25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮಡಂತ್ಯಾರು: ವರ್ತಕ ಬಂಧು ಸಹಕಾರಿ ಸಂಘದ ವಾರ್ಷಿಕ ಮಹಾಸಭೆ

ಮಡಂತ್ಯಾರು : ಮಡಂತ್ಯಾರಿನಲ್ಲಿ ವರ್ತಕರಿಂದ ವರ್ತಕರಿಗಾಗಿ ವರ್ತಕರೇ ನಡೆಸಲ್ಪಡುವ ವರ್ತಕ ಬಂಧು ಸಹಕಾರಿ ಸಂಘದ ಮಹಾಸಭೆ ಮಡಂತ್ಯಾರು ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಸೆ.22 ರಂದು ನಡೆಯಿತು.

224 ಸದಸ್ಯರು ಹಾಜರಿದ್ದು ಸಂಘದ ಅಧ್ಯಕ್ಷ ಜಯಂತ ಶೆಟ್ಟಿ ಬಿ ಅಧ್ಯಕ್ಷತೆ ವಹಿಸಿದ್ದರು. ಕಳೆದ ವರ್ಷ ಜುಲೈ 9 ರಂದು ನೂತನವಾಗಿ ಉದ್ಘಾಟನೆಗೊಂಡ ಸಂಘ 8 ತಿಂಗಳ ವಾರ್ಷಿಕ ವರದಿಯನ್ನು ಮತ್ತು ಲೆಕ್ಕ ಪತ್ರವನ್ನು ಸೇರಿರುವ ಸಭೆಯಲ್ಲಿ ಸವಿಸ್ತಾರವಾಗಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾದ ಡೆಲ್ಸನ್ ಮೋನಿಸ್ ಮಂಡಿಸಿದರು. ಕಡಿಮೆ ಅವಧಿಯಲ್ಲಿ 28 ಕೋಟಿ ವ್ಯವಹಾರವನ್ನು ಮಾಡಿದ ಈ ಸಂಘದ ಅಭೂತಪೂರ್ವ ಕಾರ್ಯವೈಖರಿಯನ್ನು ಸೇರಿರುವ ಎಲ್ಲಾ ಸದಸ್ಯರು ಪ್ರಶಂಸಿದರು. ಮುಖ್ಯ ಸಲಹೆಗಾರರಾದ ಸಹಕಾರಿ ಧುರೀಣ ಮೋನಪ್ಪ ಪೂಜಾರಿ ಕಂಡೆತ್ಯಾರು ಸಂಘದ ಕಾರ್ಯ ವೈಖರಿಯನ್ನು ಅಭಿನಂದಿಸಿ ಶುಭ ಹಾರೈಸಿದರು.

ಮಹಾಸಭೆಯಲ್ಲಿ ಕೆಲವೊಂದು ಅತ್ಯಮೂಲ್ಯ ನಿರ್ಣಯಗಳನ್ನು ತೆಗೆದುಕೊಳ್ಳಲಾಯಿತು. ಸಭಾಧ್ಯಕ್ಷ ಸ್ಥಾನದಿಂದ ಜಯಂತ ಶೆಟ್ಟಿಯವರು ಸಮಯೋಚಿತವಾಗಿ ಮಾತನಾಡಿ ಮುಂದಿನ ದಿನಗಳಲ್ಲಿ ಎಲ್ಲರ ಸಹಕಾರವನ್ನು ಯಾಚಿಸಿದರು. ಸಂಘದ ಎಲ್ಲಾ ನಿರ್ದೇಶಕರು ಮುಖ್ಯ ಸಲಹೆಗಾರರು ಗೌರವ ಸಲಹೆಗಾರರು ವೇದಿಕೆಯ ಮೇಲೆ ಉಪಸ್ಥಿತರಿದ್ದರು.ನಿರ್ದೇಶಕರಾದ ಉದಯ್ ಕುಮಾರ್ ಜೈನ್ ಸ್ವಾಗತಿಸಿ ಉಪಾಧ್ಯಕ್ಷರಾದ ಯೋಗೀಶ್ ಪೂಜಾರಿ ಕಡ್ತಿಲ ವಂದಿಸಿದರು. ನಿರ್ದೇಶಕ ತುಳಸಿದಾಸ್ ಪೈ ಕಾರ್ಯಕ್ರಮ ನಿರೂಪಿಸಿದರು.

Related posts

ಭಾರತಿಯ ಜನತಾ ಪಾರ್ಟಿಯ ಬೆಳ್ತಂಗಡಿ ಮಂಡಲದಿಂದ ನಾರವಿ ಕುತ್ಲೂರು ಗ್ರಾಮದ ವಿಕಾಸ ಹಬ್ಬ

Suddi Udaya

ಬಂದಾರು ಗ್ರಾ.ಪಂ. ಮತ್ತು ಸಿದ್ಧಿ ವಿನಾಯಕ ಸಂಜೀವಿನಿ ಒಕ್ಕೂಟದ ಮಹಾಸಭೆ ಹಾಗೂ ಮಹಿಳಾ ಗ್ರಾಮಸಭೆ

Suddi Udaya

ಬೆಳ್ತಂಗಡಿ: ನಿವೃತ್ತ ಮೆಸ್ಕಾಂ ಉದ್ಯೋಗಿ ಸಂಜೀವ ಶೆಟ್ಟಿ ನಿಧನ

Suddi Udaya

ಬೆಳ್ತಂಗಡಿ ಆಮಂತ್ರಣ ಸಾಂಸ್ಕೃತಿಕ ಸಾಹಿತ್ಯ ವೇದಿಕೆಯ ಉಪಾಧ್ಯಕ್ಷರಾಗಿ ಸುಮಾ ಉಜಿರೆ ಆಯ್ಕೆ

Suddi Udaya

ಬಿಎಂಎಸ್ ರಿಕ್ಷಾ ಚಾಲಕ ಮಾಲಕರ ಸಂಘದ ಕ್ಷೇಮ ನಿಧಿಯ 12ನೇ ಸಹಾಯಧನ ಹಸ್ತಾಂತರ

Suddi Udaya

ಹತ್ಯಡ್ಕ ಪ್ರಾ.ಕೃ.ಪ.ಸ. ಸಂಘ ಅರಸಿನಮಕ್ಕಿ ಮುಖ್ಯಕಾರ್ಯನಿರ್ವಹಣಾಧಿಕಾರಿಯಾಗಿ ಟಿ. ರವಿಚಂದ್ರ ರಾವ್

Suddi Udaya
error: Content is protected !!