23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮಡಂತ್ಯಾರು: ವರ್ತಕ ಬಂಧು ಸಹಕಾರಿ ಸಂಘದ ವಾರ್ಷಿಕ ಮಹಾಸಭೆ

ಮಡಂತ್ಯಾರು : ಮಡಂತ್ಯಾರಿನಲ್ಲಿ ವರ್ತಕರಿಂದ ವರ್ತಕರಿಗಾಗಿ ವರ್ತಕರೇ ನಡೆಸಲ್ಪಡುವ ವರ್ತಕ ಬಂಧು ಸಹಕಾರಿ ಸಂಘದ ಮಹಾಸಭೆ ಮಡಂತ್ಯಾರು ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಸೆ.22 ರಂದು ನಡೆಯಿತು.

224 ಸದಸ್ಯರು ಹಾಜರಿದ್ದು ಸಂಘದ ಅಧ್ಯಕ್ಷ ಜಯಂತ ಶೆಟ್ಟಿ ಬಿ ಅಧ್ಯಕ್ಷತೆ ವಹಿಸಿದ್ದರು. ಕಳೆದ ವರ್ಷ ಜುಲೈ 9 ರಂದು ನೂತನವಾಗಿ ಉದ್ಘಾಟನೆಗೊಂಡ ಸಂಘ 8 ತಿಂಗಳ ವಾರ್ಷಿಕ ವರದಿಯನ್ನು ಮತ್ತು ಲೆಕ್ಕ ಪತ್ರವನ್ನು ಸೇರಿರುವ ಸಭೆಯಲ್ಲಿ ಸವಿಸ್ತಾರವಾಗಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾದ ಡೆಲ್ಸನ್ ಮೋನಿಸ್ ಮಂಡಿಸಿದರು. ಕಡಿಮೆ ಅವಧಿಯಲ್ಲಿ 28 ಕೋಟಿ ವ್ಯವಹಾರವನ್ನು ಮಾಡಿದ ಈ ಸಂಘದ ಅಭೂತಪೂರ್ವ ಕಾರ್ಯವೈಖರಿಯನ್ನು ಸೇರಿರುವ ಎಲ್ಲಾ ಸದಸ್ಯರು ಪ್ರಶಂಸಿದರು. ಮುಖ್ಯ ಸಲಹೆಗಾರರಾದ ಸಹಕಾರಿ ಧುರೀಣ ಮೋನಪ್ಪ ಪೂಜಾರಿ ಕಂಡೆತ್ಯಾರು ಸಂಘದ ಕಾರ್ಯ ವೈಖರಿಯನ್ನು ಅಭಿನಂದಿಸಿ ಶುಭ ಹಾರೈಸಿದರು.

ಮಹಾಸಭೆಯಲ್ಲಿ ಕೆಲವೊಂದು ಅತ್ಯಮೂಲ್ಯ ನಿರ್ಣಯಗಳನ್ನು ತೆಗೆದುಕೊಳ್ಳಲಾಯಿತು. ಸಭಾಧ್ಯಕ್ಷ ಸ್ಥಾನದಿಂದ ಜಯಂತ ಶೆಟ್ಟಿಯವರು ಸಮಯೋಚಿತವಾಗಿ ಮಾತನಾಡಿ ಮುಂದಿನ ದಿನಗಳಲ್ಲಿ ಎಲ್ಲರ ಸಹಕಾರವನ್ನು ಯಾಚಿಸಿದರು. ಸಂಘದ ಎಲ್ಲಾ ನಿರ್ದೇಶಕರು ಮುಖ್ಯ ಸಲಹೆಗಾರರು ಗೌರವ ಸಲಹೆಗಾರರು ವೇದಿಕೆಯ ಮೇಲೆ ಉಪಸ್ಥಿತರಿದ್ದರು.ನಿರ್ದೇಶಕರಾದ ಉದಯ್ ಕುಮಾರ್ ಜೈನ್ ಸ್ವಾಗತಿಸಿ ಉಪಾಧ್ಯಕ್ಷರಾದ ಯೋಗೀಶ್ ಪೂಜಾರಿ ಕಡ್ತಿಲ ವಂದಿಸಿದರು. ನಿರ್ದೇಶಕ ತುಳಸಿದಾಸ್ ಪೈ ಕಾರ್ಯಕ್ರಮ ನಿರೂಪಿಸಿದರು.

Related posts

ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘದ ನಿರ್ದೇಶಕರಾಗಿ ಚಿದಾನಂದ ಪೂಜಾರಿ ಆಯ್ಕೆ

Suddi Udaya

ಪೆರ್ಲ-ಬೈಪಾಡಿ ಶ್ರೀ ಸಿದ್ಧಿವಿನಾಯಕ ದೇವಸ್ಥಾನದ ಪುನರ್ ಪ್ರತಿಷ್ಠಾಷ್ಟಬಂಧ ಬ್ರಹ್ಮಕಲಶೋತ್ಸವ: ವೈಭವದ ಹಸಿರುವಾಣಿ ಹೊರೆಕಾಣಿಕೆ ಸಮರ್ಪಣೆ

Suddi Udaya

ಉಜಿರೆ ಶ್ರೀ. ಧ.ಮಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಾಲಾ ವಾರ್ಷಿಕೋತ್ಸವದ ಅಂಗವಾಗಿ ಪ್ರತಿಭಾ ಪುರಸ್ಕಾರ

Suddi Udaya

ಮುಗ್ಧ ಪ್ರವಾಸಿಗರನ್ನು ಹತ್ಯೆಗೈಯ್ಯುವ ಮೂಲಕ ಉಗ್ರರು ಹೇಡಿತನವನ್ನು ಪ್ರದರ್ಶಿಸಿದ್ದಾರೆ: ಪ್ರತಾಪ್‌ಸಿಂಹ ನಾಯಕ್

Suddi Udaya

ಮೂಡುಬಿದಿರೆ: ವೈಬ್ರೆಂಟ್ ವಿದ್ಯಾರ್ಥಿಗಳಿಗೆ ವಿಜೃಂಭಣೆಯ ಲಾಂಗ್ ಟರ್ಮ್ ಡೇ

Suddi Udaya

ಕಣಿಯೂರು ಬಿಜೆಪಿ ಬೂತ್ ಸಮಿತಿ ಮಾಜಿ ಅಧ್ಯಕ್ಷ ಹಾಗೂ ಪದಾಧಿಕಾರಿಗಳು ಕಾಂಗ್ರೇಸ್ ಸೇರ್ಪಡೆ

Suddi Udaya
error: Content is protected !!