April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮಡಂತ್ಯಾರು: ವರ್ತಕ ಬಂಧು ಸಹಕಾರಿ ಸಂಘದ ವಾರ್ಷಿಕ ಮಹಾಸಭೆ

ಮಡಂತ್ಯಾರು : ಮಡಂತ್ಯಾರಿನಲ್ಲಿ ವರ್ತಕರಿಂದ ವರ್ತಕರಿಗಾಗಿ ವರ್ತಕರೇ ನಡೆಸಲ್ಪಡುವ ವರ್ತಕ ಬಂಧು ಸಹಕಾರಿ ಸಂಘದ ಮಹಾಸಭೆ ಮಡಂತ್ಯಾರು ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಸೆ.22 ರಂದು ನಡೆಯಿತು.

224 ಸದಸ್ಯರು ಹಾಜರಿದ್ದು ಸಂಘದ ಅಧ್ಯಕ್ಷ ಜಯಂತ ಶೆಟ್ಟಿ ಬಿ ಅಧ್ಯಕ್ಷತೆ ವಹಿಸಿದ್ದರು. ಕಳೆದ ವರ್ಷ ಜುಲೈ 9 ರಂದು ನೂತನವಾಗಿ ಉದ್ಘಾಟನೆಗೊಂಡ ಸಂಘ 8 ತಿಂಗಳ ವಾರ್ಷಿಕ ವರದಿಯನ್ನು ಮತ್ತು ಲೆಕ್ಕ ಪತ್ರವನ್ನು ಸೇರಿರುವ ಸಭೆಯಲ್ಲಿ ಸವಿಸ್ತಾರವಾಗಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾದ ಡೆಲ್ಸನ್ ಮೋನಿಸ್ ಮಂಡಿಸಿದರು. ಕಡಿಮೆ ಅವಧಿಯಲ್ಲಿ 28 ಕೋಟಿ ವ್ಯವಹಾರವನ್ನು ಮಾಡಿದ ಈ ಸಂಘದ ಅಭೂತಪೂರ್ವ ಕಾರ್ಯವೈಖರಿಯನ್ನು ಸೇರಿರುವ ಎಲ್ಲಾ ಸದಸ್ಯರು ಪ್ರಶಂಸಿದರು. ಮುಖ್ಯ ಸಲಹೆಗಾರರಾದ ಸಹಕಾರಿ ಧುರೀಣ ಮೋನಪ್ಪ ಪೂಜಾರಿ ಕಂಡೆತ್ಯಾರು ಸಂಘದ ಕಾರ್ಯ ವೈಖರಿಯನ್ನು ಅಭಿನಂದಿಸಿ ಶುಭ ಹಾರೈಸಿದರು.

ಮಹಾಸಭೆಯಲ್ಲಿ ಕೆಲವೊಂದು ಅತ್ಯಮೂಲ್ಯ ನಿರ್ಣಯಗಳನ್ನು ತೆಗೆದುಕೊಳ್ಳಲಾಯಿತು. ಸಭಾಧ್ಯಕ್ಷ ಸ್ಥಾನದಿಂದ ಜಯಂತ ಶೆಟ್ಟಿಯವರು ಸಮಯೋಚಿತವಾಗಿ ಮಾತನಾಡಿ ಮುಂದಿನ ದಿನಗಳಲ್ಲಿ ಎಲ್ಲರ ಸಹಕಾರವನ್ನು ಯಾಚಿಸಿದರು. ಸಂಘದ ಎಲ್ಲಾ ನಿರ್ದೇಶಕರು ಮುಖ್ಯ ಸಲಹೆಗಾರರು ಗೌರವ ಸಲಹೆಗಾರರು ವೇದಿಕೆಯ ಮೇಲೆ ಉಪಸ್ಥಿತರಿದ್ದರು.ನಿರ್ದೇಶಕರಾದ ಉದಯ್ ಕುಮಾರ್ ಜೈನ್ ಸ್ವಾಗತಿಸಿ ಉಪಾಧ್ಯಕ್ಷರಾದ ಯೋಗೀಶ್ ಪೂಜಾರಿ ಕಡ್ತಿಲ ವಂದಿಸಿದರು. ನಿರ್ದೇಶಕ ತುಳಸಿದಾಸ್ ಪೈ ಕಾರ್ಯಕ್ರಮ ನಿರೂಪಿಸಿದರು.

Related posts

ಉಜಿರೆ ಶ್ರೀ ಧ.ಮಂ. ಪ.ಪೂ. ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವತಿಯಿಂದ ಜಾಗೃತಿ ಸಪ್ತಾಹ

Suddi Udaya

ಬೆಳ್ತಂಗಡಿ: ಮಾಜಿ ಸೈನಿಕರ ಸಂಘದ ವತಿಯಿಂದ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ನಾರಾವಿ: ಸಂತ ಅಂತೋನಿ ಪ.ಪೂ. ಕಾಲೇಜಿನ ಪ್ರಥಮ ಪ.ಪೂ. ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ಮತ್ತು ಸ್ವಾಗತ ಕಾರ್ಯಕ್ರಮ

Suddi Udaya

ಸುಲ್ಕೇರಿ ಮಹಮ್ಮಾಯಿ ಸ್ಪೋರ್ಟ್ಸ್ ಕ್ಲಬ್ ಭಂಡಾರಿಗೋಳಿ ವತಿಯಿಂದ ಆರ್ಥಿಕ ಧನ ಸಹಾಯ ಹಾಗೂ ಅಕ್ಕಿ ವಿತರಣೆ

Suddi Udaya

ಬೆಳ್ತಂಗಡಿ ಮುಳಿಯ ಜುವೆಲ್ಸ್ ನಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಕೃಷ್ಣ ವೇಷ ಸ್ಪರ್ಧೆ

Suddi Udaya

ಶಾಸಕ ಹರೀಶ್ ಪೂಂಜರ ವಿರುದ್ಧ ಬೆಳ್ತಂಗಡಿ ಪೊಲೀಸರು ಕ್ರಿಮಿನಲ್ ಪ್ರಕರಣಗಳನ್ನು ದಾಖಲಿಸಿ, ಕಾನೂನು ಪ್ರಕಾರ ಯಾವುದೇ ನೋಟೀಸನ್ನು ನೀಡದೆ ಬಂಧನಕ್ಕೆ ಮುಂದಾಗಿರುವುದಕ್ಕೆ ಬೆಳ್ತಂಗಡಿ ವಕೀಲರ ಸಂಘದಿಂದ ತೀವ್ರ ಖಂಡನೆ

Suddi Udaya
error: Content is protected !!