23.7 C
ಪುತ್ತೂರು, ಬೆಳ್ತಂಗಡಿ
April 24, 2026
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಸಂಘ-ಸಂಸ್ಥೆಗಳು

ಬಳಂಜ: ಶಾರದೋತ್ಸವ ಅಂಗವಾಗಿ ಕ್ರಿಕೆಟ್ ಪಂದ್ಯಾವಳಿ, ಬಿಸಿಲು-ಮಳೆ ಲೆಕ್ಕಿಸದೆ ಆಟವಾಡಿದ ಯುವಕರು

ಬಳಂಜ: ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ ಬಳಂಜ ಹಾಗೂ ಊರವರ ಸಹಕಾರದೊಂದಿಗೆ ಅ.6 ರಂದು ನಡೆಯುವ ಎರಡನೇ ವರ್ಷದ ಶಾರದೋತ್ಸವದ ಅಂಗವಾಗಿ ಕ್ರಿಕೆಟ್ ಪಂದ್ಯಾವಳಿಯು ಸೆ.22 ರಂದು ಬಳಂಜ ಕ್ರೀಡಾಂಗಣದಲ್ಲಿ ನಡೆಯಿತು.

ಕ್ರಿಕೆಟ್ ಪಂದ್ಯಾಟದ ಉದ್ಘಾಟನೆಯನ್ನು ಪ್ರಗತಿಪರ ಕೃಷಿಕರಾದ ತಿಮ್ಮಪ್ಪ ಪೂಜಾರಿ ತಾರಿಪಡ್ಪು ಉದ್ಘಾಟಿಸಿ ಕ್ರಿಕೆಟ್ ಪಂದ್ಯಾವಳಿ ಹಾಗೂ ಶಾರದೋತ್ಸವ ಅತ್ಯಂತ ಯಶಸ್ವಿಯಾಗಿ ನಡೆಯಲಿ ಎಂದು ಶುಭ ಹಾರೈಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ ಅಧ್ಯಕ್ಷ ಸಂತೋಷ್ ಪಿ ಕೋಟ್ಯಾನ್ ವಹಿಸಿದ್ದರು.

ವೇದಿಕೆಯಲ್ಲಿ ಸಂಘದ ಗೌರವಾಧ್ಯಕ್ಷ ಹೆಚ್.ಧರ್ಣಪ್ಪ ಪೂಜಾರಿ, ನಿಕಟಪೂರ್ವಾಧ್ಯಕ್ಷ ಪ್ರವೀಣ್ ಕುಮಾರ್ ಹೆಚ್.ಎಸ್,ಕಾರ್ಯದರ್ಶಿ ಜಗದೀಶ್ ಪೂಜಾರಿ, ನಿರ್ದೇಶಕರಾದ ರಂಜಿತ್ ಪೂಜಾರಿ,ದಿನೇಶ್ ಪೂಜಾರಿ ಅಂತರ,ರಕ್ಷಿತ್ ಬಗ್ಯೋಟ್ಟು,ಕ್ರಿಕೆಟ್ ಸಂಚಾಲಕ ಯೋಗೀಶ್ ಕೊಂಗುಳ ಉಪಸ್ಥಿತರಿದ್ದರು.

ಕ್ರಿಕೆಟ್ ಪಂದ್ಯಾವಳಿಯಲ್ಲಿ ಸುಮಾರು 20 ತಂಡಗಳು ಭಾಗವಹಿಸಿದ್ದವು. ಸಂತೋಷ್ ಪಿ ಕೋಟ್ಯಾನ್ ಸ್ವಾಗತಿಸಿ ವಂದಿಸಿದರು.ಪಂಚಲಿಂಗೇಶ್ವರ ಕ್ರಿಕೆಟರ್ಸ್ ಹಾಗೂ ಕ್ರಿಡಾಪಟುಗಳು ಸಹಕರಿಸಿದರು.

Related posts

ಮೂಡಬಿದಿರೆ: ನ್ಯೂ ವೈಬ್ರೆಂಟ್ ಪದವಿಪೂರ್ವ ಕಾಲೇಜು ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಅಭಿವಿನ್ಯಾಸ ಕಾರ್ಯಕ್ರಮ

Suddi Udaya

ಶಿಬಾಜೆ: ಪೆರ್ಲ ಸುಮತಿ ಹೆಬ್ಬಾರ್ ನಿಧನ

Suddi Udaya

ಡಾ| ಡಿ. ವೀರೇಂದ್ರ ಹೆಗ್ಗಡೆಯವರ ಹುಟ್ಟುಹಬ್ಬದ ಪ್ರಯುಕ್ತ ವೇಣೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ

Suddi Udaya

ಮಚ್ಚಿನ ಹಿಂದೂ ರುದ್ರಭೂಮಿ ಸಮಿತಿಯ ಸದಸ್ಯರು ಹಾಗೂ ಶೌರ್ಯ ವಿಪತ್ತು ನಿರ್ವಹಣಾ ಸಮಿತಿಯ ಸದಸ್ಯರಿಂದ ಸ್ವಚ್ಚತಾ ಕಾರ್ಯ

Suddi Udaya

ಪೆರಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ: ರೂ.340 ಕೋಟಿ ವ್ಯವಹಾರ, ರೂ. 71 ಲಕ್ಷ ನಿವ್ವಳ ಲಾಭ, ಸದಸ್ಯರಿಗೆ ಶೇ 21% ಡಿವಿಡೆಂಡ್ ಸುಮಾರು 37 ವರ್ಷ ಸೇವೆ ಸಲ್ಲಿಸಿದ ಮಹೇಂದ್ರವರ್ಮರಿಗೆ ಬೀಳ್ಕೊಡುಗೆ

Suddi Udaya

ಮನೆ ಬಳಿ ಶೆಡ್‌ನಲ್ಲಿ ನಿಲ್ಲಿಸಿದ್ದ ಕಾರು ಕಳವು

Suddi Udaya
error: Content is protected !!