ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ ಶ್ರೀ ಧ. ಮಂ. ಪದವಿಪೂರ್ವ ಕಾಲೇಜಿನಲ್ಲಿ ಜಿಲ್ಲಾ ಪ.ಪೂ ಕಾಲೇಜುಗಳ ಸಂಸ್ಕೃತ ಭಾಷಾ ಉಪನ್ಯಾಸಕರ ಕಾರ್ಯಾಗಾರದ ಸಮಾರೋಪ

ಉಜಿರೆ: ಸಂಸ್ಕೃತ ಭಾಷಾ ಸಾಹಿತ್ಯವು ಪ್ರಾಚೀನ ಕಾಲದಿಂದಲೂ ಭಾರತದಲ್ಲಿ ಮಾತ್ರವಲ್ಲದೆ ಇತರ ದೇಶಗಳಲ್ಲಿಯೂ ಪ್ರಸಿದ್ಧವಾದವು. ಭಾಷೆಯೊಂದಿಗೆ ಸಾಹಿತ್ಯ ಬೆಳೆಯಬೇಕಾದರೆ ಆದಷ್ಟು ಸಂಸ್ಕೃತ ವಾತಾವರಣ ನಿರ್ಮಾಣ ಆಗಬೇಕು. ಸಂಸ್ಕೃತದ ಆದರ್ಶ ಮೌಲ್ಯಗಳನ್ನು ಎಲ್ಲ ವಿದ್ಯಾರ್ಥಿಗಳಲ್ಲಿ ಮೊದಲು ಒಡಮೂಡಿಸುವಂತಾಗಬೇಕು ಎಂದು ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ಪ್ರಾಚಾರ್ಯ ಪ್ರಮೋದ್ ಕುಮಾರ್ ಬಿ ಅವರು ತಿಳಿಸಿದರು.

ಇವರು ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನಲ್ಲಿ ನಡೆದ ದ.ಕ ಜಿಲ್ಲಾ ಪದವಿಪೂರ್ವ ಕಾಲೇಜುಗಳ ಸಂಸ್ಕೃತ ಭಾಷಾ ಉಪನ್ಯಾಸಕರ ಸಂಘ , ದ.ಕ ಜಿಲ್ಲಾ ಪದವಿಪೂರ್ವ ಕಾಲೇಜುಗಳ ಪ್ರಾಂಶುಪಾಲರ ಸಂಘ ಹಾಗೂ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ದ.ಕ ಜಿಲ್ಲಾ ಪ.ಪೂ ಕಾಲೇಜುಗಳ ಸಂಸ್ಕೃತ ಭಾಷಾ ಉಪನ್ಯಾಸಕರಿಗೆ ನಡೆದ ಒಂದು ದಿನದ ಕಾರ್ಯಾಗಾರದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದರು.

ದ.ಕ ಜಿಲ್ಲಾ ಪ.ಪೂ ಕಾಲೇಜುಗಳ ಸಂಸ್ಕೃತ ಭಾಷಾ ಉಪನ್ಯಾಸಕರ ಸಂಘದ ಅಧ್ಯಕ್ಷ ರಮೇಶ್ ಆಚಾರ್ಯ ಅಧ್ಯಕ್ಷತೆ ವಹಿಸಿದ್ದರು.

ಈ ಸಂದರ್ಭದಲ್ಲಿ ವಿವಿಧ ಪ್ರಶಿಕ್ಷಣ ಗೋಷ್ಠಿಗಳು ನಡೆದವು . ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಸ್ವಾಯತ್ತ ಕಾಲೇಜಿನ ಸಂಸ್ಕೃತ ಭಾಷಾ ವಿಭಾಗದ ಮುಖ್ಯಸ್ಥ ಹಾಗೂ ಕಲಾ ನಿಕಾಯದ ಡೀನ್ ಆಗಿರುವ ಡಾ. ಎನ್. ಶ್ರೀಧರ ಭಟ್ ಅವರು ಭಾಣ ಭಟ್ಟನ ಕಾದಂಬರಿ ವಿಷಯದ ಬಗ್ಗೆ , ಶೃಂಗೇರಿಯ ಸರಕಾರಿ ಪ.ಪೂ ಕಾಲೇಜಿನ ಸಂಸ್ಕೃತ ಭಾಷಾ ಉಪನ್ಯಾಸಕ ಡಾ. ಮಹೇಶ ಕಾಕತ್ಕರ್ ಅವರು ಭಾಸನ ಬಾಲಚರಿತಮ್ ನಾಟಕದ ಬಗ್ಗೆ ಹಾಗೂ ಧರ್ಬೇತ್ತಡ್ಕದ ಶ್ರೀ ಶಂಕರ ವೇದವಿದ್ಯಾ ಗುರುಕುಲದ ಪ್ರಾಚಾರ್ಯ ವೇದಮೂರ್ತಿ ಆಂಶುಮಾನ್ ಅಭ್ಯಂಕರ ಅವರು ಭೋಜನ ಚಂಪೂ ರಾಮಾಯಣದ ಬಗ್ಗೆ ವಿಷಯಗಳನ್ನು ಪ್ರಸ್ತುತಪಡಿಸಿದರು. ಇದೇ ಸಂದರ್ಭದಲ್ಲಿ
ಸಂಸ್ಕೃತ ಭಾಷಾ ಪಠ್ಯ ಹಾಗೂ ಮಾದರಿ ಪ್ರಶ್ನೆ ಪತ್ರಿಕೆಗಳ ಬಗ್ಗೆ ಚರ್ಚೆ ನಡೆಯಿತು.

ಅಳಿಕೆಯ ಶ್ರೀ ಸತ್ಯಸಾಯಿ ಲೋಕಸೇವಾ ಪ.ಪೂ ಕಾಲೇಜಿನ ಪ್ರಾಚಾರ್ಯ ವೆಂಕಟಕೃಷ್ಣ ಶರ್ಮಾ ಅವರು ಕಾರ್ಯಾಗಾರದ ಬಗ್ಗೆ ಅನಿಸಿಕೆ ವ್ಯಕ್ತಪಡಿಸಿದರು.
ಕಾರ್ಯಕ್ರಮ ಸಂಯೋಜಕ ಹಾಗೂ ದ.ಕ ಜಿಲ್ಲಾ ಪ.ಪೂ ಕಾಲೇಜುಗಳ ಸಂಸ್ಕೃತ ಭಾಷಾ ಉಪನ್ಯಾಸಕರ ಸಂಘದ ಉಪಾಧ್ಯಕ್ಷ ಡಾ.ಪ್ರಸನ್ನಕುಮಾರ ಐತಾಳ್ ಉಪಸ್ಥಿತರಿದ್ದರು. ಸಂಘಟನಾ ಕಾರ್ಯದರ್ಶಿ ವೆಂಕಟರಮಣ ಭಟ್ ನಿರೂಪಿಸಿ , ಪ್ರಧಾನ ಕಾರ್ಯದರ್ಶಿ ಡಾ. ಮಧುಕೇಶ್ವರ ಶಾಸ್ತ್ರಿ ವಂದಿಸಿದರು.
ದ.ಕ ಜಿಲ್ಲೆಯ ಪದವಿಪೂರ್ವ ಕಾಲೇಜುಗಳ ಸಂಸ್ಕೃತ ಭಾಷಾ ಉಪನ್ಯಾಸಕರು ಉಪಸ್ಥಿತರಿದ್ದರು.

Related posts

ಕಳೆಂಜ: ಪಿಲತ್ತಡಿ ನಿವಾಸಿ ಪುಪ್ಪರಾಜ್ ಭಾರತೀಯ ಭೂಸೇನೆಗೆ ಆಯ್ಕೆ

Suddi Udaya

ಸೇವಾಭಾರತಿಗೆ 21ರ ಸಂಭ್ರಮ: ಡಿ.4 ನೂತನ ಕಾರ್ಯಾಲಯ ಸೇವಾನಿಕೇತನ ಉದ್ಘಾಟನಾ ಸಮಾರಂಭ

Suddi Udaya

ಸಂತೆಕಟ್ಟೆ ರಿಕ್ಷಾ ಚಾಲಕ ಮತ್ತು ಮಾಲಕರಿಂದ ನಿಧನರಾದ ಶೇಖರ್ ರವರಿಗೆ ಸಂತಾಪ

Suddi Udaya

ಬೆಳ್ತಂಗಡಿ : ಅಖಿಲ ಕರ್ನಾಟಕ ರಾಜ ಕೇಸರಿ ಸಂಘಟನೆಯ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಮಲವಂತಿಗೆ : 38ನೇ ವರ್ಷದ ಶ್ರೀವಿದ್ಯಾ ಗಣಪತಿ ಪೂಜ್ಯೋತ್ಸವದ ಪದಾಧಿಕಾರಿಗಳ ಆಯ್ಕೆ

Suddi Udaya

ಮೇಲಂತಬೆಟ್ಟು : ಪ್ರೇಮಾ ಅವರಿಗೆ “ವಾತ್ಸಲ್ಯ” ಮನೆ ಹಸ್ತಾಂತರ

Suddi Udaya
error: Content is protected !!