22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪೊಲೀಸ್ಪ್ರಮುಖ ಸುದ್ದಿ

ಗುರುವಾಯನಕೆರೆಯಲ್ಲಿ ನಿಲ್ಲಿಸಿದ ರೂ.68 ಸಾವಿರ ಮೌಲ್ಯದ ಮೋಟಾರ್ ಸೈಕಲ್ ಕಳವು

ಬೆಳ್ತಂಗಡಿ: ಗುರುವಾಯನಕೆರೆ ಎಂಬಲ್ಲಿರುವ ಶ್ರೇಷ್ಠ ಪೀಠೋಪಕರಣ ಅಂಗಡಿಯ ಪಕ್ಕದಲ್ಲಿ ನಿಲ್ಲಿಸಿದ್ದ ಮೋಟಾರ್ ಸೈಕಲ್ ನ್ನು ಯಾರೋ ಕಳವುಗೈದಿರುವ ಘಟನೆ ಸೆ.20 ರಂದು ನಡೆದಿದೆ.

ವೇಣೂರು ಕರಿಮಣೇಲು ನಿವಾಸಿ ಸಂತೋಷ್ ಕುಮಾರ್ ರವರು ಸೆ.20 ರಂದು ಮಧ್ಯಾಹ್ನ, ತನ್ನ ಬಾಬ್ತು ಕೆಎ 19 ಹೆಚ್ ಎಮ್ 3013 ನೇ ಬೈಕ್ (ಮೋಟಾರ್ ಸೈಕಲ್)ನ್ನು ಕುವೆಟ್ಟು ಗ್ರಾಮದ ಗುರುವಾಯನಕೆರೆ ಎಂಬಲ್ಲಿರುವ ಶ್ರೇಷ್ಠ ಪೀಠೋಪಕರಣ ಅಂಗಡಿಯ ಪಕ್ಕದಲ್ಲಿ ನಿಲ್ಲಿಸಿ ಹೋಗಿದ್ದು, ಹಿಂತಿರುಗಿ ಸಂಜೆ ಮೋಟಾರ್ ಸೈಕಲ್ ನಿಲ್ಲಿಸಿದ ಸ್ಥಳದಲ್ಲಿ ಸಂತೋಷ್ ರವರು ಬಂದು ನೋಡಿದಾಗ ಅಂದಾಜು ರೂ 68,000/ ಮೌಲ್ಯದ ಮೋಟಾರ್ ಸೈಕಲ್ ನಾಪತ್ತೆಯಾಗಿದ್ದು,. ಸುತ್ತಮುತ್ತಲಿನ ಪರಿಸರದಲ್ಲಿ ಹುಡುಕಾಡಲಾಗಿ ಪತ್ತೆಯಾಗಿರುವುದಿಲ್ಲ.

ಸದ್ರಿ ಮೋಟಾರ್ ಸೈಕಲ್ ಅನ್ನು ಯಾರೋ ಕಳ್ಳರು ಕಳವು ಮಾಡಿಕೊಂಡು ಹೋಗಿರುವುದಾಗಿ ನೀಡಿದ ದೂರಿನ ಮೇರೆಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಅಪರಾದ ಕ್ರಮಾಂಕ: 81/2024 ಕಲಂ: 303(1) BNS ರಂತೆ ಪ್ರಕರಣ ದಾಖಲಾಗಿರುತ್ತದೆ.

Related posts

ದ.ಕ. ಜಿಲ್ಲೆಯಲ್ಲಿ ಅಡಿಕೆ ಕೋಕೋ ಮತ್ತು ಕಾಳುಮೆಣಸು ಬೆಳೆಗಳಿಗೆ ಹವಾಮಾನ ಆಧಾರಿತ ಬೆಳೆ ವಿಮೆ ಸೌಲಭ್ಯ ಕಲ್ಪಿಸಲು ಇದುವರೆಗೂ ಯಾವುದೇ ಕ್ರಮವಹಿಸದೆ ಇರುವುದರ ಕುರಿತು ಮುಖ್ಯಮಂತ್ರಿಗಳ ಹಾಗೂ ತೋಟಗಾರಿಕ ಸಚಿವರ ಗಮನ ಸೆಳೆದ ವಿ.ಪ ಸದಸ್ಯ ಪ್ರತಾಪ್ ಸಿಂಹ ನಾಯಕ್

Suddi Udaya

ಕಳಿಯ ಗ್ರಾ.ಪಂ. ವ್ಯಾಪಿಯಲ್ಲಿ ಬಿರುಸಿನ ಮತದಾನ: ಗಮನಸೆಳೆದ ಪಿಂಕ್(ಸಖಿ) ಮತಗಟ್ಟೆ : ಮತಗಟ್ಟೆ ಕೇಂದ್ರದಲ್ಲಿ ಮತದಾರರ ವಿವಿಧ ಬೇಡಿಕೆ

Suddi Udaya

ಗುಂಡೂರಿ: ಮುದ್ದಾಡಿ ನಿವಾಸಿ ಪುರಲ್ಲ ನಿಧನ

Suddi Udaya

ಮೆಸ್ಕಾಂ ಬೆಳ್ತಂಗಡಿ ಉಪವಿಭಾಗದ ಸ.ಕಾ ಅಭಿಯಂತರ ಶಿವಶಂಕರ್ ಪುತ್ತೂರಿಗೆ ವರ್ಗಾವಣೆ

Suddi Udaya

ಮೇ 17: ಪೇರಾಲ್ದಪಲ್ಕೆ ಶ್ರೀ ಕ್ಷೇತ್ರ ಬಂಗಾಡಿ ಸತ್ಯ ಸಾರಮಾನಿ ಕಾನದ ಕಟದ ಜನ್ಮಭೂಮಿ ಇದರ ವಾರ್ಷಿಕ ಪರ್ವ ಮತ್ತು ವಿಜ್ಞಾಪನ ಪತ್ರ ಬಿಡುಗಡೆ

Suddi Udaya

ಧರ್ಮಸ್ಥಳ: ಶ್ರೀ ಮಂಜುನಾಥೇಶ್ವರ ಆಂ.ಮಾ. ಶಾಲೆಯಲ್ಲಿ 10ನೇ ತರಗತಿ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಸಮಾರಂಭ

Suddi Udaya
error: Content is protected !!