September 6, 2026
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಸಂಘ-ಸಂಸ್ಥೆಗಳು

ಬಳಂಜ: ಶಾರದೋತ್ಸವ ಅಂಗವಾಗಿ ಕ್ರಿಕೆಟ್ ಪಂದ್ಯಾವಳಿ, ಬಿಸಿಲು-ಮಳೆ ಲೆಕ್ಕಿಸದೆ ಆಟವಾಡಿದ ಯುವಕರು

ಬಳಂಜ: ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ ಬಳಂಜ ಹಾಗೂ ಊರವರ ಸಹಕಾರದೊಂದಿಗೆ ಅ.6 ರಂದು ನಡೆಯುವ ಎರಡನೇ ವರ್ಷದ ಶಾರದೋತ್ಸವದ ಅಂಗವಾಗಿ ಕ್ರಿಕೆಟ್ ಪಂದ್ಯಾವಳಿಯು ಸೆ.22 ರಂದು ಬಳಂಜ ಕ್ರೀಡಾಂಗಣದಲ್ಲಿ ನಡೆಯಿತು.

ಕ್ರಿಕೆಟ್ ಪಂದ್ಯಾಟದ ಉದ್ಘಾಟನೆಯನ್ನು ಪ್ರಗತಿಪರ ಕೃಷಿಕರಾದ ತಿಮ್ಮಪ್ಪ ಪೂಜಾರಿ ತಾರಿಪಡ್ಪು ಉದ್ಘಾಟಿಸಿ ಕ್ರಿಕೆಟ್ ಪಂದ್ಯಾವಳಿ ಹಾಗೂ ಶಾರದೋತ್ಸವ ಅತ್ಯಂತ ಯಶಸ್ವಿಯಾಗಿ ನಡೆಯಲಿ ಎಂದು ಶುಭ ಹಾರೈಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ ಅಧ್ಯಕ್ಷ ಸಂತೋಷ್ ಪಿ ಕೋಟ್ಯಾನ್ ವಹಿಸಿದ್ದರು.

ವೇದಿಕೆಯಲ್ಲಿ ಸಂಘದ ಗೌರವಾಧ್ಯಕ್ಷ ಹೆಚ್.ಧರ್ಣಪ್ಪ ಪೂಜಾರಿ, ನಿಕಟಪೂರ್ವಾಧ್ಯಕ್ಷ ಪ್ರವೀಣ್ ಕುಮಾರ್ ಹೆಚ್.ಎಸ್,ಕಾರ್ಯದರ್ಶಿ ಜಗದೀಶ್ ಪೂಜಾರಿ, ನಿರ್ದೇಶಕರಾದ ರಂಜಿತ್ ಪೂಜಾರಿ,ದಿನೇಶ್ ಪೂಜಾರಿ ಅಂತರ,ರಕ್ಷಿತ್ ಬಗ್ಯೋಟ್ಟು,ಕ್ರಿಕೆಟ್ ಸಂಚಾಲಕ ಯೋಗೀಶ್ ಕೊಂಗುಳ ಉಪಸ್ಥಿತರಿದ್ದರು.

ಕ್ರಿಕೆಟ್ ಪಂದ್ಯಾವಳಿಯಲ್ಲಿ ಸುಮಾರು 20 ತಂಡಗಳು ಭಾಗವಹಿಸಿದ್ದವು. ಸಂತೋಷ್ ಪಿ ಕೋಟ್ಯಾನ್ ಸ್ವಾಗತಿಸಿ ವಂದಿಸಿದರು.ಪಂಚಲಿಂಗೇಶ್ವರ ಕ್ರಿಕೆಟರ್ಸ್ ಹಾಗೂ ಕ್ರಿಡಾಪಟುಗಳು ಸಹಕರಿಸಿದರು.

Related posts

ಪದ್ಮುಂಜ ಹಾಲು ಉತ್ಪಾದಕರ ಸಹಕಾರಿ ಸಂಘದ ಮಹಾಸಭೆ: ರೂ.24.43 ಕೋಟಿ ವ್ಯವಹಾರ, ರೂ.30.91 ಲಕ್ಷ ನಿವ್ವಳ ಲಾಭ, ಶೇ.22 ಡಿವಿಡೆಂಡ್

Suddi Udaya

ಸ್ಟಾರ್ ಲೈನ್ ಶಾಲೆಯಲ್ಲಿ ಇಕೋ ಕ್ಲಬ್ ಉದ್ಘಾಟನೆ

Suddi Udaya

ಶಿಶಿಲ: ಬರ್ಗುಳದಲ್ಲಿ ಮರ ಬಿದ್ದು ಎರಡು ವಿದ್ಯುತ್ ಕಂಬಗಳು ಧರಾಶಾಹಿ: ಶೌರ್ಯ ವಿಪತ್ತು ನಿರ್ವಹಣಾ ತಂಡದಿಂದ ತೆರವು ಕಾರ್ಯ

Suddi Udaya

ಉಜಿರೆ ಎಸ್.ಡಿ.ಎಂ ಕಾಲೇಜು ವಿಟಿಯು ವಲಯ ಮತ್ತು ರಾಜ್ಯ ಮಟ್ಟದ ಕಬಡ್ಡಿ ಪಂದ್ಯಾಟಕ್ಕೆ ತೆರೆ

Suddi Udaya

ಗುರವಾಯನಕೆರೆ: ವಿದ್ವತ್ ಕಾಲೇಜಿನಲ್ಲಿ ಆಂಗ್ಲ ಭಾಷೆ ಉಪನ್ಯಾಸಕರ ಕಾರ್ಯಾಗಾರ

Suddi Udaya

ಉಜಿರೆಯ ಕಿರಣ್ ಆಗ್ರೋಟೆಕ್ ನಿಂದ ಸೇವಾಭಾರತಿಗೆ ಸೂಪರ್ ಗೋಲ್ಡ್ ಸ್ಪ್ರೇಯರ್ ಯಂತ್ರದ ಕೊಡುಗೆ

Suddi Udaya
error: Content is protected !!