23.5 C
ಪುತ್ತೂರು, ಬೆಳ್ತಂಗಡಿ
March 7, 2026
Uncategorized

ಶ್ರೀ ಸಿದ್ದಿವಿನಾಯಕ ದೇವಸ್ಥಾನ ಪೆರ್ಲ -ಬೈಪಾಡಿಯಲ್ಲಿ ದೇವಸ್ಥಾನದ ಮಹಿಳಾ ಸಮಿತಿ ರಚನೆ

ಬಂದಾರು : ಶ್ರೀ ಸಿದ್ದಿವಿನಾಯಕ ದೇವಸ್ಥಾನ ಪೆರ್ಲ -ಬೈಪಾಡಿಯಲ್ಲಿ ದೇವಸ್ಥಾನದ ಮಹಿಳಾ ಸಮಿತಿಯೂ ಇತ್ತೀಚೆಗೆ ರಚನೆಯಾಗಿರುತ್ತದೆ. ಸೆ 21 ರಂದು ಸಿದ್ದಿವಿನಾಯಕ ದೇವರ ಸನ್ನಿದಿಯಲ್ಲಿ ದೀಪ ಬೆಳಗಿಸಿ ಅರ್ಚಕರ ಮೂಲಕ ಪ್ರಾರ್ಥನೆ ಸಲ್ಲಿಸಿ ನೂತನ ಮಹಿಳಾ ಸಮಿತಿಯ ಕಾರ್ಯಚಟುವಟಿಕೆಗೆ ಚಾಲನೆ ನೀಡಲಾಯಿತು. ಈ ಸಂದರ್ಭದಲ್ಲಿ ಮಹಿಳಾ ಸಮಿತಿಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಸದಸ್ಯರ ಜೋಡಣೆ ಮಾಡುವಲ್ಲಿ ಎಲ್ಲರೂ ಕೈ ಜೋಡಿಸೋದು ,ಸಮಿತಿಯು ಯಾವುದೇ ಕಾರ್ಯಾಚಟುವಟಿಕೆ ಮಾಡುವುದಿದ್ದರೂ ಆಡಳಿತ ಮಂಡಳಿಗೆ ತಿಳಿಸುವುದು ,ಬ್ರಹ್ಮಕಲಶೋತ್ಸವ ಸಮಯ ಸಮವಸ್ತ್ರ ಧರಿಸುವ ಬಗ್ಗೆ ಹಾಗೂ ಹಲವಾರು ವಿಷಯಗಳ ಬಗ್ಗೆ ಆಡಳಿತ ಸಮಿತಿ ಅಧ್ಯಕ್ಷರಾದ ರಮೇಶ್ ಗೌಡ ಅಡ್ಡಾರು ಇವರ ಅದ್ಯಕ್ಷತೆಯಲ್ಲಿ ಚರ್ಚಿಸಲಾಯಿತು.
ದೇವಸ್ಥಾನದ ಮಹಿಳಾ ಸಮಿತಿ ಅಧ್ಯಕ್ಷೆಯಾದ ಶ್ವೇತಾ ಹಾರ್ತ್ಯಾರ್, ಉಪಾಧ್ಯಕ್ಷರಾದ ಶ್ಯಾಮಲಾ ಪಯ್ಯೋಡಿ, ರಶ್ಮಿತಾ ಪರಪ್ಪಾಜೆ, ಕುಸುಮಾವತಿ ಅಡ್ಡಾರು, ಕಾರ್ಯದರ್ಶಿ ಮೌನಶ್ರೀ ನಾಗoದೋಡಿ, ಗೀತಾ ತಾರಕೆರೆ, ಪುಷ್ಪಾವತಿ ಪೇರಲ್ದಡಿ ಹಾಗೂ ಸರ್ವ ಸದಸ್ಯರು ಉಪಸ್ಥಿತರಿದ್ದರು.
ಕಾರ್ಯಕ್ರಮವನ್ನು ಯಶೋಧ ಅಡ್ಡಾರು ಸ್ವಾಗತಿಸಿ, ಮೌನಶ್ರೀ ನಾಗoದೋಡಿ ನಿರೂಪಿಸಿ ಧನ್ಯವಾದ ಸಲ್ಲಿಸಿದರು

.

Related posts

ಜೆಸಿಐ ಮಡಂತ್ಯಾರು ಇದರ 2025ನೆ ಸಾಲಿನ ಅಧ್ಯಕ್ಷರಾಗಿ ಅಮಿತಾ ಅಶೋಕ್

Suddi Udaya

ಡಿಕೆ ಶಿವಕುಮಾರ್‌ ಬಣ, ಇದೀಗ ಮತ್ತೆ ಬಹಿರಂಗವಾಗಿ ತಮ್ಮ ನಾಯಕರ ಪರ ಲಾಬಿ ಆರಂಭಿಸಿದೆ

Suddi Udaya

ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಓಡಿಲ್ನಾಳ ಹಾಗೂ ಕುವೆಟ್ಟು ಗ್ರಾಮ ಸಮಿತಿಯ ವಾರ್ಷಿಕ ಮಹಾಸಭೆ

Suddi Udaya

ಗುರುವಾಯನಕೆರೆಯಲ್ಲಿ ಶಾಸಕ ಹರೀಶ್ ಪೂಂಜಾ ರವರ ಬ್ರಹತ್ ಬ್ಯಾನರ್

Suddi Udaya

ಕಾಂಗ್ರೆಸ್ ಸರಕಾರದ ವಿರುದ್ಧ ಹಾಲಿನ ದರ ಏರಿಕೆ, ಪ್ರೋತ್ಸಾಹ ಧನ ಬಿಡುಗಡೆ ಮಾಡದಿರುವ ಬಗ್ಗೆ ಬೆಳ್ತಂಗಡಿ ಮಹಿಳಾ ಮೋರ್ಚಾದ ವತಿಯಿಂದ ಬ್ಲ್ಯಾಕ್ ಟೀ ಮಾಡುವ ಮೂಲಕ ವಿಭಿನ್ನ ರೀತಿಯಲ್ಲಿ ಪ್ರತಿಭಟನೆ

Suddi Udaya

ಶಾಸಕ ಹರೀಶ್ ಪೂಂಜ ಗಡಾ೯ಡಿ ಶಾಲೆಯ ಮತದಾನ ಕೇಂದ್ರದಲ್ಲಿ ಮತದಾನ

Suddi Udaya
error: Content is protected !!