ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಟ್ರಸ್ಟ್ ವತಿಯಿಂದ ಟ್ರಸ್ಟ್ ಸದಸ್ಯತ್ವ ನೇಮಕಾತಿ ಸಭೆ

Suddi Udaya

Updated on:

ಬೆಳ್ತಂಗಡಿ : ತಾಲೂಕು ಒಕ್ಕಲಿಗ ಗೌಡರ ಟ್ರಸ್ಟ್ ವತಿಯಿಂದ ಟ್ರಸ್ಟ್ ಸದಸ್ಯತ್ವ ನೇಮಕಾತಿ ಸಭೆಯು ಸೆ.23ರಂದು ಬೆಳ್ತಂಗಡಿ ಸಿವಿಸಿ ಹಾಲ್ ನಲ್ಲಿ ನಡೆಯಿತು.

ದ.ಕ. ಜಿಲ್ಲಾ ಒಕ್ಕಲಿಗ ಗೌಡರ ಸಂಘದ ಅಧ್ಯಕ್ಷ ಡಿ.ವಿ. ಬಾಲಕೃಷ್ಣ ಗೌಡ ಮಾತನಾಡಿ ಸಂಘಟನೆಗಳು ನಿಂತ ನೀರಾಗದೆ, ಹರಿಯುವ ನೀರಾಗಬೇಕು. ನಮ್ಮ ಸಮಾಜದ ಕೊನೆಯ ವ್ಯಕ್ತಿಗೂ ಕೂಡ ಸಹಾಯವಾಗಬೇಕು. ಈ ಟ್ರಸ್ಟ್ ಬೆಳಗಲಿ ಎಂದು ಶುಭಹಾರೈಸಿದರು.

ಬೆಳ್ತಂಗಡಿ ತಾಲೂಕು ಸಮಿತಿ ಅಧ್ಯಕ್ಷ ಮೋಹನ್ ಕುಮಾರ್ ಕಲ್ಮ0ಜ ಪ್ರಸ್ತಾವಿಕವಾಗಿ ಮಾತನಾಡಿದರು.

ಕಾರ್ಯಕ್ರಮದಲ್ಲಿ ಸಾಂಕೇತಿಕವಾಗಿ ಸದಸ್ಯತ್ವದ ಅರ್ಜಿ ನಮೂನೆ ವಿತರಣೆ ಮಾಡಲಾಯಿತು.

ವೇದಿಕೆಯಲ್ಲಿ ದ.ಕ. ಜಿಲ್ಲಾ ಒಕ್ಕಲಿಗ ಗೌಡರ ಸಂಘದ ಉಪಾಧ್ಯಕ್ಷ ಭಾಸ್ಕರ ಗೌಡ ದೇವಸ್ಯ, ತಾಲೂಕು ಸಮಿತಿ ಕಾರ್ಯದರ್ಶಿ ಭರತ್ ಕುಮಾರ್ ಬಂಗಾಡಿ, ಕಾರ್ಯಧ್ಯಕ್ಷರಾದ ಶ್ರೀನಿವಾಸ್ ಗೌಡ ಬೆಳಾಲು, ಜಯಂತ್ ಗೌಡ ಗುರಿಪಳ್ಳ, ಸೂರಜ್ ಕುಮಾರ್ ಒಳಂಬ್ರ ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಸಂಚಾಲಕರಾದ ವಿಜಯ ಗೌಡ ಮತ್ತು ರಂಜನ್‌ ಜಿ.ಗೌಡ, ಪದಾಧಿಕಾರಿಗಳು ಹಾಗೂ ಸರ್ವಸದಸ್ಯರುಗಳು ಉಪಸ್ಥಿತರಿದ್ದರು.

ಬೆಳಾಲು ಗ್ರಾ.ಪಂ. ಅಧ್ಯಕ್ಷೆ ವಿದ್ಯಾಶ್ರೀನಿವಾಸ್ ಗೌಡ ಪ್ರಾರ್ಥಿಸಿದರು. ವಕೀಲರ ಸಂಘದ ಅಧ್ಯಕ್ಷ ವಸಂತ ಮರಕಡ ಸ್ವಾಗತಿಸಿದರು. ವಕೀಲರ ಸಂಘದ ಕಾರ್ಯದರ್ಶಿ ನವೀನ್ ಬಿ.ಕೆ. ನಿರೂಪಿಸಿದರು. ಶಿವರಾಜ್ ಒಳಂಬ್ರ ಧನ್ಯವಾದವಿತ್ತರು.

Leave a Comment

error: Content is protected !!