ಬಂಟರ ಯಾನೆ ನಾಡವರ ಸಂಘ (ರಿ ) ಬೆಳ್ತಂಗಡಿ ತಾಲೂಕು ಇದರ ನೇತೃತ್ವದಲ್ಲಿ ನಡೆದ ಮಹಿಳಾ ವಿಭಾಗದ ಮತ್ತು ಯುವ ವಿಭಾಗದ ಪದಾಧಿಕಾರಿಗಳ ಆಯ್ಕೆ

Suddi Udaya

ಬೆಳ್ತಂಗಡಿ :ಬಂಟರ ಯಾನೆ ನಾಡವರ ಸಂಘ (ರಿ ) ಬೆಳ್ತಂಗಡಿ ತಾಲೂಕು ಇದರ ನೇತೃತ್ವದಲ್ಲಿ ಸೆ. 22ರಂದು ನಡೆದ ಮಹಿಳಾ ವಿಭಾಗದ ಮತ್ತು ಯುವ ವಿಭಾಗದ ಪದಾಧಿಕಾರಿಗಳ ಆಯ್ಕೆ ನಡೆಯಿತು.
ಮಹಿಳಾ ವಿಭಾಗದ ಅಧ್ಯಕ್ಷರಾಗಿ ಶ್ರೀಮತಿ ಜಯಲಕ್ಷ್ಮಿ ಎನ್. ಸಾಮಾನಿ ಕರಂಬರು ಬೀಡು. ಉಪಾಧ್ಯಕ್ಷರಾಗಿ ಶ್ರೀಮತಿ ಸಂಗೀತ ಶೆಟ್ಟಿ ಮಡಂತ್ಯಾರ್ ,ಕಾರ್ಯದರ್ಶಿಯಾಗಿ ಶ್ರೀಮತಿ ಶ್ರೇಯಾ ಶೆಟ್ಟಿ ಶಕ್ತಿನಗರ, ಕೋಶಾಧಿಕಾರಿಯಾಗಿ ಶ್ರೀಮತಿ ರಕ್ಷಿತಾ ಶೆಟ್ಟಿ ಓಡಿಳ್ನಾಲ. ಜೊತೆ ಕಾರ್ಯದರ್ಶಿಯಾಗಿ ಶ್ರೀಮತಿ ಶುಭಶ್ರೀ ಉಜಿರೆ. ಮತ್ತು ಯುವ ವಿಭಾಗದ ಅಧ್ಯಕ್ಷರಾಗಿ ಪ್ರತೀಕ್ ಶೆಟ್ಟಿ ನೊಚ್ಚ, ಉಪಾಧ್ಯಕ್ಷರಾಗಿ ಪ್ರಜ್ವಲ್ ಶೆಟ್ಟಿ ಪಾಡ್ಯಾರು. ಕಾರ್ಯದರ್ಶಿಯಾಗಿ ಪ್ರೇಮ್ ನಾಥ್ ಶೆಟ್ಟಿ ಗುಂಪಲಾಜೆ, ಪ್ರಣಮ್ ರೈ ಗರ್ಡಡಿ ಜೊತೆ ಕಾರ್ಯದರ್ಶಿಯಾಗಿ ವಿನೋದ್ ಆಳ್ವ ಸವಾಣಾಲು ಅದೇ ರೀತಿ ಯುವ ವಿಭಾಗ ಮತ್ತು ಮಹಿಳಾ ವಿಭಾಗಕ್ಕೆ ನಿರ್ದೇಶಕರನ್ನು ಆಯ್ಕೆ ಮಾಡಲಾಯಿತು ಪದಾಧಿಕಾರಿಗಳ ಆಯ್ಕೆಯಲ್ಲಿ ಸಂಘದ ಪದಾಧಿಕಾರಿಗಳು ಮತ್ತು ಕಾರ್ಯಕಾರಿ ಸಮಿತಿ ಸದಸ್ಯರು ಉಪಸ್ಥಿತರಿದ್ದರು.

Leave a Comment

error: Content is protected !!