July 23, 2026
ಪ್ರಮುಖ ಸುದ್ದಿ

ದೈವ ನರ್ತಕ ಸಮುದಾಯದ ವಿರುದ್ಧ ಸುಳ್ಳು ಸುದ್ದಿ ಹಬ್ಬಿಸಿದವರ ಹಾಗೂ ಅಶ್ಲೀಲವಾಗಿ ನಿಂದಿಸಿದರ ವಿರುದ್ಧ ಅಟ್ರಸಿಟಿ ಕೇಸ್ ದಾಖಲಿಸುವಂತೆ ಬೆಳ್ತಂಗಡಿ ಪೊಲೀಸ್ ಠಾಣೆಗೆ ದೂರು

ಬೆಳ್ತಂಗಡಿ :ಕಲ್ಜಿಗ ಎಂಬ ಸಿನೇಮಾದಲ್ಲಿರುವ ದೈವ ಕೋಲದ ದೃಶ್ಯಗಳನ್ನು ನಲಿಕೆ ಸಮುದಾಯವರು ಮಾಡಿದ್ದಾರೆ ಎಂದು ಚಿತ್ರ ತಂಡ ಸುಳ್ಳು ಹೇಳಿರುವುದನ್ನು ಖಂಡಿಸಿ ಹಾಗೂ ದೈವನರ್ತಕರನ್ನು ಕಮೆಂಟ್ ಮೂಲಕ ಅಶ್ಲೀಲವಾಗಿ ನಿಂದಿಸಿದ ವ್ಯಕ್ತಿಯ ವಿರುದ್ಧ ದಲಿತ ದೌರ್ಜನ್ಯ‌ ಕಾಯ್ದೆಯಡಿ ಪ್ರಕರಣ ದಾಖಲಿಸುವಂತೆ ದಕ್ಷಿಣ ಕನ್ನಡ ಜಿಲ್ಲೆಯ ನಲಿಕೆ ಸಮಾಜ ಬಾಂಧವರು ಸೆ 22. ರಂದು ಬೆಳ್ತಂಗಡಿ ಪೊಲೀಸ್ ಠಾಣೆಗೆ ದೂರು ನೀಡಿದರು

ಈ ಸಂದರ್ಭದಲ್ಲಿಬೆಳ್ತಂಗಡಿ ತಾಲೂಕು ನಲಿಕೆಯವರ ಸಮಾಜ ಸೇವಾ ಸಂಘದ ಅಧ್ಯಕ್ಷರಾದ ಪ್ರಭಾಕರ ಓಡಿಳ್ನಾಳ, ಸಂಘದ ಸದಸ್ಯರಾದ ಸಂತೋಷ್ ನಾರಾವಿ, ಮಾಜಿ ಅಧ್ಯಕ್ಷರಾದ ಸೇಸಪ್ಪ ಅಳದಂಗಡಿ, ಹಿರಿಯ ದೈವ ನರ್ತಕರಾದ ವೀರಪ್ಪ ಈದು, ಗಿರಿಯಪ್ಪ ಎಡ್ತೂರು, ಗೋಪಾಲ ಕೇಲ, ನಾರಾಯಣ ವೇಣೂರು, ಬಾಬು ಪೊಸಲಾಯ ಕಾಂತಪ್ಪ ಪೆರಿಂಜೆ, ರಮೇಶ್‌ ಪೆರಿಂಜೆ, ಪ್ರಮುಖರಾದ ಗಣೇಶ್ ಕೋಟ್ಯಾನ್ ಚಾರ್ಮಾಡಿ, ಹರೀಶ್ ನಾವೂರು, ಶೇಖರ್ ವಾಲ್ಪಾಡಿ, ಸಂಪತ್ ವಾಲ್ಪಾಡಿ, ನಾಗೇಶ್ ಉಡುಪಿ, ರವಿ ಎಂ.ಎಲ್ ಮುಂಡಾಜೆ, ಜಯಂತ ಈದು ಮತ್ತು ನಲಿಕೆ ಸಮಾಜ ಬಂಧುಗಳು ಉಪಸ್ಥಿತರಿದ್ದರು

.

Related posts

ಅತ್ಯಂತ ಕುತೂಹಲ ಕೆರಳಿಸಿದ ಮಡಂತ್ಯಾರು ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘದ ಚುನಾವಣೆ : ಅಧ್ಯಕ್ಷರಾಗಿ ಜೋಯಲ್ ಗಾಡ್ಫಿ ಮೆಂಡೋನ್ಸಾ, ಹಾಗೂ ಉಪಾಧ್ಯಕ್ಷರಾಗಿ ಕಾಂತಪ್ಪ ಗೌಡ ಆಯ್ಕೆ

Suddi Udaya

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ನಲ್ಲಿ ಗಾಂಧಿ ಜಯಂತಿ ಆಚರಣೆ

Suddi Udaya

ಉಜಿರೆ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಪದಾಧಿಕಾರಿಗಳ ಸಭೆ

Suddi Udaya

ಕಂಪನಿಯಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿದ ಅಪರಿಚಿತ ವ್ಯಕ್ತಿ: ಉಜಿರೆ ನಿವಾಸಿ ಅಲ್ಪೋನ್ಸ್‌ ಕರ್ಡೋಜ್ ರಿಗೆ ರೂ. 2.72 ಲಕ್ಷ ವಂಚನೆ

Suddi Udaya

ಕೋಟ್ಯಾಂತರ ರೂ. ಮೌಲ್ಯದ ಆರ್ಗ್ಯಾನಿಕ್ ಬ್ಯಾಗ್ ಮಾಡುವ ಯಂತ್ರದ ಹಣ ಹಿಂತಿರುಗಿಸದೆ ವಂಚನೆ ಆರೋಪ: ಬಳಂಜ ಅಶ್ವತ್ ಹೆಗ್ಡೆ ವಿರುದ್ಧ ಮಹಿಳೆ ದೂರು: ಬೆಂಗಳೂರಿನ ಅಶೋಕನಗರ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನಕ್ಕೆ ನೂತನ ವ್ಯವಸ್ಥಾಪನಾ ಸಮಿತಿ ರಚನೆ: 3ನೇ ಬಾರಿ ಅಧ್ಯಕ್ಷರಾಗಿ ಸುಬ್ರಹ್ಮಣ್ಯ ಶಬರಾಯ ಆಯ್ಕೆ

Suddi Udaya
error: Content is protected !!