April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಹಿಂದಿ ದಿವಸ ಆಚರಣೆ

ಬೆಳ್ತಂಗಡಿ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಹಿಂದಿ ದಿವಸ ಆಚರಿಸಲಾಯಿತು.

ಮುಖ್ಯ ಅತಿಥಿಗಳಾಗಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ, ಧರ್ಮಸ್ಥಳದ ಹಿಂದಿ ಶಿಕ್ಷಕಿ ಶ್ರೀಮತಿ ಮಮತಾ ಎನ್ ಹೊಳ್ಳ ಆಗಮಿಸಿ, ದೀಪ ಬೆಳಗಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿ ಹಿಂದಿ ದಿವಸದ ಮಹತ್ವ, ಹಿಂದಿ ಭಾಷೆಯನ್ನು ಉಳಿಸಿ ಬೆಳೆಸುವುದು ಅದಕ್ಕೆ ನಮ್ಮೆಲ್ಲರ ಸಹಕಾರ ಮತ್ತು ಶ್ರಮ ಅಗತ್ಯವಿದೆ ಎಂದು ಮಕ್ಕಳನ್ನು ಉದ್ದೇಶಿಸಿ ಮಾತನಾಡಿದರು. ಹಿಂದಿ ಭಾಷಣ, ಹಿಂದಿ ಗೀತ ಗಾಯನ, ಹಿಂದಿ ಕಥೆ ರಚನೆಯ ಸ್ಪರ್ಧೆಯ ವಿಜೇತರಿಗೆ ಬಹುಮಾನ ವಿತರಿಸಲಾಯಿತು.

ಹತ್ತನೇ ತರಗತಿಯ ಯಶಸ್ ಡಿ ನಿರೂಪಿಸಿದರು, 9ನೇ ತರಗತಿಯ ಅನಘ ಸ್ವಾಗತಿಸಿ, ಕುಮಾರಿ ಯಶ್ವಿ ಅತಿಥಿಗಳನ್ನು ಪರಿಚಯಿಸಿ, ಕುಮಾರಿ ಹ್ಯಾಪಿ ವಂದಿಸಿದರು. ಶಾಲಾ ಮುಖ್ಯೋಪಾಧ್ಯಾಯಿನಿ ಹೇಮಲತಾ ಎಂ ಆರ್ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ಹಿಂದಿ ಶಿಕ್ಷಕಿಯರಾದ ಮೆನಿತ ಕೆಎಂ ಮತ್ತು ಮಂಜುನಾಥ್ ರೂಪುಗೊಳಿಸಿದ ಕಾರ್ಯಕ್ರಮದಲ್ಲಿ ಶಿಕ್ಷಕಿ ಸುಮಲತರವರು ತಮ್ಮ ಸಹಕಾರವನ್ನು ನೀಡಿದರು.

ಕಾರ್ಯಕ್ರಮದಲ್ಲಿ ಹಿಂದಿ ಭಾಷೆಯಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು.

Related posts

ಅಳದಂಗಡಿಯಲ್ಲಿ ಮಕ್ಕಳಿಂದ ಶ್ರೀ ಕೃಷ್ಣ ಲೀಲಾಮೃತ ಯಕ್ಷಗಾನ

Suddi Udaya

ರೆಖ್ಯ ,ಕಳೆಂಜ, ಕೊಕ್ಕಡ, ಶಿಶಿಲ ರಸ್ತೆಗಳಲ್ಲಿ ಶೌರ್ಯ ವಿಪತ್ತು ನಿರ್ವಹಣಾ ತಂಡದಿಂದ ವೇಗ ನಿಯಂತ್ರಕ ಉಬ್ಬುಗಳಿಗೆ ಬಣ್ಣ ಬಳಿಯುವ ಕಾರ್ಯ

Suddi Udaya

ಕು| ಸೌಜನ್ಯಳಿಗೆ ನ್ಯಾಯ ಸಿಗಬೇಕು ಎಂಬುದು ನಮ್ಮೆಲ್ಲರ ಆಗ್ರಹ: ಶ್ರೀ ಕ್ಷೇತ್ರ ಧರ್ಮಸ್ಥಳ ಹಾಗೂ ಖಾವಂದರಿಗೆ ಕಳಂಕ ಹಚ್ಚುವುದನ್ನು ನಾವು ಖಂಡಿಸುತ್ತೇವೆ: ಧರ್ಮಸ್ಥಳ ಪೊಲೀಸ್ ಠಾಣೆ ಹಾಗೂ ಗ್ರಾಮ ಪಂಚಾಯತ್‌ಗೆ ಗ್ರಾಮಸ್ಥರಿಂದ ಮನವಿ

Suddi Udaya

ಬೆಳ್ತಂಗಡಿ ತಾಲೂಕಿನಲ್ಲಿ ನೈತಿಕ ಪೊಲೀಸ್ ಗಿರಿ: ಸೂಕ್ತ ಕ್ರಮಕ್ಕೆ ಆಗ್ರಹಿಸಿ ಎಸ್‌ವೈಎಸ್ ಬೆಳ್ತಂಗಡಿ ಝೋನ್ ನಿಂದ ವೃತ ನಿರೀಕ್ಷಕರಿಗೆ ಮನವಿ

Suddi Udaya

ಮೇಲಂತಬೆಟ್ಟು: 13ನೇ ವರ್ಷದ ಸಾರ್ವಜನಿಕ ಗಣೇಶೋತ್ಸವ ಆಚರಣೆ

Suddi Udaya

ಪೆರಾಲ್ದರಕಟ್ಟೆ ಮಸ್ಜಿದ್‌ನಲ್ಲಿ ಮಾದಕ ವ್ಯಸನ ಮತ್ತು ಮದುವೆ ಅನಾಚಾರ ಸಾಮಾಜಿಕ ಪಿಡುಗಿನ ವಿರುದ್ಧ ಜಾಗೃತಿ ಸಭೆ

Suddi Udaya
error: Content is protected !!