22.6 C
ಪುತ್ತೂರು, ಬೆಳ್ತಂಗಡಿ
July 23, 2026
Uncategorized

ಶ್ರೀ ಸಿದ್ದಿವಿನಾಯಕ ದೇವಸ್ಥಾನ ಪೆರ್ಲ -ಬೈಪಾಡಿಯಲ್ಲಿ ದೇವಸ್ಥಾನದ ಮಹಿಳಾ ಸಮಿತಿ ರಚನೆ

ಬಂದಾರು : ಶ್ರೀ ಸಿದ್ದಿವಿನಾಯಕ ದೇವಸ್ಥಾನ ಪೆರ್ಲ -ಬೈಪಾಡಿಯಲ್ಲಿ ದೇವಸ್ಥಾನದ ಮಹಿಳಾ ಸಮಿತಿಯೂ ಇತ್ತೀಚೆಗೆ ರಚನೆಯಾಗಿರುತ್ತದೆ. ಸೆ 21 ರಂದು ಸಿದ್ದಿವಿನಾಯಕ ದೇವರ ಸನ್ನಿದಿಯಲ್ಲಿ ದೀಪ ಬೆಳಗಿಸಿ ಅರ್ಚಕರ ಮೂಲಕ ಪ್ರಾರ್ಥನೆ ಸಲ್ಲಿಸಿ ನೂತನ ಮಹಿಳಾ ಸಮಿತಿಯ ಕಾರ್ಯಚಟುವಟಿಕೆಗೆ ಚಾಲನೆ ನೀಡಲಾಯಿತು. ಈ ಸಂದರ್ಭದಲ್ಲಿ ಮಹಿಳಾ ಸಮಿತಿಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಸದಸ್ಯರ ಜೋಡಣೆ ಮಾಡುವಲ್ಲಿ ಎಲ್ಲರೂ ಕೈ ಜೋಡಿಸೋದು ,ಸಮಿತಿಯು ಯಾವುದೇ ಕಾರ್ಯಾಚಟುವಟಿಕೆ ಮಾಡುವುದಿದ್ದರೂ ಆಡಳಿತ ಮಂಡಳಿಗೆ ತಿಳಿಸುವುದು ,ಬ್ರಹ್ಮಕಲಶೋತ್ಸವ ಸಮಯ ಸಮವಸ್ತ್ರ ಧರಿಸುವ ಬಗ್ಗೆ ಹಾಗೂ ಹಲವಾರು ವಿಷಯಗಳ ಬಗ್ಗೆ ಆಡಳಿತ ಸಮಿತಿ ಅಧ್ಯಕ್ಷರಾದ ರಮೇಶ್ ಗೌಡ ಅಡ್ಡಾರು ಇವರ ಅದ್ಯಕ್ಷತೆಯಲ್ಲಿ ಚರ್ಚಿಸಲಾಯಿತು.
ದೇವಸ್ಥಾನದ ಮಹಿಳಾ ಸಮಿತಿ ಅಧ್ಯಕ್ಷೆಯಾದ ಶ್ವೇತಾ ಹಾರ್ತ್ಯಾರ್, ಉಪಾಧ್ಯಕ್ಷರಾದ ಶ್ಯಾಮಲಾ ಪಯ್ಯೋಡಿ, ರಶ್ಮಿತಾ ಪರಪ್ಪಾಜೆ, ಕುಸುಮಾವತಿ ಅಡ್ಡಾರು, ಕಾರ್ಯದರ್ಶಿ ಮೌನಶ್ರೀ ನಾಗoದೋಡಿ, ಗೀತಾ ತಾರಕೆರೆ, ಪುಷ್ಪಾವತಿ ಪೇರಲ್ದಡಿ ಹಾಗೂ ಸರ್ವ ಸದಸ್ಯರು ಉಪಸ್ಥಿತರಿದ್ದರು.
ಕಾರ್ಯಕ್ರಮವನ್ನು ಯಶೋಧ ಅಡ್ಡಾರು ಸ್ವಾಗತಿಸಿ, ಮೌನಶ್ರೀ ನಾಗoದೋಡಿ ನಿರೂಪಿಸಿ ಧನ್ಯವಾದ ಸಲ್ಲಿಸಿದರು

.

Related posts

ಲಾಯಿಲ: ಕುಂಟಿನಿ ಅಲ್ ಬುಖಾರಿ ಜುಮಾ ಮಸ್ಜಿದ್ ಯಲ್ಲಿ ಬಕ್ರೀದ್ ಆಚರಣೆ

Suddi Udaya

ವಾಣಿ ಕಾಲೇಜಿನ ವಿಜ್ಞಾನ ವಿಭಾಗಕ್ಕೆ ಉತ್ತಮ ಫಲಿತಾಂಶ: ವಿದ್ಯಾರ್ಥಿನಿ ನವಮಿ ಗೆ 588 ಅಂಕ

Suddi Udaya

ಬೆಳ್ತಂಗಡಿ ತಾಲೂಕಿನ ಕುತ್ಲೂರು ಗ್ರಾಮವು “ಅತ್ಯುತ್ತಮ ಸಾಹಸಿಕ ಪ್ರವಾಸಿ ತಾಣ” ವಿಭಾಗದಲ್ಲಿ ರಾಷ್ಟ್ರಪ್ರಶಸ್ತಿಗೆ ಆಯ್ಕೆ

Suddi Udaya

ಅರಣ್ಯ ಇಲಾಖೆ ವತಿಯಿಂದ ಆನೆಯನ್ನು ಕಾಡಿಗೆ ಅಟ್ಟುವ ಕಾರ್ಯಾಚರಣೆ: ಸಾರ್ವಜನಿಕರಿಗೆ ಕೊಕ್ಕಡ ಗ್ರಾ.ಪಂ. ಹಾಗೂ ಅರಣ್ಯ ಇಲಾಖೆಯ ವತಿಯಿಂದ ಎಚ್ಚರಿಕೆಯ ಸಂದೇಶ

Suddi Udaya

ಬಂಗಾಡಿ ವಲಯ ಮಟ್ಟದ ಕಬಡ್ಡಿ ಪಂದ್ಯಾಟ: ಸ್ಟಾರ್ ಲೈನ್ ಆಂ.ಮಾ. ಶಾಲೆಯ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ಬೆಳ್ತಂಗಡಿ: ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕ ಹುದ್ದೆಗಾಗಿ ಉರ್ದು ಭಾಷೆ ಕಡ್ಡಾಯ ರದ್ದುಗೊಳಿಸುವಂತೆ ಹಿಂದೂ ಜನಜಾಗೃತಿ ಸಮಿತಿ ವತಿಯಿಂದ ತಹಶೀಲ್ದಾರರಿಗೆ ಮನವಿ

Suddi Udaya
error: Content is protected !!