23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಟ್ರಸ್ಟ್ ವತಿಯಿಂದ ಟ್ರಸ್ಟ್ ಸದಸ್ಯತ್ವ ನೇಮಕಾತಿ ಸಭೆ

ಬೆಳ್ತಂಗಡಿ : ತಾಲೂಕು ಒಕ್ಕಲಿಗ ಗೌಡರ ಟ್ರಸ್ಟ್ ವತಿಯಿಂದ ಟ್ರಸ್ಟ್ ಸದಸ್ಯತ್ವ ನೇಮಕಾತಿ ಸಭೆಯು ಸೆ.23ರಂದು ಬೆಳ್ತಂಗಡಿ ಸಿವಿಸಿ ಹಾಲ್ ನಲ್ಲಿ ನಡೆಯಿತು.

ದ.ಕ. ಜಿಲ್ಲಾ ಒಕ್ಕಲಿಗ ಗೌಡರ ಸಂಘದ ಅಧ್ಯಕ್ಷ ಡಿ.ವಿ. ಬಾಲಕೃಷ್ಣ ಗೌಡ ಮಾತನಾಡಿ ಸಂಘಟನೆಗಳು ನಿಂತ ನೀರಾಗದೆ, ಹರಿಯುವ ನೀರಾಗಬೇಕು. ನಮ್ಮ ಸಮಾಜದ ಕೊನೆಯ ವ್ಯಕ್ತಿಗೂ ಕೂಡ ಸಹಾಯವಾಗಬೇಕು. ಈ ಟ್ರಸ್ಟ್ ಬೆಳಗಲಿ ಎಂದು ಶುಭಹಾರೈಸಿದರು.

ಬೆಳ್ತಂಗಡಿ ತಾಲೂಕು ಸಮಿತಿ ಅಧ್ಯಕ್ಷ ಮೋಹನ್ ಕುಮಾರ್ ಕಲ್ಮ0ಜ ಪ್ರಸ್ತಾವಿಕವಾಗಿ ಮಾತನಾಡಿದರು.

ಕಾರ್ಯಕ್ರಮದಲ್ಲಿ ಸಾಂಕೇತಿಕವಾಗಿ ಸದಸ್ಯತ್ವದ ಅರ್ಜಿ ನಮೂನೆ ವಿತರಣೆ ಮಾಡಲಾಯಿತು.

ವೇದಿಕೆಯಲ್ಲಿ ದ.ಕ. ಜಿಲ್ಲಾ ಒಕ್ಕಲಿಗ ಗೌಡರ ಸಂಘದ ಉಪಾಧ್ಯಕ್ಷ ಭಾಸ್ಕರ ಗೌಡ ದೇವಸ್ಯ, ತಾಲೂಕು ಸಮಿತಿ ಕಾರ್ಯದರ್ಶಿ ಭರತ್ ಕುಮಾರ್ ಬಂಗಾಡಿ, ಕಾರ್ಯಧ್ಯಕ್ಷರಾದ ಶ್ರೀನಿವಾಸ್ ಗೌಡ ಬೆಳಾಲು, ಜಯಂತ್ ಗೌಡ ಗುರಿಪಳ್ಳ, ಸೂರಜ್ ಕುಮಾರ್ ಒಳಂಬ್ರ ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಸಂಚಾಲಕರಾದ ವಿಜಯ ಗೌಡ ಮತ್ತು ರಂಜನ್‌ ಜಿ.ಗೌಡ, ಪದಾಧಿಕಾರಿಗಳು ಹಾಗೂ ಸರ್ವಸದಸ್ಯರುಗಳು ಉಪಸ್ಥಿತರಿದ್ದರು.

ಟ್ರಸ್ಟಿನ ಸದಸ್ಯ ವಿದ್ಯಾಶ್ರೀನಿವಾಸ್ ಗೌಡ ಪ್ರಾರ್ಥಿಸಿದರು. ಸ್ಥಾಪಕ ಟ್ರಸ್ಟಿಗಳಾದ ವಸಂತ ಮರಕಡ ಸ್ವಾಗತಿಸಿದರು. ನವೀನ್ ಬಿ.ಕೆ. ನಿರೂಪಿಸಿದರು. ಸೂರಜ್ ವಳಂಬ್ರ ಧನ್ಯವಾದವಿತ್ತರು.

Related posts

ಗೆಜ್ಜೆಗಿರಿ ಜಾತ್ರಾ ಮಹೋತ್ಸವದ ಬಗ್ಗೆ ಮಂಗಳೂರು ವಲಯ ಸಮಾಲೋಚನಾ ಸಭೆ

Suddi Udaya

ಸುರ್ಯ ದಿ. ಪುರಂದರ ಪೂಜಾರಿ ಇವರ ಸ್ಮರಣಾರ್ಥ ಜನಸ್ನೇಹಿ ಕಪ್ : ತಾ| ಮಟ್ಟದ ಪುರುಷರ ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾಟ: ಸನ್ಮಾನ

Suddi Udaya

ಚಿರಂಜೀವಿ ಶೆಟ್ಟಿ ನಾಳ ನಿರ್ಮಾಣದ ‘ಮೃತ್ಯುಂಜಯ’ ಮೈರಲ್ಕೆ ಶ್ರೀ ಕಿರಾತಮೂರ್ತಿ ದೇವಸ್ಥಾನದ ಭಕ್ತಿ ಗೀತೆ ಬಿಡುಗಡೆ

Suddi Udaya

ಗೇರುಕಟ್ಟೆ: ಮಾಜಿ ಶಾಸಕ ದಿ|ವಸಂತ ಬಂಗೇರರಿಗೆ ಸಾರ್ವಜನಿಕ ಶ್ರದ್ಧಾಂಜಲಿ ಸಭೆ

Suddi Udaya

ಸೇಕ್ರೆಡ್ ಹಾರ್ಟ್ ಚರ್ಚ್ ನ ನೂತನ ಪ್ರಧಾನ ಧರ್ಮ ಗುರು ವಂದನೀಯ ಸ್ಟ್ಯಾನಿ ಗೋವಿಯಸ್ ರಿಗೆ ಮಡಂತ್ಯಾರು ನಾಗರಿಕರ ಪರವಾಗಿ ಸ್ವಾಗತ

Suddi Udaya

ಆಮಂತ್ರಣ ಮುದ್ದು ಕೃಷ್ಣ ಸ್ಪರ್ಧೆ ಬಹುಮಾನ ವಿತರಣಾ ಸಮಾರಂಭ

Suddi Udaya
error: Content is protected !!