22.6 C
ಪುತ್ತೂರು, ಬೆಳ್ತಂಗಡಿ
July 23, 2026
Uncategorized

ಅರಸಿನಮಕ್ಕಿ -ಶಿಶಿಲ ಘಟಕದ ಶೌರ್ಯ ವಿಪತ್ತು ನಿರ್ವಹಣಾ ತಂಡದ ಸ್ವಯಂಸೇವಕರಿಂದ ಕೊಕ್ಕಡ ಸರಕಾರಿ ಆಸ್ಪತ್ರೆಯ ಬಾವಿಯ ಸ್ವಚ್ಛತಾ ಕಾರ್ಯ

ಕೊಕ್ಕಡ : ಅರಸಿನಮಕ್ಕಿ -ಶಿಶಿಲ ಘಟಕದ ಶೌರ್ಯ ವಿಪತ್ತು ನಿರ್ವಹಣಾ ತಂಡದ ಸ್ವಯಂಸೇವಕರಿಂದ ಕೊಕ್ಕಡ ಸರಕಾರಿ ಆಸ್ಪತ್ರೆಯ ಬಾವಿಯ ಸ್ವಚ್ಛತಾ ಕಾರ್ಯವು ಸೆ.21ರಂದು ನಡೆಸಲಾಯಿತು.

ಬಾವಿಯಲ್ಲಿ ವಿಪರೀತ ತ್ಯಾಜ್ಯ ವಸ್ತುಗಳಿದ್ದು ಕುಡಿಯಲು ಯೋಗ್ಯವಲ್ಲದ ನೀರಿನಂತಿತ್ತು ಇದನ್ನು ಮನಗಂಡ ಸ್ವಯಂಸೇವಕರಾದ ಕೃಷ್ಣಪ್ಪಗೌಡ, ರಮೇಶ್ ಬೈರಗಟ್ಟ, ಕಿರಣ್ ಸಂಕೇಶ ಅವಿನಾಶ್ ಭಿಡೆ, ಮಾಧವ ಪೂಜಾರಿ ಮತ್ತು ರಶ್ಮಿತಾ ರವರು ತುರ್ತಾಗಿ ಬಾವಿ ಸ್ವಚ್ಛತೆ ಮಾಡುವಲ್ಲಿ ಮುಂದಾದರು, ಬಾವಿಯಲ್ಲಿದ್ದ ಒಂದು ಟನ್ ಗಿಂತ ಅಧಿಕವಾಗಿದ್ದ ತ್ಯಾಜ್ಯಗಳನ್ನು ಹೊರತೆಗೆದು ಸ್ವಚ್ಛಗೊಳಿಸಲಾಯಿತು ಹಾಗೂ ಬಾವಿ ಬದಿಯಲ್ಲಿದ್ದ ಅಪಾಯಕಾರಿ ಮರವನ್ನು ತೆರವುಗೊಳಿಸಲಾಯಿತು.

ಈ ಸಂದರ್ಭದಲ್ಲಿ ಕೊಕ್ಕಡ ಗ್ರಾಮ ಪಂಚಾಯಿತಿನ ಪಿಡಿಒ ದೀಪಕ್ ರಾಜ್ ಮತ್ತು ಮುಖ್ಯ ವೈದ್ಯಾಧಿಕಾರಿಗಳಾದ ಡಾ.ಪ್ರಕಾಶ್ ಮತ್ತು ತುಷಾರ ಉಪಸ್ಥಿತರಿದ್ದು ಸಹಕರಿಸಿದರು.

Related posts

ಬೆಳ್ತಂಗಡಿ: ನೆಲ್ಯಾಡಿ ಸಂತ ಅಲ್ಫೋನ್ಸ ಚರ್ಚ್‌ನಲ್ಲಿ ಕಾರ್ಗಿಲ್ ವಿಜಯ ದಿವಸ್ ಆಚರಣೆ

Suddi Udaya

ಭಾರತೀಯ ಮಜ್ದೂರ್ ಸಂಘದ ರಾಷ್ಟ್ರೀಯ ಪ್ರಮುಖರಿಂದ ಸೇವಾಧಾಮಕ್ಕೆ ಭೇಟಿ

Suddi Udaya

ಮೇಲಂತಬೆಟ್ಟು: ನಲ್ಕೆತ್ಯಾರು ಬ್ರಹ್ಮಬೈದರ್ಕಳ ಗರಡಿ ಶಿಲಾನ್ಯಾಸ ಕಾರ್ಯಕ್ರಮ

Suddi Udaya

ಉಜಿರೆ: ವರ್ತಕರ ಸಂಘದ ನೇತೃತ್ವದಲ್ಲಿ ಉಜಿರೆ ಬ್ರಹ್ಮಕಲಶೋತ್ಸವ ವಾಹನ ಜಾಥಕ್ಕೆ ಚಾಲನೆ – ನೂರಾರು ಸಂಖ್ಯೆಯಲ್ಲಿ ವಾಹನದಲ್ಲಿ ಪಾಲ್ಗೊಂಡ ಭಕ್ತರು, ಪುಂಜಾಲಕಟ್ಟೆ,ಧರ್ಮಸ್ಥಳ,ಉಜಿರೆ ವಾಹನ ಜಾಥ ಮೂಲಕ ಸೇವೆ

Suddi Udaya

ಅಂಡಿಂಜೆ ಗ್ರಾ.ಪಂ. ವತಿಯಿಂದ ಪ.ಜಾತಿ, ಪ. ಪಂಗಡದ ಕುಟುಂಬಗಳಿಗೆ ಹಾಗೂ ವಿಶೇಷ ಚೇತನರಿಗೆ ತಲಾ ಎರಡರಂತೆ ಚಯರ್ ವಿತರಣೆ

Suddi Udaya

ಸೇವಾಭಾರತಿ ನೂತನ ಕಟ್ಟಡ ನಿರ್ಮಾಣಕ್ಕೆ ಶ್ರೀಮತಿ ರೋಹಿಣಿ ಅಚ್ಯುತ ಗೌಡ ಇವರಿಂದ ದೇಣಿಗೆ:

Suddi Udaya
error: Content is protected !!