September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಟ್ರಸ್ಟ್ ವತಿಯಿಂದ ಟ್ರಸ್ಟ್ ಸದಸ್ಯತ್ವ ನೇಮಕಾತಿ ಸಭೆ

ಬೆಳ್ತಂಗಡಿ : ತಾಲೂಕು ಒಕ್ಕಲಿಗ ಗೌಡರ ಟ್ರಸ್ಟ್ ವತಿಯಿಂದ ಟ್ರಸ್ಟ್ ಸದಸ್ಯತ್ವ ನೇಮಕಾತಿ ಸಭೆಯು ಸೆ.23ರಂದು ಬೆಳ್ತಂಗಡಿ ಸಿವಿಸಿ ಹಾಲ್ ನಲ್ಲಿ ನಡೆಯಿತು.

ದ.ಕ. ಜಿಲ್ಲಾ ಒಕ್ಕಲಿಗ ಗೌಡರ ಸಂಘದ ಅಧ್ಯಕ್ಷ ಡಿ.ವಿ. ಬಾಲಕೃಷ್ಣ ಗೌಡ ಮಾತನಾಡಿ ಸಂಘಟನೆಗಳು ನಿಂತ ನೀರಾಗದೆ, ಹರಿಯುವ ನೀರಾಗಬೇಕು. ನಮ್ಮ ಸಮಾಜದ ಕೊನೆಯ ವ್ಯಕ್ತಿಗೂ ಕೂಡ ಸಹಾಯವಾಗಬೇಕು. ಈ ಟ್ರಸ್ಟ್ ಬೆಳಗಲಿ ಎಂದು ಶುಭಹಾರೈಸಿದರು.

ಬೆಳ್ತಂಗಡಿ ತಾಲೂಕು ಸಮಿತಿ ಅಧ್ಯಕ್ಷ ಮೋಹನ್ ಕುಮಾರ್ ಕಲ್ಮ0ಜ ಪ್ರಸ್ತಾವಿಕವಾಗಿ ಮಾತನಾಡಿದರು.

ಕಾರ್ಯಕ್ರಮದಲ್ಲಿ ಸಾಂಕೇತಿಕವಾಗಿ ಸದಸ್ಯತ್ವದ ಅರ್ಜಿ ನಮೂನೆ ವಿತರಣೆ ಮಾಡಲಾಯಿತು.

ವೇದಿಕೆಯಲ್ಲಿ ದ.ಕ. ಜಿಲ್ಲಾ ಒಕ್ಕಲಿಗ ಗೌಡರ ಸಂಘದ ಉಪಾಧ್ಯಕ್ಷ ಭಾಸ್ಕರ ಗೌಡ ದೇವಸ್ಯ, ತಾಲೂಕು ಸಮಿತಿ ಕಾರ್ಯದರ್ಶಿ ಭರತ್ ಕುಮಾರ್ ಬಂಗಾಡಿ, ಕಾರ್ಯಧ್ಯಕ್ಷರಾದ ಶ್ರೀನಿವಾಸ್ ಗೌಡ ಬೆಳಾಲು, ಜಯಂತ್ ಗೌಡ ಗುರಿಪಳ್ಳ, ಸೂರಜ್ ಕುಮಾರ್ ಒಳಂಬ್ರ ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಸಂಚಾಲಕರಾದ ವಿಜಯ ಗೌಡ ಮತ್ತು ರಂಜನ್‌ ಜಿ.ಗೌಡ, ಪದಾಧಿಕಾರಿಗಳು ಹಾಗೂ ಸರ್ವಸದಸ್ಯರುಗಳು ಉಪಸ್ಥಿತರಿದ್ದರು.

ಟ್ರಸ್ಟಿನ ಸದಸ್ಯ ವಿದ್ಯಾಶ್ರೀನಿವಾಸ್ ಗೌಡ ಪ್ರಾರ್ಥಿಸಿದರು. ಸ್ಥಾಪಕ ಟ್ರಸ್ಟಿಗಳಾದ ವಸಂತ ಮರಕಡ ಸ್ವಾಗತಿಸಿದರು. ನವೀನ್ ಬಿ.ಕೆ. ನಿರೂಪಿಸಿದರು. ಸೂರಜ್ ವಳಂಬ್ರ ಧನ್ಯವಾದವಿತ್ತರು.

Related posts

ನಾವೂರು ಸರಕಾರಿ ಪ್ರೌಢ ಶಾಲೆಗೆ ಶೇ. 100 ಫಲಿತಾಂಶ

Suddi Udaya

ನಾವೂರು ಸರಕಾರಿ ಪ್ರೌಢಶಾಲೆಯಲ್ಲಿ ಪೋಷಕ-ಶಿಕ್ಷಕರ ಸಭೆ ಹಾಗೂ ವೃತ್ತಿ ಮಾರ್ಗದರ್ಶನ ಕಾರ್ಯಕ್ರಮ

Suddi Udaya

ಉಜ್ವಲ ಯೋಜನೆಯ ಮಹಿಳೆಯರ ಮೇಲೂ, “ಬೆಲೆ ಏರಿಕೆಯ ಬರೆ ಎಳೆದ” ಕೇಂದ್ರ ಸರ್ಕಾರ: ರಕ್ಷಿತ್ ಶಿವರಾಂ

Suddi Udaya

ಕುಕ್ಕೇಡಿ: ಮಡಿಲೊಟ್ಟು ನಿವಾಸಿ ಲಿಂಗಮ್ಮ ದೇವಾಡಿಗ ನಿಧನ

Suddi Udaya

ಬೆಳ್ತಂಗಡಿ: ಡಾ. ಬಿ.ಆರ್ ಅಂಬೇಡ್ಕರ್ ಭವನ ನಿರ್ಮಾಣ ಕಾಮಗಾರಿಗೆ ರೂ.3ಕೋಟಿ ಅನುದಾನ

Suddi Udaya

ವಸಂತ ಬಂಗೇರರ ಹುಟ್ಟುಹಬ್ಬ ಪ್ರಯುಕ್ತ ನಡೆಯುವ ರಕ್ತದಾನ ಮತ್ತು ಕಬಡ್ಡಿ ಪಂದ್ಯಾಟಗಳಲ್ಲಿ ಭಾಗವಹಿಸುವಂತೆ ಪ್ರೀತಿತಾ ಬಂಗೇರ ಮನವಿ

Suddi Udaya
error: Content is protected !!