July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮಡಂತ್ಯಾರಿನಲ್ಲಿ ಭದ್ರಾ ಹೋಮ್ ಅಪ್ಲಾಯನ್ಸಸ್ ಮೂರನೇ ಶಾಖೆ ಶುಭಾರಂಭ

ಮಡಂತ್ಯಾರು: ಭದ್ರಾ ಎಲೆಕ್ಟ್ರಾನಿಕ್ಸ್ ನ ಮೂರನೇ ಶಾಖೆಯು ಮಡಂತ್ಯಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ನೂತನ ಪರಿಶ್ರಮ ಕಟ್ಟಡದಲ್ಲಿ ಸೆ.23 ರಂದು ಶುಭಾರಂಭಗೊಂಡಿದೆ.

ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ ಅಧ್ಯಕ್ಷ ಡಾ||ಎಂ.ಎನ್. ರಾಜೇಂದ್ರ ಕುಮಾ‌ರ್ ಉದ್ಘಾಟಿಸಿ ಶುಭಹಾರೈಸಿದರು.

ಈ ಸಂದರ್ಭದಲ್ಲಿ ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿರ್ದೇಶಕ ಕುಶಾಲಪ್ಪ ಗೌಡ ಪೂವಾಜೆ, ಕೊಳ್ಪೆದಬೈಲು ಮೊಹಿಯುದ್ದೀನ್ ಜಾಮಿಯಾ ಮಸ್ಜಿದ್ ಅಧ್ಯಕ್ಷ ಹಾಜಿ| ಅಬ್ದುಲ್ ಲತೀಫ್ ಸಾಹೇಬ್, ಪಾರೆಂಕಿ ಶ್ರೀ ಕ್ಷೇತ್ರ ಪ್ರಧಾನ ಅರ್ಚಕ ಪೇಜಾವರ ಟಿ.ವಿ ಶ್ರೀಧರ್ ರಾವ್, ಮಡಂತ್ಯಾರು ಸೇಕ್ರೆಡ್ ಹಾರ್ಟ್ ಚರ್ಚ್ ಪ್ರಧಾನ ಧರ್ಮಗುರು ವಂ. ಸ್ವಾಮಿ ಡಾ. ಸ್ಟ್ಯಾನಿ ಗೋವಿಯಸ್,ಮಡಂತ್ಯಾರ್ ಸಿಎ ಬ್ಯಾಂಕಿನ ಉಪಾಧ್ಯಕ್ಷೆ ಧನಲಕ್ಷ್ಮಿ ,ಮಾಲಾಡಿ ಗ್ರಾ.ಪಂ ಅಧ್ಯಕ್ಷ ಪುನೀತ್ ಕುಮಾರ್ ಹಾಗೂ ಸಿ.ಎ ಬ್ಯಾಂಕ್ ನ ನಿರ್ದೇಶಕರು ಉಪಸ್ಥಿತರಿದ್ದರು.

ಬಂಟ್ವಾಳ ಅಗ್ನಿಶಾಮಕ ಠಾಣೆಯ ಎದುರು ಹಲವಾರು ವರ್ಷಗಳಿಂದ ಕಾರ್ಯಾಚರಿಸುತ್ತಿರುವ ಭದ್ರಾ ಗ್ಯಾಸ್ ಮತ್ತು ಹೋಮ್ ಅಪ್ಲಾಯನಸ್, ಬಿ.ಸಿ. ರೋಡ್ ಸರಕಾರಿ ಬಸ್ ನಿಲ್ದಾಣ, ಸೋಮಯಾಜಿ ಆಸ್ಪತ್ರೆ ಎದುರಿನಲ್ಲಿ ಶಾಖೆ ಹೊಂದಿದೆ.

ಆಗಮಿಸಿದ ಅತಿಥಿ ಗಣ್ಯರನ್ನು ಸಂಸ್ಥೆಯ ಆಡಳಿತ ನಿರ್ದೇಶಕ ಮಂಜುನಾಥ ಆಚಾರ್ಯ ಮತ್ತು ಮೇಘಾ ಎಂ. ಆಚಾರ್ಯ ಸ್ವಾಗತಿಸಿ,ಸತ್ಕರಿಸಿದರು.

ಮಡಂತ್ಯಾರಿನ ಮಳಿಗೆಯಲ್ಲಿ ಮನೆಗೆ ಬೇಕಾದ ಎಲ್ಲ ರೀತಿಯ ಗೃಹೋತ್ಪನ್ನ ವಸ್ತುಗಳಾದ ಟಿ.ವಿ., ಫ್ರಿಡ್ಜ್, ವಾಷಿಂಗ್ ಮೆಷಿನ್, ಎ.ಸಿ., ಮಿಕ್ಸಿ, ಗೈಂಡರ್ ಸಹಿತ ಎಲ್ಲ ಹೋಮ್ ಅಪ್ಲಾಯನ್ಸಸ್ ಲಭ್ಯವಿದೆ ಎಂದು ಮಾಲಕರು ತಿಳಿಸಿದರು.

Related posts

ಕಾಶಿಪಟ್ಣ ಗ್ರಾ.ಪಂ. ಗೆ ಗಾಂಧೀ ಗ್ರಾಮ ಪುರಸ್ಕಾರ ಪ್ರಶಸ್ತಿ ಪ್ರದಾನ: ಸತೀಶ್. ಕೆ ಕಾಶಿಪಟ್ಣ ಮತ್ತು ಪಂ.ಅ.ಅ. ರಾಘವೇಂದ್ರ ಪಟೇಲ್ ರಿಂದ ಪ್ರಶಸ್ತಿ ಸ್ವೀಕಾರ

Suddi Udaya

ಜ.4: ಗುರುವಾಯನಕೆರೆ ವಿದ್ವತ್ ಪಿ ಯು. ಕಾಲೇಜಿನಲ್ಲಿ ತಾಲೂಕು ಮಟ್ಟದ ಪುರುಷರ ಹಾಗೂ ಆಹ್ವಾನಿತ ಮಹಿಳೆಯರ ವಾಲಿಬಾಲ್ ಪಂದ್ಯಾಟ

Suddi Udaya

ನೀರಿಗೆ ಇಳಿದಿದ್ದ ವೃದ್ದೆಯೋರ್ವರ ಶವ ಬೆಳಾಲು ಗ್ರಾಮದ ಅವೇಕೆ ಎಂಬಲ್ಲಿ ಪತ್ತೆ

Suddi Udaya

ಇಳಂತಿಲ ಗ್ರಾಮದ ಕಟ್ಟೆಚಾರು ನಿವಾಸಿ ಕುಶಾಲಪ್ಪ ಗೌಡ ನಿಧನ

Suddi Udaya

ಫೆ.19-24: ಉಜಿರೆಯಲ್ಲಿ ಆರ್ಟ್ ಆಫ್ ಲಿವಿಂಗ್ ಫೌಂಡೇಶನ್ ವತಿಯಿಂದ ‘ಆನಂದೋತ್ಸವ ಶಿಬಿರ’

Suddi Udaya

ಹತ್ಯಡ್ಕ : ಶ್ರೀ ವಿಠೋಬ ರಕುಮಾಯಿ ದೇವಸ್ಥಾನದ ಜೀರ್ಣೋದ್ಧಾರಕ್ಕೆ ಶೃಂಗೇರಿಯ ಜಗದ್ಗುರು ಭಾರತೀತೀರ್ಥ ಸ್ವಾಮೀಜಿ ಹಾಗೂ ಶ್ರೀ ವಿಧುಶೇಖರ ಭಾರತೀ ಸ್ವಾಮೀಜಿಯವರಿಂದ ರೂ.5 ಲಕ್ಷ ದೇಣಿಗೆ

Suddi Udaya
error: Content is protected !!