25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ ಶ್ರೀ ಧ. ಮಂ. ಪದವಿಪೂರ್ವ ಕಾಲೇಜಿನಲ್ಲಿ ಜಿಲ್ಲಾ ಪ.ಪೂ ಕಾಲೇಜುಗಳ ಸಂಸ್ಕೃತ ಭಾಷಾ ಉಪನ್ಯಾಸಕರ ಕಾರ್ಯಾಗಾರದ ಸಮಾರೋಪ

ಉಜಿರೆ: ಸಂಸ್ಕೃತ ಭಾಷಾ ಸಾಹಿತ್ಯವು ಪ್ರಾಚೀನ ಕಾಲದಿಂದಲೂ ಭಾರತದಲ್ಲಿ ಮಾತ್ರವಲ್ಲದೆ ಇತರ ದೇಶಗಳಲ್ಲಿಯೂ ಪ್ರಸಿದ್ಧವಾದವು. ಭಾಷೆಯೊಂದಿಗೆ ಸಾಹಿತ್ಯ ಬೆಳೆಯಬೇಕಾದರೆ ಆದಷ್ಟು ಸಂಸ್ಕೃತ ವಾತಾವರಣ ನಿರ್ಮಾಣ ಆಗಬೇಕು. ಸಂಸ್ಕೃತದ ಆದರ್ಶ ಮೌಲ್ಯಗಳನ್ನು ಎಲ್ಲ ವಿದ್ಯಾರ್ಥಿಗಳಲ್ಲಿ ಮೊದಲು ಒಡಮೂಡಿಸುವಂತಾಗಬೇಕು ಎಂದು ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ಪ್ರಾಚಾರ್ಯ ಪ್ರಮೋದ್ ಕುಮಾರ್ ಬಿ ಅವರು ತಿಳಿಸಿದರು.

ಇವರು ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನಲ್ಲಿ ನಡೆದ ದ.ಕ ಜಿಲ್ಲಾ ಪದವಿಪೂರ್ವ ಕಾಲೇಜುಗಳ ಸಂಸ್ಕೃತ ಭಾಷಾ ಉಪನ್ಯಾಸಕರ ಸಂಘ , ದ.ಕ ಜಿಲ್ಲಾ ಪದವಿಪೂರ್ವ ಕಾಲೇಜುಗಳ ಪ್ರಾಂಶುಪಾಲರ ಸಂಘ ಹಾಗೂ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ದ.ಕ ಜಿಲ್ಲಾ ಪ.ಪೂ ಕಾಲೇಜುಗಳ ಸಂಸ್ಕೃತ ಭಾಷಾ ಉಪನ್ಯಾಸಕರಿಗೆ ನಡೆದ ಒಂದು ದಿನದ ಕಾರ್ಯಾಗಾರದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದರು.

ದ.ಕ ಜಿಲ್ಲಾ ಪ.ಪೂ ಕಾಲೇಜುಗಳ ಸಂಸ್ಕೃತ ಭಾಷಾ ಉಪನ್ಯಾಸಕರ ಸಂಘದ ಅಧ್ಯಕ್ಷ ರಮೇಶ್ ಆಚಾರ್ಯ ಅಧ್ಯಕ್ಷತೆ ವಹಿಸಿದ್ದರು.

ಈ ಸಂದರ್ಭದಲ್ಲಿ ವಿವಿಧ ಪ್ರಶಿಕ್ಷಣ ಗೋಷ್ಠಿಗಳು ನಡೆದವು . ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಸ್ವಾಯತ್ತ ಕಾಲೇಜಿನ ಸಂಸ್ಕೃತ ಭಾಷಾ ವಿಭಾಗದ ಮುಖ್ಯಸ್ಥ ಹಾಗೂ ಕಲಾ ನಿಕಾಯದ ಡೀನ್ ಆಗಿರುವ ಡಾ. ಎನ್. ಶ್ರೀಧರ ಭಟ್ ಅವರು ಭಾಣ ಭಟ್ಟನ ಕಾದಂಬರಿ ವಿಷಯದ ಬಗ್ಗೆ , ಶೃಂಗೇರಿಯ ಸರಕಾರಿ ಪ.ಪೂ ಕಾಲೇಜಿನ ಸಂಸ್ಕೃತ ಭಾಷಾ ಉಪನ್ಯಾಸಕ ಡಾ. ಮಹೇಶ ಕಾಕತ್ಕರ್ ಅವರು ಭಾಸನ ಬಾಲಚರಿತಮ್ ನಾಟಕದ ಬಗ್ಗೆ ಹಾಗೂ ಧರ್ಬೇತ್ತಡ್ಕದ ಶ್ರೀ ಶಂಕರ ವೇದವಿದ್ಯಾ ಗುರುಕುಲದ ಪ್ರಾಚಾರ್ಯ ವೇದಮೂರ್ತಿ ಆಂಶುಮಾನ್ ಅಭ್ಯಂಕರ ಅವರು ಭೋಜನ ಚಂಪೂ ರಾಮಾಯಣದ ಬಗ್ಗೆ ವಿಷಯಗಳನ್ನು ಪ್ರಸ್ತುತಪಡಿಸಿದರು. ಇದೇ ಸಂದರ್ಭದಲ್ಲಿ
ಸಂಸ್ಕೃತ ಭಾಷಾ ಪಠ್ಯ ಹಾಗೂ ಮಾದರಿ ಪ್ರಶ್ನೆ ಪತ್ರಿಕೆಗಳ ಬಗ್ಗೆ ಚರ್ಚೆ ನಡೆಯಿತು.

ಅಳಿಕೆಯ ಶ್ರೀ ಸತ್ಯಸಾಯಿ ಲೋಕಸೇವಾ ಪ.ಪೂ ಕಾಲೇಜಿನ ಪ್ರಾಚಾರ್ಯ ವೆಂಕಟಕೃಷ್ಣ ಶರ್ಮಾ ಅವರು ಕಾರ್ಯಾಗಾರದ ಬಗ್ಗೆ ಅನಿಸಿಕೆ ವ್ಯಕ್ತಪಡಿಸಿದರು.
ಕಾರ್ಯಕ್ರಮ ಸಂಯೋಜಕ ಹಾಗೂ ದ.ಕ ಜಿಲ್ಲಾ ಪ.ಪೂ ಕಾಲೇಜುಗಳ ಸಂಸ್ಕೃತ ಭಾಷಾ ಉಪನ್ಯಾಸಕರ ಸಂಘದ ಉಪಾಧ್ಯಕ್ಷ ಡಾ.ಪ್ರಸನ್ನಕುಮಾರ ಐತಾಳ್ ಉಪಸ್ಥಿತರಿದ್ದರು. ಸಂಘಟನಾ ಕಾರ್ಯದರ್ಶಿ ವೆಂಕಟರಮಣ ಭಟ್ ನಿರೂಪಿಸಿ , ಪ್ರಧಾನ ಕಾರ್ಯದರ್ಶಿ ಡಾ. ಮಧುಕೇಶ್ವರ ಶಾಸ್ತ್ರಿ ವಂದಿಸಿದರು.
ದ.ಕ ಜಿಲ್ಲೆಯ ಪದವಿಪೂರ್ವ ಕಾಲೇಜುಗಳ ಸಂಸ್ಕೃತ ಭಾಷಾ ಉಪನ್ಯಾಸಕರು ಉಪಸ್ಥಿತರಿದ್ದರು.

Related posts

ನೆರಿಯ: ಗಂಡಿಬಾಗಿಲು ಹಾಲು ಉತ್ಪಾದಕರ ಸಹಕಾರಿ ಸಂಘದ ಕಟ್ಟಡ ಉದ್ಘಾಟನೆ

Suddi Udaya

ಬಸ್ ಸಮಸ್ಯೆ: ಜುಲೈ 1ರಂದು ಬೆಳ್ತಂಗಡಿಯಲ್ಲಿ ಶಾಸಕರಿಂದ ಜನಸ್ಪಂದನ ಕಾರ್ಯಕ್ರಮ

Suddi Udaya

ವಿಧಾನ ಸಭಾ ಚುನಾವಣೆ : ಬೆಳ್ತಂಗಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಸಿ.ಆರ್.ಪಿ. ಎಫ್ ಯೋಧರು ಹಾಗೂ ಬೆಳ್ತಂಗಡಿ ಠಾಣೆಯ ಪೊಲೀಸರ ಪಥ ಸಂಚಲನ

Suddi Udaya

ಲಾಯಿಲ: ಕಾಶಿಬೆಟ್ಟು ಬಳಿ ಇಂಡಸ್ಟ್ರೀಯಲ್ ಎಸ್ಟೇಟ್ ಉದ್ದಿಮೆದಾರರಿಂದ ಪ್ರತಿಭಟನೆಯ ನಾಮಫಲಕ: ಶೀಘ್ರವೇ ಸಮಸ್ಯೆ ಪರಿಹರಿಸದಿದ್ದಲ್ಲಿ ಬಹಿರಂಗ ಪ್ರತಿಭಟನೆ

Suddi Udaya

ತಲೆಮರೆಸಿಕೊಂಡು ಮೃತಪಟ್ಟ ಆರೋಪಿಯ ಮರಣ ಪತ್ರ ನ್ಯಾಯಾಲಯಕ್ಕೆ ಹಾಜರುಪಡಿಸಿದ ಪೊಲೀಸರು

Suddi Udaya

ಉಜಿರೆ: ಪಾಕತಜ್ಞ ಕೃಷ್ಣಮೂರ್ತಿ ರಾವ್ ನಿಧನ

Suddi Udaya
error: Content is protected !!