25.8 C
ಪುತ್ತೂರು, ಬೆಳ್ತಂಗಡಿ
March 6, 2026
Uncategorized

ಶ್ರೀ ಸಿದ್ದಿವಿನಾಯಕ ದೇವಸ್ಥಾನ ಪೆರ್ಲ -ಬೈಪಾಡಿಯಲ್ಲಿ ದೇವಸ್ಥಾನದ ಮಹಿಳಾ ಸಮಿತಿ ರಚನೆ

ಬಂದಾರು : ಶ್ರೀ ಸಿದ್ದಿವಿನಾಯಕ ದೇವಸ್ಥಾನ ಪೆರ್ಲ -ಬೈಪಾಡಿಯಲ್ಲಿ ದೇವಸ್ಥಾನದ ಮಹಿಳಾ ಸಮಿತಿಯೂ ಇತ್ತೀಚೆಗೆ ರಚನೆಯಾಗಿರುತ್ತದೆ. ಸೆ 21 ರಂದು ಸಿದ್ದಿವಿನಾಯಕ ದೇವರ ಸನ್ನಿದಿಯಲ್ಲಿ ದೀಪ ಬೆಳಗಿಸಿ ಅರ್ಚಕರ ಮೂಲಕ ಪ್ರಾರ್ಥನೆ ಸಲ್ಲಿಸಿ ನೂತನ ಮಹಿಳಾ ಸಮಿತಿಯ ಕಾರ್ಯಚಟುವಟಿಕೆಗೆ ಚಾಲನೆ ನೀಡಲಾಯಿತು. ಈ ಸಂದರ್ಭದಲ್ಲಿ ಮಹಿಳಾ ಸಮಿತಿಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಸದಸ್ಯರ ಜೋಡಣೆ ಮಾಡುವಲ್ಲಿ ಎಲ್ಲರೂ ಕೈ ಜೋಡಿಸೋದು ,ಸಮಿತಿಯು ಯಾವುದೇ ಕಾರ್ಯಾಚಟುವಟಿಕೆ ಮಾಡುವುದಿದ್ದರೂ ಆಡಳಿತ ಮಂಡಳಿಗೆ ತಿಳಿಸುವುದು ,ಬ್ರಹ್ಮಕಲಶೋತ್ಸವ ಸಮಯ ಸಮವಸ್ತ್ರ ಧರಿಸುವ ಬಗ್ಗೆ ಹಾಗೂ ಹಲವಾರು ವಿಷಯಗಳ ಬಗ್ಗೆ ಆಡಳಿತ ಸಮಿತಿ ಅಧ್ಯಕ್ಷರಾದ ರಮೇಶ್ ಗೌಡ ಅಡ್ಡಾರು ಇವರ ಅದ್ಯಕ್ಷತೆಯಲ್ಲಿ ಚರ್ಚಿಸಲಾಯಿತು.
ದೇವಸ್ಥಾನದ ಮಹಿಳಾ ಸಮಿತಿ ಅಧ್ಯಕ್ಷೆಯಾದ ಶ್ವೇತಾ ಹಾರ್ತ್ಯಾರ್, ಉಪಾಧ್ಯಕ್ಷರಾದ ಶ್ಯಾಮಲಾ ಪಯ್ಯೋಡಿ, ರಶ್ಮಿತಾ ಪರಪ್ಪಾಜೆ, ಕುಸುಮಾವತಿ ಅಡ್ಡಾರು, ಕಾರ್ಯದರ್ಶಿ ಮೌನಶ್ರೀ ನಾಗoದೋಡಿ, ಗೀತಾ ತಾರಕೆರೆ, ಪುಷ್ಪಾವತಿ ಪೇರಲ್ದಡಿ ಹಾಗೂ ಸರ್ವ ಸದಸ್ಯರು ಉಪಸ್ಥಿತರಿದ್ದರು.
ಕಾರ್ಯಕ್ರಮವನ್ನು ಯಶೋಧ ಅಡ್ಡಾರು ಸ್ವಾಗತಿಸಿ, ಮೌನಶ್ರೀ ನಾಗoದೋಡಿ ನಿರೂಪಿಸಿ ಧನ್ಯವಾದ ಸಲ್ಲಿಸಿದರು

.

Related posts

ಕಡಿರುದ್ಯಾವರದಲ್ಲಿ ಮದುಮಗಳಿಂದ ಮತ ಚಲಾವಣೆ

Suddi Udaya

ಕನ್ಯಾಡಿ ಸರ್ಕಾರಿ ಶಾಲೆಯ ಪ್ರಾರಂಭೋತ್ಸವ

Suddi Udaya

ಸರಳಿಕಟ್ಟೆ ಗೈಸ್ ವತಿಯಿಂದ 175 ಕುಟುಂಬಗಳಿಗೆ ರಂಝಾನ್ ಕಿಟ್ ವಿತರಣೆ.

Suddi Udaya

ಮೇ 26: ಕಾಯರ್ತಡ್ಕ ನಂದಗೋಕುಲ ಗೋಶಾಲೆಯಲ್ಲಿ ಸಾಮೂಹಿಕ ಗೋಪೂಜೆ, ಗೋನಂದಾರತಿ, ದೀಪೋತ್ಸವ

Suddi Udaya

ಪ್ರೋ. ಕೆ.ಯಸ್ ಭಗವಾನ್ ಅವರ ಹೇಳಿಕೆಗೆ ಬೆಳ್ತಂಗಡಿ ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದಿಂದ ಖಂಡನೆ

Suddi Udaya

ಸಾಮಾಜಿಕ ಮತ್ತು ಆಧ್ಯಾತ್ಮಿಕ ಸೇವೆಗಾಗಿ ಲ| ಬಿ.ಕೆ ವಿಶ್ವನಾಥ ಆರ್. ನಾಯಕ್‌ರಿಗೆ ಡಾಕ್ಟರೇಟ್ ಪದವಿ

Suddi Udaya
error: Content is protected !!