ಉಚಿತ ರಕ್ತ ತಪಾಸಣೆ ಹಾಗೂ ಅರೋಗ್ಯ ತಪಾಸಣಾ ಶಿಬಿರ

Suddi Udaya

ಬೆಳ್ತಂಗಡಿ :ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಬೆಳ್ತಂಗಡಿ ಘಟಕ,
ಬೆಳ್ತಂಗಡಿ ಮಂಜುಶ್ರೀ ಸೀನಿಯರ್ ಛೇoಬರ್ ಹಾಗೂ ದ. ಕ. ಹಾಸ್ಪಿಟಲ್ ಸೊಸೈಟಿ ಇವರ ಸಂಯುಕ್ತ ಆಶ್ರಯದಲ್ಲಿ ಕೋರ್ಟ್ ರಸ್ತೆಯಲ್ಲಿರುವ ಕಛೇರಿ “ಅನನ್ಯ” ಇಲ್ಲಿ ಸೆ.22 ರಂದು “ಉಚಿತ ರಕ್ತ ತಪಾಸಣೆ ಹಾಗೂ ಅರೋಗ್ಯ ತಪಾಸಣಾ ಶಿಬಿರ ನಡೆಯಿತು. ಶಿಬಿರವನ್ನು ವಾಲ್ಟರ್ ಸಿಕ್ವೇರಾರವರು ದೀಪ ಬೆಳಗಿಸಿ ಉದ್ಘಾಟಿಸಿದರು.
ರೆಡ್ ಕ್ರಾಸ್ ಸಂಸ್ಥೆಯ ಅಧ್ಯಕ್ಷರಾದ ಶ್ರೀ ಹರಿದಾಸ್ ಎಸ್. ಎಂ ಇವರು ಪ್ರಸ್ತಾವಿಕ ಭಾಷಣದೊಂದಿಗೆ ಸ್ವಾಗತಿಸಿದರು.
ಕಾರ್ಯದರ್ಶಿ ಜಾನ್ ಅರ್ವಿನ್ ಡಿಸೋಜರವರು ಶುಭಕೋರಿದರು.
ವೇದಿಕೆಯಲ್ಲಿ ವಕೀಲರಾದ ಶ್ರೀ ಶಿವಕುಮಾರ್, ಶ್ರೀ ವೆಂಕಟೇಶ್ ಮಯ್ಯ, ಡಾI ದೀಪ್ತಿ ಹಾಗೂ ಡಾI ಅನನ್ಯರವರು ಉಪಸ್ಥಿತರಿದ್ದರು.
ಛೇoಬರಿನ ಪೂರ್ವಧ್ಯರಾದ ಪ್ರಥ್ವಿ ರಂಜನ್ ರಾವ್, ಲ್ಯಾನ್ಸಿ ಪಿರೇರಾ, ಸದಸ್ಯರಾದ ಹರೀಶ್ ಶೆಟ್ಟಿ, ವಿಲ್ಸನ್ ಗೊನ್ಸಾಲ್ವಿಸ್, ದಯಾನಂದ ಹಾಗೂ ಬಾನುಪ್ರಸನ್ನರವರು ಭಾಗವಹಿಸಿದರು.
ಶ್ರೀ ಶಿವಕುಮಾರ್ ಇವರು ಕಾರ್ಯಕ್ರಮವನ್ನು ನಿರ್ವಹಿಸಿ ಧನ್ಯವಾದ ಸಮರ್ಪಿಸಿದರು.
ಸುಮಾರು 200 ಜನರು ಈ ಶಿಬಿರದಲ್ಲಿ ಭಾಗವಹಿಸಿದರು

.

Leave a Comment

error: Content is protected !!