ನಮ್ಮ ತೋಟ ನಮ್ಮ ತರಕಾರಿ ಯೋಜನೆಯಡಿಯಲ್ಲಿ ಸಂಘದ ರೈತ ಸದಸ್ಯರಿಗೆ ಉಚಿತ ತರಕಾರಿ ಬೀಜ ವಿತರಣಾ ಕಾರ್ಯಕ್ರಮ ಸೆ. 21ರಂದು ಸಂಘದ ಅಟಲ್‌ಜೀ ಸಭಾಭವನದಲ್ಲಿ ನಡೆಯಿತು.

ಶಾಸಕ ಹರೀಶ್ ಪೂಂಜ ತರಕಾರಿ ಬೀಜ ವಿತರಿಸಿ ಮಾತನಾಡಿ “ನಮ್ಮ ತೋಟ ನಮ್ಮ ತರಕಾರಿ” ಎಂಬ ಹೊಸ ಪರಿಕಲ್ಪನೆಯೊಂದಿಗೆ ನಮ್ಮ ರೈತ ಸದಸ್ಯರ ಆರೋಗ್ಯದ ಕಡೆ ಒಂದು ಹೆಜ್ಜೆಯಾಗಿದ್ದು ಧರ್ಮಸ್ಥಳ ಸಹಕಾರ ಸಂಘ ರಾಜ್ಯದಲ್ಲಿಯೇ ಪ್ರಥಮವಾಗಿ ಈ ಕಾರ್ಯಕ್ರಮ ಮಾಡಿದೆ ಇತ್ತೀಚಿನ ದಿನಗಳಲ್ಲಿ ನಮ್ಮ ಜಿಲ್ಲೆಯಲ್ಲಿ ಅತೀ ಹೆಚ್ಚಿನ ಜನರಲ್ಲಿ ಕ್ಯಾನ್ಸರ್ ಎಂಬ ಮಾರಕ ರೋಗ ಪತ್ತೆಯಾಗುತ್ತಿದೆ ಇದಕ್ಕೆ ಕಾರಣ ಹುಡುಕಿದಾಗ ನಾವು ದಿನನಿತ್ಯ ತಿನ್ನುವ ವಿಷಕಾರಿ ಅಂಶದಿಂದ ಕೂಡಿದ ತರಕಾರಿಯ ಸೇವನೆ ಇದರಿಂದ ಸಣ್ಣ ಸಣ್ಣ ಮಕ್ಕಳು ಕೂಡ ಈ ಕ್ಯಾನ್ಸರ್ ಎಂಬ ಮಾರಿಗೆ ಬಲಿಯಾಗುತ್ತಿದ್ದಾರೆ. ಹೀಗಾಗಿ ನಮ್ಮ ಸಂಘದ ರೈತ ಸದಸ್ಯರು ತಮ್ಮ ಮನೆಯಲ್ಲೇ ತರಕಾರಿ ಬೆಳೆದು ಅದನ್ನೇ ಸೇವಿಸಬೇಕೆಂಬ ಧೈಯದೊಂದಿಗೆ ನಮ್ಮ ಸದಸ್ಯರರು ತಮ್ಮ ಮನೆಯಲ್ಲೇ ತರಕಾರಿ ಬೆಳೆದು ಅದನ್ನೆ ಉಪಯೋಗಿಸಬೇಕಾಗಿ ಈ ಯೋಜನೆ ಎಂದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷ ಪ್ರೀತಮ್ ಡಿ. ವಹಿಸಿದ್ದರು.

ಧರ್ಮಸ್ಥಳ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಶ್ರೀನಿವಾಸ ರಾವ್ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು. ರೂಪೇಶ್ ಮಲ್ಲರ್ ಮಾಡಿ ಮಾಹಿತಿ ನೀಡಿದರು.

ಸಂಘದ ಉಪಾಧ್ಯಕ್ಷ ಅಜಿತ್ ಕುಮಾರ್ ಜೈನ್, ನಿರ್ದೇಶಕರುಗಳಾದ ಉಮಾನಾಥ್, ಶೀನ ಧನಲಕ್ಷ್ಮೀ ಜನಾರ್ದನ, ಪ್ರಸನ್ನ, ಚಂದ್ರಶೇಖ‌ರ್, ವಿಕ್ರಮ್ ಗೌಡ, ತಂಗಚ್ಚನ್, ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಶಶಿಧರ್ ಉಪಸ್ಥಿತರಿದ್ದರು.

ನಿರ್ದೇಶಕ ನೀಲಕಂಠ ಶೆಟ್ಟಿ ಸ್ವಾಗತಿಸಿ ನಿರ್ದೇಶಕಿ ಶಾಂಭವಿ ರೈ ವಂದಿಸಿದರು. ಎ.ಎಸ್.ಲೋಕೇಶ್ ಶೆಟ್ಟಿ ನಿರೂಪಿಸಿದರು. ಸಿಬ್ಬಂದಿಗಳು ಸಹಕರಿಸಿದರು. ಸುಮಾರು 500 ಮಂದಿ ಸದಸ್ಯರಿಗೆ ತರಕಾರಿ ಬೀಜ ವಿತರಿಸಲಾಯಿತು.

Related posts

ಇಳಂತಿಲ: ವಿಷ ಪದಾರ್ಥ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದ ಎಸ್.ಎಸ್.ಎಲ್.ಸಿ ವಿದ್ಯಾರ್ಥಿನಿ ಚಿಕಿತ್ಸೆಗೆ ಸ್ಪಂದಿಸದೆ ಸಾವು

Suddi Udaya

5‌ಮತ್ತು 8ನೇ ತರಗತಿ ಪಬ್ಲಿಕ್ ಪರೀಕ್ಷೆ: ಅಂತಿಮ ವೇಳಾಪಟ್ಟಿ ಪ್ರಕಟ

Suddi Udaya

ನ.7 ರಂದು ಚುನಾಯಿತ ಸದಸ್ಯರ ಅಧಿಕಾರಾವಧಿ ಮುಗಿಯಲಿರುವ ಬೆಳ್ತಂಗಡಿ ಪಟ್ಟಣ ಪಂಚಾಯತ್‌ ಗೆ ಆಡಳಿತಾಧಿಕಾರಿಗಳನ್ನು ನೇಮಕ ಮಾಡದಂತೆ ರಾಜ್ಯ ಹೈಕೋರ್ಟ್ ಮಧ್ಯಂತರ ತಡೆ

Suddi Udaya

ಬಂದಾರು: ಶ್ರೀ ವಿಷ್ಣುಮೂರ್ತಿ ದೇವಸ್ಥಾನ ಸೇವಾ ಟ್ರಸ್ಟ್ ಮತ್ತು ಶ್ರೀ ವಿಷ್ಣುಮೂರ್ತಿ ಭಜನಾ ಮಂಡಳಿ ಪೆಲತ್ತಿಮಾರು ಆಶ್ರಯದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ಮೊಸರು ಕುಡಿಕೆ ಉತ್ಸವ, ಭಜನೆ ಹಾಗೂ ವಿವಿಧ ಆಟೋಟ ಸ್ಪರ್ಧೆ

Suddi Udaya

ಬುರುಡೆ ಪ್ರಕರಣ: ಚಿನ್ನಯ್ಯನನ್ನು ಮಹಜರು ನಡೆಸಲು ಕರೆದುಕೊಂಡು ಹೋದ ಎಸ್.ಐ.ಟಿ

Suddi Udaya

ಕುಕ್ಕೇಡಿ: ಸುಡುಮದ್ದು ತಯಾರಿಕ ಘಟಕದಲ್ಲಿ ಸ್ಪೋಟ ಪ್ರಕರಣ: ಕೇಂದ್ರ ತನಿಖಾ ಸಂಸ್ಥೆಯ ಮುಖಾಂತರ ಹೆಚ್ಚಿನ ತನಿಖೆಯನ್ನು ನಡೆಸುವಂತೆ ವೇಣೂರು ಹಿಂದೂ ಜಾಗರಣ ವೇದಿಕೆಯ ವತಿಯಿಂದ ವೇಣೂರು ಪೊಲೀಸರಿಗೆ ಮನವಿ

Suddi Udaya
error: Content is protected !!