ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ:ಪ್ರಿಯದರ್ಶಿನಿ ಸೌಹಾರ್ದ ಸಹಕಾರಿ ಸಂಘದ ಮಹಾಸಭೆ: ರೂ. 123 ಕೋಟಿ ವ್ಯವಹಾರ, ರೂ. 50 ಲಕ್ಷ ಲಾಭ, ಶೇ.12 ಡಿವಿಡೆಂಡ್

ಬೆಳ್ತಂಗಡಿ: ಪ್ರಿಯದರ್ಶಿನಿ ಸೌಹಾರ್ದ ಸಹಕಾರಿ ಸಂಘದ ಮಹಾಸಭೆ ಸೆ.23ರಂದು ಪ್ರಿಯದರ್ಶಿನಿ ಸೌಹಾರ್ದ ಸಹಕಾರಿ ಸಂಘದ ವಠಾರದಲ್ಲಿ ಸಂಘದ ಉಪಾಧ್ಯಕ್ಷ ಗಂಗಾಧರ ಮಿತ್ತಮಾರ್ ಅವರ ಅಧ್ಯಕ್ಷತೆಯಲ್ಲಿ ಜರಗಿತು.

ವರದಿ ಸಾಲಿನಲ್ಲಿ ಸಂಘವು ರೂ. 123 ಕೋಟಿ ವ್ಯವಹಾರ ನಡೆಸಿ, ರೂ. 50 ಲಕ್ಷ ಲಾಭ ಗಳಿಸಿದೆ., ಶೇ.12 ಡಿವಿಡೆಂಡ್ ಘೋಷಣೆ ಮಾಡಿದರು.

ವರದಿ ಹಾಗೂ ಲೆಕ್ಕಪತ್ರಗಳನ್ನು ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಪ್ರದೀಪ್ ಕುಮಾರ್ ಮಂಡಿಸಿದರು.
ಅತೀ ಹೆಚ್ಚು ನಿತ್ಯ ನಿಧಿ ಸಂಗ್ರಹಣೆ ಮಾಡಿದ ಚರಣ್ ಕುಮಾರ್, ರಾಜೇಶ್.ಬಿ, ಪ್ರಶಾಂತ್ ಇವರಿಗೆ ಬಹುಮಾನ ನೀಡಲಾಯಿತು.

ಈ ಸಂದರ್ಭದಲ್ಲಿ ಉಷಾ ಶರತ್, ಜೆಸಿಂತಾ ಮೋನಿಸ್, ಉಮೇಶ್ ಎಂ.ಬಿ, ಸಿಬ್ಬಂದಿಗಳಾದ ಸುಷ್ಮಾ ಆರ್., ಚೈತ್ರ, ಯುವರಾಜ್, ಮನೋಜ್ ಕುಮಾರ್, ಶ್ರವಣ್ ಕುಮಾರ್ ಉಪಸ್ಥಿತರಿದ್ದರು. ಸಿಬ್ಬಂದಿ ರಮ್ಯ, ಶಾರದಾ ಮತ್ತು ಅನುಶ್ರೀ ಪ್ರಾರ್ಥನೆ ಮಾಡಿದರು.ಸಿಬ್ಬಂದಿ ಜನಿಶ್.ಜೆ ನಿರೂಪಿಸಿದರು.ಸಂಘದ ನಿರ್ದೇಶಕ ರಾಮಚಂದ್ರ ಗೌಡ ಸ್ವಾಗತಿಸಿ, ಮೋಹನ್ ಶೆಟ್ಟಿಗಾರ್ ಧನ್ಯವಾದವಿತ್ತರು.

Related posts

ಕಲ್ಮಂಜ: ಸಿದ್ದಬೈಲು ಪರಾರಿ ಸ.ಹಿ.ಪ್ರಾ. ಶಾಲೆ ಶಾಲೆಯ ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕ ವಿತರಣೆ

Suddi Udaya

ಕೇಳ ಪಂಚಲಿಂಗೇಶ್ವರ ದೇವಸ್ಥಾನ ಶಿಲಾನ್ಯಾಸ ಸಮಾರಂಭದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಮುಖ್ಯಮಂತ್ರಿ ಸಿದ್ದರಾಮಯ್ಯರವರ ಉಪ ಕಾರ್ಯದರ್ಶಿಯಾಗಿ ಮಡಂತ್ಯಾರಿನ ಅರುಣ್ ಪುರ್ಟಾಡೊ ನೇಮಕ

Suddi Udaya

ರಾಷ್ಟೋತ್ಥಾನ ಪರಿಷತ್ತಿನ ಮಾಸಪತ್ರಿಕೆ ಉತ್ಥಾನ ಬಿಡುಗಡೆ

Suddi Udaya

ಎಕ್ಸೆಲ್ ಪದವಿ ಪೂರ್ವ ಕಾಲೇಜಿನಲ್ಲಿ ಸಿಇಟಿ ಪರೀಕ್ಷಾ ಕೇಂದ್ರ

Suddi Udaya

ಬೆಳ್ತಂಗಡಿ: ಪೃಥ್ವಿ ಜುವೆಲ್ಸ್ ನಲ್ಲಿ ಬಂಪರ್ ಲಕ್ಕಿ ಡ್ರಾ ವಿಜೇತರಿಗೆ ಬಹುಮಾನ ವಿತರಣೆ

Suddi Udaya
error: Content is protected !!