25.5 C
ಪುತ್ತೂರು, ಬೆಳ್ತಂಗಡಿ
May 22, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ತೆಕ್ಕಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮಹಾಸಭೆ: ರೂ. 32 ಲಕ್ಷ ನಿವ್ವಳ ಲಾಭ, ಶೇ.9 ಡಿವಿಡೆಂಡ್

ತೆಕ್ಕಾರು: ತೆಕ್ಕಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಕಳೆದ ಆರ್ಥಿಕ ವರ್ಷದಲ್ಲಿ 102 ಕೋಟಿ ರೂ. ವ್ಯವಹಾರ ನಡೆಸಿ, 32 ಲಕ್ಷ ರೂಪಾಯಿ ನಿವ್ವಳ ಲಾಭ ಗಳಿಸಿದ್ದು, ಸದಸ್ಯರಿಗೆ ಶೇ.9 ಡಿವಿಡೆಂಡ್ ನೀಡಲಾಗುವುದು ಎಂದು ನಿದೇರ್ಶಕ ಶಿವಪ್ಪ ಪೂಜಾರಿ ಹೇಳಿದರು.

ಸೆ.21ರಂದು ತೆಕ್ಕಾರು ಗೋಪಾಲಕೃಷ್ಣ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ 2023-24ನೇ ಸಾಲಿನ ವಾರ್ಷಿಕ ಮಹಾಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.


ನಿರ್ದೇಶಕರಾದ ಹುಸೈನ್, ಅಬ್ದುಲ್ ರಹಿಮಾನ್, ಅಬ್ದುಲ್ ಮುನೀರ್, ಸಂಗೀತಾ, ರವಿ ಹಾಗೂ ಜನಾರ್ದನ ಪೂಜಾರಿ ಮತ್ತು ವಲಯ ಮೇಲ್ವಿಚಾರಕ ಸಿರಾಜುದ್ದಿನ್ ಉಪಸ್ಥಿತರಿದ್ದರು.

ಮುಖ್ಯಕಾರ್ಯನಿರ್ವಹಣಾಧಿಕಾರಿ ರಾಘವೇಂದ್ರ ಅಡಪ ವಾರ್ಷಿಕ ವರದಿಯ ಮಂಡಿಸಿದರು. ಗುಮಾಸ್ತೆ ಶಾಹಿದಾ ಬಾನು ಸ್ವಾಗತಿಸಿ, ವೃತ್ತಿ ಪರ ನಿರ್ದೇಶಕರಾದ ಇನಾಸ್ ರೋಡ್ರಿಗಸ್ ವಂದಿಸಿದರು. ದೇವಿಪ್ರಸಾದ್ ನಿರೂಪಿಸಿದರು.
ಸಿಬ್ಬಂದಿಗಳಾದ ಪ್ರೇಮಾ, ಉಸ್ಮಾನ್ ಹಾಗೂ ನವೀಶ ಸಹಕರಿಸಿದರು.

Related posts

ತೆಕ್ಕಾರು ಶ್ರೀ ಕ್ಷೇತ್ರ ದೇವರಗುಡ್ಡೆ ಗೋಪಾಲಕೃಷ್ಣನಿಗೆ ಬ್ರಹ್ಮಕಲಶೋತ್ಸವ

Suddi Udaya

ಮೇಲಂತಬೆಟ್ಟು: ದರ್ಶನ್ ಯು ಸಾಲ್ಯಾನ್ ಅಸೌಖ್ಯದಿಂದ ನಿಧನ

Suddi Udaya

ಪುಂಜಾಲಕಟ್ಟೆ ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ವತಿಯಿಂದ ಸಾಮೂಹಿಕ ವಿವಾಹ ನಿಶ್ಚಿತಾರ್ಥ

Suddi Udaya

ರಿಕ್ಷಾ ಚಾಲಕರ ಹಾಗೂ ಸಾರಿಗೆ ನೌಕರರ ವಿವಿಧ ಸಮಸ್ಯೆಗಳನ್ನು ಬಗೆಹರಿಸುವಂತೆ ಸಾರಿಗೆ ಮಂತ್ರಿ ರಾಮಲಿಂಗ ರೆಡ್ಡಿಯವರಿಗೆ ಆಗ್ರಹ

Suddi Udaya

ಕಡಿರುದ್ಯಾವರ: ಕಾನರ್ಪ ಪುರುಷರ ಬಳಗದ ವತಿಯಿಂದ ಪುರುಷರ ರಾಶಿ ಪೂಜೆ

Suddi Udaya

ಕಡಿರುದ್ಯಾವರ: ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಓಮ್ನಿ ಕಾರು

Suddi Udaya
error: Content is protected !!