April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಟ್ರಸ್ಟ್ ವತಿಯಿಂದ ಟ್ರಸ್ಟ್ ಸದಸ್ಯತ್ವ ನೇಮಕಾತಿ ಸಭೆ

ಬೆಳ್ತಂಗಡಿ : ತಾಲೂಕು ಒಕ್ಕಲಿಗ ಗೌಡರ ಟ್ರಸ್ಟ್ ವತಿಯಿಂದ ಟ್ರಸ್ಟ್ ಸದಸ್ಯತ್ವ ನೇಮಕಾತಿ ಸಭೆಯು ಸೆ.23ರಂದು ಬೆಳ್ತಂಗಡಿ ಸಿವಿಸಿ ಹಾಲ್ ನಲ್ಲಿ ನಡೆಯಿತು.

ದ.ಕ. ಜಿಲ್ಲಾ ಒಕ್ಕಲಿಗ ಗೌಡರ ಸಂಘದ ಅಧ್ಯಕ್ಷ ಡಿ.ವಿ. ಬಾಲಕೃಷ್ಣ ಗೌಡ ಮಾತನಾಡಿ ಸಂಘಟನೆಗಳು ನಿಂತ ನೀರಾಗದೆ, ಹರಿಯುವ ನೀರಾಗಬೇಕು. ನಮ್ಮ ಸಮಾಜದ ಕೊನೆಯ ವ್ಯಕ್ತಿಗೂ ಕೂಡ ಸಹಾಯವಾಗಬೇಕು. ಈ ಟ್ರಸ್ಟ್ ಬೆಳಗಲಿ ಎಂದು ಶುಭಹಾರೈಸಿದರು.

ಬೆಳ್ತಂಗಡಿ ತಾಲೂಕು ಸಮಿತಿ ಅಧ್ಯಕ್ಷ ಮೋಹನ್ ಕುಮಾರ್ ಕಲ್ಮ0ಜ ಪ್ರಸ್ತಾವಿಕವಾಗಿ ಮಾತನಾಡಿದರು.

ಕಾರ್ಯಕ್ರಮದಲ್ಲಿ ಸಾಂಕೇತಿಕವಾಗಿ ಸದಸ್ಯತ್ವದ ಅರ್ಜಿ ನಮೂನೆ ವಿತರಣೆ ಮಾಡಲಾಯಿತು.

ವೇದಿಕೆಯಲ್ಲಿ ದ.ಕ. ಜಿಲ್ಲಾ ಒಕ್ಕಲಿಗ ಗೌಡರ ಸಂಘದ ಉಪಾಧ್ಯಕ್ಷ ಭಾಸ್ಕರ ಗೌಡ ದೇವಸ್ಯ, ತಾಲೂಕು ಸಮಿತಿ ಕಾರ್ಯದರ್ಶಿ ಭರತ್ ಕುಮಾರ್ ಬಂಗಾಡಿ, ಕಾರ್ಯಧ್ಯಕ್ಷರಾದ ಶ್ರೀನಿವಾಸ್ ಗೌಡ ಬೆಳಾಲು, ಜಯಂತ್ ಗೌಡ ಗುರಿಪಳ್ಳ, ಸೂರಜ್ ಕುಮಾರ್ ಒಳಂಬ್ರ ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಸಂಚಾಲಕರಾದ ವಿಜಯ ಗೌಡ ಮತ್ತು ರಂಜನ್‌ ಜಿ.ಗೌಡ, ಪದಾಧಿಕಾರಿಗಳು ಹಾಗೂ ಸರ್ವಸದಸ್ಯರುಗಳು ಉಪಸ್ಥಿತರಿದ್ದರು.

ಟ್ರಸ್ಟಿನ ಸದಸ್ಯ ವಿದ್ಯಾಶ್ರೀನಿವಾಸ್ ಗೌಡ ಪ್ರಾರ್ಥಿಸಿದರು. ಸ್ಥಾಪಕ ಟ್ರಸ್ಟಿಗಳಾದ ವಸಂತ ಮರಕಡ ಸ್ವಾಗತಿಸಿದರು. ನವೀನ್ ಬಿ.ಕೆ. ನಿರೂಪಿಸಿದರು. ಸೂರಜ್ ವಳಂಬ್ರ ಧನ್ಯವಾದವಿತ್ತರು.

Related posts

ಮದ್ಯದ ಮೇಲಿನ ಶುಲ್ಕ ದಿಢೀರ್ ಹೆಚ್ಚಳ: ರಾಜ್ಯ ಸರ್ಕಾರ ಆದೇಶ

Suddi Udaya

ಉಜಿರೆ: ಎಸ್.ಡಿ.ಎಮ್ ಆಂ.ಮಾ. ಶಾಲೆಯಲ್ಲಿ ಪೋಷಕರಿಗೆ ಜಾಗೃತಿ ಕಾರ್ಯಕ್ರಮ

Suddi Udaya

ಕರಾಯ ಅಲ್ ಬಿರ್ರ್ ಸ್ಕೂಲಿನಲ್ಲಿ ಇಶ್ಕೇ ರಸೂಲ್ ಮೀಲಾದ್ ಕಾರ್ಯಕ್ರಮ: ವಿದ್ಯಾರ್ಥಿಗಳಿಂದ ಪ್ರತಿಭಾ ಪ್ರದರ್ಶನ

Suddi Udaya

ಗೇರುಕಟ್ಟೆ ಹಿರಿಯರಾದ ಹಾಮದ್ ಕುಂಇೆ ನಿಧನ

Suddi Udaya

ಉಜಿರೆ: ಶ್ರೀ ಧ.ಮಂ. ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಆಯುಧ ಪೂಜೆ

Suddi Udaya

ಶಿರ್ಲಾಲಿನಲ್ಲಿ ಅಂತರ್ ಜಿಲ್ಲಾ ಮಟ್ಟದ ಮುಕ್ತ ಕಬಡ್ಡಿ ಪಂದ್ಯಾಟ

Suddi Udaya
error: Content is protected !!