25.5 C
ಪುತ್ತೂರು, ಬೆಳ್ತಂಗಡಿ
April 24, 2026
Uncategorized

ಶ್ರೀ ಸಿದ್ದಿವಿನಾಯಕ ದೇವಸ್ಥಾನ ಪೆರ್ಲ -ಬೈಪಾಡಿಯಲ್ಲಿ ದೇವಸ್ಥಾನದ ಮಹಿಳಾ ಸಮಿತಿ ರಚನೆ

ಬಂದಾರು : ಶ್ರೀ ಸಿದ್ದಿವಿನಾಯಕ ದೇವಸ್ಥಾನ ಪೆರ್ಲ -ಬೈಪಾಡಿಯಲ್ಲಿ ದೇವಸ್ಥಾನದ ಮಹಿಳಾ ಸಮಿತಿಯೂ ಇತ್ತೀಚೆಗೆ ರಚನೆಯಾಗಿರುತ್ತದೆ. ಸೆ 21 ರಂದು ಸಿದ್ದಿವಿನಾಯಕ ದೇವರ ಸನ್ನಿದಿಯಲ್ಲಿ ದೀಪ ಬೆಳಗಿಸಿ ಅರ್ಚಕರ ಮೂಲಕ ಪ್ರಾರ್ಥನೆ ಸಲ್ಲಿಸಿ ನೂತನ ಮಹಿಳಾ ಸಮಿತಿಯ ಕಾರ್ಯಚಟುವಟಿಕೆಗೆ ಚಾಲನೆ ನೀಡಲಾಯಿತು. ಈ ಸಂದರ್ಭದಲ್ಲಿ ಮಹಿಳಾ ಸಮಿತಿಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಸದಸ್ಯರ ಜೋಡಣೆ ಮಾಡುವಲ್ಲಿ ಎಲ್ಲರೂ ಕೈ ಜೋಡಿಸೋದು ,ಸಮಿತಿಯು ಯಾವುದೇ ಕಾರ್ಯಾಚಟುವಟಿಕೆ ಮಾಡುವುದಿದ್ದರೂ ಆಡಳಿತ ಮಂಡಳಿಗೆ ತಿಳಿಸುವುದು ,ಬ್ರಹ್ಮಕಲಶೋತ್ಸವ ಸಮಯ ಸಮವಸ್ತ್ರ ಧರಿಸುವ ಬಗ್ಗೆ ಹಾಗೂ ಹಲವಾರು ವಿಷಯಗಳ ಬಗ್ಗೆ ಆಡಳಿತ ಸಮಿತಿ ಅಧ್ಯಕ್ಷರಾದ ರಮೇಶ್ ಗೌಡ ಅಡ್ಡಾರು ಇವರ ಅದ್ಯಕ್ಷತೆಯಲ್ಲಿ ಚರ್ಚಿಸಲಾಯಿತು.
ದೇವಸ್ಥಾನದ ಮಹಿಳಾ ಸಮಿತಿ ಅಧ್ಯಕ್ಷೆಯಾದ ಶ್ವೇತಾ ಹಾರ್ತ್ಯಾರ್, ಉಪಾಧ್ಯಕ್ಷರಾದ ಶ್ಯಾಮಲಾ ಪಯ್ಯೋಡಿ, ರಶ್ಮಿತಾ ಪರಪ್ಪಾಜೆ, ಕುಸುಮಾವತಿ ಅಡ್ಡಾರು, ಕಾರ್ಯದರ್ಶಿ ಮೌನಶ್ರೀ ನಾಗoದೋಡಿ, ಗೀತಾ ತಾರಕೆರೆ, ಪುಷ್ಪಾವತಿ ಪೇರಲ್ದಡಿ ಹಾಗೂ ಸರ್ವ ಸದಸ್ಯರು ಉಪಸ್ಥಿತರಿದ್ದರು.
ಕಾರ್ಯಕ್ರಮವನ್ನು ಯಶೋಧ ಅಡ್ಡಾರು ಸ್ವಾಗತಿಸಿ, ಮೌನಶ್ರೀ ನಾಗoದೋಡಿ ನಿರೂಪಿಸಿ ಧನ್ಯವಾದ ಸಲ್ಲಿಸಿದರು

.

Related posts

ಜೈನ ಧಾರ್ಮಿಕ ಭಾವನೆಗಳಿಗೆ ಧಕ್ಕೆ ಹಾಗೂ ಜೈನ ಜಾತಿ ಮತ್ತು ಧರ್ಮಕ್ಕೆ ಅಪಮಾನ ಆರೋಪ : ಮಹೇಶ್ ಶೆಟ್ಟಿ ತಿಮರೋಡಿ ಹಾಗೂರಾಜು ಶೆಟ್ಟಿ ಎಂಬವರ ವಿರುದ್ಧ ಬೆಳ್ತಂಗಡಿ ಪೊಲೀಸ್ ಠಾಣೆಗೆ ದೂರು

Suddi Udaya

ಮೇಲಂತಬೆಟ್ಟು ನಲ್ಕೆತ್ಯಾರು ಬ್ರಹ್ಮಬೈದರ್ಕಳ ಊರ ಗರೋಡಿ ಸ್ಥಳದಲ್ಲಿ ಸಂಕ್ರಾಂತಿ ದರ್ಶನ- ನೂತನ ಗರೋಡಿಗೆ ಶಿಲಾನ್ಯಾಸ

Suddi Udaya

ಉಜಿರೆಯಲ್ಲಿ ಯಕ್ಷಗಾನ ಪ್ರದರ್ಶನ ಮತ್ತು ಸನ್ಮಾನ

Suddi Udaya

ಸೇವಾನಿಕೇತನಕ್ಕೆ ವಿಧಾನ ಪರಿಷತ್ ಸದಸ್ಯ ಕೆ. ಪ್ರತಾಪಸಿಂಹ ನಾಯಕ್ ಭೇಟಿ

Suddi Udaya

ಕಕ್ಕಿಂಜೆ ನಿವಾಸಿ ಎ.ಕೆ ಮುಹಮ್ಮದ್ ಹಾಜಿ (ಅಡ್ಡೂರು ಹಾಜಿ ) ನಿಧನ

Suddi Udaya

ಹಿಂದೂ ಕಾಯ೯ಕತ೯ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣ: ಬೆಳ್ತಂಗಡಿಯ ನೌಷದ್ ಪತ್ತೆಗೆ ಎನ್.ಐ.ಎ ರೂ. 2 ಲಕ್ಷ ಬಹುಮಾನ ಘೋಷಣೆ

Suddi Udaya
error: Content is protected !!