23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಟ್ರಸ್ಟ್ ವತಿಯಿಂದ ಟ್ರಸ್ಟ್ ಸದಸ್ಯತ್ವ ನೇಮಕಾತಿ ಸಭೆ

ಬೆಳ್ತಂಗಡಿ : ತಾಲೂಕು ಒಕ್ಕಲಿಗ ಗೌಡರ ಟ್ರಸ್ಟ್ ವತಿಯಿಂದ ಟ್ರಸ್ಟ್ ಸದಸ್ಯತ್ವ ನೇಮಕಾತಿ ಸಭೆಯು ಸೆ.23ರಂದು ಬೆಳ್ತಂಗಡಿ ಸಿವಿಸಿ ಹಾಲ್ ನಲ್ಲಿ ನಡೆಯಿತು.

ದ.ಕ. ಜಿಲ್ಲಾ ಒಕ್ಕಲಿಗ ಗೌಡರ ಸಂಘದ ಅಧ್ಯಕ್ಷ ಡಿ.ವಿ. ಬಾಲಕೃಷ್ಣ ಗೌಡ ಮಾತನಾಡಿ ಸಂಘಟನೆಗಳು ನಿಂತ ನೀರಾಗದೆ, ಹರಿಯುವ ನೀರಾಗಬೇಕು. ನಮ್ಮ ಸಮಾಜದ ಕೊನೆಯ ವ್ಯಕ್ತಿಗೂ ಕೂಡ ಸಹಾಯವಾಗಬೇಕು. ಈ ಟ್ರಸ್ಟ್ ಬೆಳಗಲಿ ಎಂದು ಶುಭಹಾರೈಸಿದರು.

ಬೆಳ್ತಂಗಡಿ ತಾಲೂಕು ಸಮಿತಿ ಅಧ್ಯಕ್ಷ ಮೋಹನ್ ಕುಮಾರ್ ಕಲ್ಮ0ಜ ಪ್ರಸ್ತಾವಿಕವಾಗಿ ಮಾತನಾಡಿದರು.

ಕಾರ್ಯಕ್ರಮದಲ್ಲಿ ಸಾಂಕೇತಿಕವಾಗಿ ಸದಸ್ಯತ್ವದ ಅರ್ಜಿ ನಮೂನೆ ವಿತರಣೆ ಮಾಡಲಾಯಿತು.

ವೇದಿಕೆಯಲ್ಲಿ ದ.ಕ. ಜಿಲ್ಲಾ ಒಕ್ಕಲಿಗ ಗೌಡರ ಸಂಘದ ಉಪಾಧ್ಯಕ್ಷ ಭಾಸ್ಕರ ಗೌಡ ದೇವಸ್ಯ, ತಾಲೂಕು ಸಮಿತಿ ಕಾರ್ಯದರ್ಶಿ ಭರತ್ ಕುಮಾರ್ ಬಂಗಾಡಿ, ಕಾರ್ಯಧ್ಯಕ್ಷರಾದ ಶ್ರೀನಿವಾಸ್ ಗೌಡ ಬೆಳಾಲು, ಜಯಂತ್ ಗೌಡ ಗುರಿಪಳ್ಳ, ಸೂರಜ್ ಕುಮಾರ್ ಒಳಂಬ್ರ ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಸಂಚಾಲಕರಾದ ವಿಜಯ ಗೌಡ ಮತ್ತು ರಂಜನ್‌ ಜಿ.ಗೌಡ, ಪದಾಧಿಕಾರಿಗಳು ಹಾಗೂ ಸರ್ವಸದಸ್ಯರುಗಳು ಉಪಸ್ಥಿತರಿದ್ದರು.

ಟ್ರಸ್ಟಿನ ಸದಸ್ಯ ವಿದ್ಯಾಶ್ರೀನಿವಾಸ್ ಗೌಡ ಪ್ರಾರ್ಥಿಸಿದರು. ಸ್ಥಾಪಕ ಟ್ರಸ್ಟಿಗಳಾದ ವಸಂತ ಮರಕಡ ಸ್ವಾಗತಿಸಿದರು. ನವೀನ್ ಬಿ.ಕೆ. ನಿರೂಪಿಸಿದರು. ಸೂರಜ್ ವಳಂಬ್ರ ಧನ್ಯವಾದವಿತ್ತರು.

Related posts

ಕಾಶಿಪಟ್ಣ ಗ್ರಾಮ ಪಂಚಾಯತ್ ಗೆ ಸ್ವಚ್ಛ ಸರ್ವೇಕ್ಷಣಾ ಪ್ರಶಸ್ತಿ: ಗ್ರಾ.ಪಂ ಅಧ್ಯಕ್ಷ ಸತೀಶ್ ಕಾಶಿಪಟ್ಣ ಮತ್ತು ಪಿಡಿಓ ಆಶಾಲತಾರವಿಗೆ ಗೌರವ

Suddi Udaya

ಭಾರತ -ಆಸ್ಟ್ರೇಲಿಯಾ ವಿಶ್ವಕಪ್ ಫೈನಲ್: ಭಾರತದ ಗೆಲುವಿಗಾಗಿ ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನದಲ್ಲಿ ವಿಶೇಷ ಪ್ರಾರ್ಥನೆ

Suddi Udaya

ಶಿಶಿಲ: ಸೃಷ್ಟಿ ಸಂಜೀವಿನಿ ಒಕ್ಕೂಟದ ವಾರ್ಷಿಕ ಮಹಾಸಭೆ

Suddi Udaya

ಅಯೋಧ್ಯೆಯಲ್ಲಿ ಶ್ರೀ ರಾಮನ ಮಂದಿರದ ಉದ್ಘಾಟನೆ ಹಾಗೂ ಪ್ರಾಣ ಪ್ರತಿಷ್ಠಾಪನೆಯ ಪ್ರಯುಕ್ತ ಬೆಳ್ತಂಗಡಿಯ ರಾಮ ಕ್ಷತ್ರಿಯ ಸಂಘದಿಂದ ರಾಮೋತ್ಸವ

Suddi Udaya

ತೆಕ್ಕಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಮಹಾಸಭೆ : ರೂ.111 ಕೋಟಿ ವ್ಯವಹಾರ, ರೂ.24 ಲಕ್ಷ ಲಾಭ,

Suddi Udaya

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಪ್ರಥಮ ವರ್ಷದ ವಿದ್ಯಾರ್ಥಿಗಳ ಒರಿಂಟೇಷನ್ ಕಾರ್ಯಕ್ರಮ

Suddi Udaya
error: Content is protected !!