24.4 C
ಪುತ್ತೂರು, ಬೆಳ್ತಂಗಡಿ
May 20, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆದ್ರಬೆಟ್ಟು: ಜಲ್ಸತುಲ್ ಜಮೀಲ್ ಮಿಲಾದ್ 2024 ಪ್ರತಿಭಾ ಕಾರ್ಯಕ್ರಮ

ಬೆಳ್ತಂಗಡಿ: ತಾಲೂಕಿನ ಬೆದ್ರಬೆಟ್ಟು ರಿಫಾಯಿಯ್ಯಾ ಜುಮಾ ಮಸೀದಿ ಮತ್ತು ಮುರ್ಷೀದುಲ್ ಆನಾಮ್ ಯಂಗ್ ಮ್ಯಾನ್ಸ್ ಅಸೋಸಿಯೇಷನ್ ವತಿಯಿಂದ ಪುಣ್ಯ ಪ್ರವಾದಿಯವರ ಜನ್ಮದಿನ ಅಂಗವಾಗಿ ‌ ಜಲ್ಸತುಲ್ ಜಮೀಲ್2024 ಪ್ರತಿಭಾ ಕಾರ್ಯಕ್ರಮ ಮಿಲಾದ್ ಆಚರಿಸಲಾಯಿತು. ಬೆದ್ರಬೆಟ್ಟು ಖತೀಬರಾದ ನೌಷಾದ್ ಸಖಾಫಿಯವರ ದುಆದೊಂದಿಗೆ ಕಾರ್ಯಕ್ರಮ ಆರಂಭವಾಯಿತು. ನಂತರ ಮದ್ರಸ ವಿದ್ಯಾರ್ಥಿಗಳು ಮುಹಮ್ಮದ್ ಪೈಗಂಬ‌ರ್ (ಸ.ಅ )ರವರ ಚರಿತ್ರೆ, ಭಾಷಣ, ಮದಹ್ ಗೀತೆಗಳ ಮೂಲಕ ಈ ದಿನಕ್ಕೆ ಅರ್ಥ ಕಲ್ಪಿಸಿದರು. ಕಾರ್ಯಕ್ರಮದ ಕೊನೆಯ ಭಾಗವಾದ ಸಮಾರೋಪ ಸಮಾರಂಭ ವೇದಿಕೆಯನ್ನು ಬೆದ್ರಬೆಟ್ಟು ಆಡಳಿತ ಸಮಿತಿ ಅಧ್ಯಕ್ಷರಾದ ಸಲೀಂ ರವರ ಘನ ಅಧ್ಯಕ್ಷತೆಯಲ್ಲಿ ನಡೆಯಿತು.


ಸಮಾರೋಪ ಸಮಾರಂಭದ ಉದ್ಘಾಟನೆಯನ್ನು ಕೇಂದ್ರ ಜುಮಾ ಮಸೀದಿ ಕಿಲ್ಲೂರು ಖತೀಬ್ ಸಂಶೀರ್ ಸಖಾಫಿ ಪರಪ್ಪು ಉದ್ಘಾಟನೆ ಮಾಡಿದರು, ಮುಖ್ಯ ಅತಿಥಿಯಾಗಿ ಆಗಮಿಸಿದ ಸಯ್ಯದ್ ಝೈನುಲ್ ಅಬಿದೀನ್ ತಂಙಲ್ ಕಾಜೂರು ಪ್ರಾಸ್ತಾವಿಕ ಭಾಷಣ ಮಾಡಿ ದುಃಹಾ ನೆರವೇರಿಸಿದರು.


ನಂತರ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು.
ಈ ಸಂದರ್ಭದಲ್ಲಿ ವೇದಿಕೆಯಲ್ಲಿ ಕೇಂದ್ರ ಜುಮಾ ಪದಾಧಿಕಾರಿಗಳು, ಪಿಚಲರ್,ಪೆರ್ದಾಡಿ,ಏರ್ಮಲ,ಧರ್ಮ ಗುರುಗಳು ಹಾಗು ಪದಾಧಿಕಾರಿಗಳು, ಬೆದ್ರಬೆಟ್ಟು ಮಸೀದಿ ಮಾಜಿ ಅಧ್ಯಕ್ಷರು ಹಸೈನಾರ್, ಮುರ್ಷೀದುಲ್ ಆನಾಮ್ ಯಂಗ್ ಮ್ಯಾನ್ಸ್ ಅಸೋಸಿಯೇಷನ್ ಪದಾಧಿಕಾರಿಗಳು, ಉದ್ಯಮಿ ಸತ್ತಾರ್ ಬಂಗಾಡಿ, ವಜೀರ್ ಬಂಗಾಡಿ, ಎಸ್.ಎಸ್.ಎಫ್ ಅಧ್ಯಕ್ಷರಾದ ನೌಫಲ್ ಹಾಶಿಮಿ , ಎಸ್.ವೈ.ಎಸ್ ಅಧ್ಯಕ್ಷರಾದ ಮಜೀದ್ ಗೋಲ್ಡನ್ ಫಿಶ್ ಮತ್ತು ಅಝರ್ ಮಿಸ್ಬಾಹಿ ಉಪಸ್ಥಿತರಿದ್ದರು.


ಕಾರ್ಯಕ್ರಮವನ್ನು ಸಿನಾನ್ ಸಅದಿ ಸ್ವಾಗತಿಸಿ ಅಬ್ದುಲ್ ಖಾದರ್ ಸಅದಿ ನಿರೂಪಿಸಿದರು. ಮಧ್ಯಾಹ್ನ ಸಾಮೂಹಿಕ ಮಿಲಾದ್ ವಿಶೇಷ ಪ್ರಾರ್ಥನೆ ಸಾರ್ವಜನಿಕ ತುಪ್ಪದೂಟ ಮತ್ತು ಕಾರ್ಯಕ್ರಮ ಕೊನೆಯಲ್ಲಿ ತಬರ್ರುಕ್ ವಿತರಣೆ ಮಾಡಲಾಯಿತು

Related posts

ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಹಾಗೂ ಶಾಸಕ ಹರೀಶ್ ಪೂಂಜ:ತಾಲ್ಲೂಕಿನಾದ್ಯಾಂತ ಸಂಘಟನಾತ್ಮಕ ಪ್ರವಾಸ – 65ಕ್ಕೂ ಅಧಿಕಶಕ್ತಿ ಕೇಂದ್ರಗಳಿಗೆ ಭೇಟಿ ನೀಡಿ, ಕಾಯ೯ಕತ೯ರ ಸಭೆ

Suddi Udaya

ಇಂದಬೆಟ್ಟು : ಜಾನುವಾರುಗಳಿಗೆ ಚರ್ಮಗಂಟು ರೋಗದ ವಿರುದ್ಧ ಲಸಿಕಾ ಅಭಿಯಾನ

Suddi Udaya

ನಡ: ತಾಲೂಕು ಮಟ್ಟದ ವಿಜ್ಞಾನ ಮೇಳ

Suddi Udaya

ಕೊಕ್ಕಡ “ಅಮೃತ” ಗ್ರಾಮ ಪಂಚಾಯತ್ ವಿವಿಧ ಕಾಮಗಾರಿಗಳ ಉದ್ಘಾಟನೆ

Suddi Udaya

ಕನ್ಯಾಡಿ || : ಸಾರ್ವಜನಿಕ ಶ್ರೀ ಗಣೇಶೋತ್ಸವದ ಸಮಿತಿ ರಚನೆ

Suddi Udaya

ಕಸ್ತೂರಿ ರಂಗನ್ ವರದಿಯನ್ನು ಯಥಾವತ್ತಾಗಿ ಜಾರಿ ಮಾಡುತ್ತೇವೆ ಎಂಬ ರಾಜ್ಯ ಅರಣ್ಯ ಸಚಿವ ಈಶ್ವರ ಖಂಡ್ರೆ ಹೇಳಿಕೆ: ಅರಣ್ಯವಾಸಿಗಳ ಬದುಕನ್ನು ನಾಶಮಾಡುವ ಹುನ್ನಾರವಾಗಿದ್ದು , ತಕ್ಷಣ ರಾಜ್ಯ ಸರ್ಕಾರ ತನ್ನ ಜನವಿರೋಧಿ ನೀತಿಯನ್ನು ಬದಲಾವಣೆ ಮಾಡದಿದ್ದರೆ ಬೀದಿಗಿಳಿದು ಜನರ ಬದುಕುವ ಹಕ್ಕನ್ನು ಉಳಿಸಿಕೊಳ್ಳಬೇಕಾಗುತ್ತದೆ: ಕರ್ನಾಟಕ ಆದಿವಾಸಿ ಹಕ್ಕುಗಳ ಸಮನ್ವಯ ಸಮಿತಿ ಎಚ್ಚರಿಕೆ

Suddi Udaya
error: Content is protected !!